ಪಾಕ್ ಗೆ ಅಮೆರಿಕ ನಿರ್ಬಂಧ ವಿಚಾರ ಸ್ವಾಗತಿಸಿದ ಇಮ್ರಾನ್ ಖಾನ್
ಡೊನಾಲ್ಡ್ ಟ್ರಂಪ್ ಅವರ ನಿರ್ಧಾರದಿಂದ ಪಾಕಿಸ್ತಾನದ ಬುದ್ಧಿಜೀವಿಗಳು ಸ್ವದೇಶದಲ್ಲೇ ಉಳಿಯುವಂತಾಗಲಿದೆ ಎಂಬುದು ಖಾನ್ ಆಲೋಚನೆ
ಕರಾಚಿ, ಜನವರಿ 30: ಈಗಾಗಲೇ ಏಳು ಮುಸ್ಲಿಂ ರಾಷ್ಟ್ರಗಳ ಪ್ರಜೆಗಳು ಅಮೆರಿಕ ಪ್ರವೇಶಿಸುವುದನ್ನು ದುಸ್ತರಗೊಳಿಸಿರುವ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶೀಘ್ರದಲ್ಲೇ ಆ ನಿರ್ಬಂಧವನ್ನು ಪಾಕಿಸ್ತಾನಕ್ಕೂ ಅನ್ವಯಿಸಿದರೆ ಅದು ಸ್ವಾಗತಾರ್ಹ ಎಂದು ಪಾಕಿಸ್ತಾನದ ರಾಜಕೀಯ ಧುರೀಣ ಇಮ್ರಾನ್ ಖಾನ್ ತಿಳಿಸಿದ್ದಾರೆ.
ಶನಿವಾರ ತಮ್ಮ ಪಕ್ಷವಾದ ತೆಹ್ರೀಕ್ ಎ ಇನ್ಸಾಫ್ (ಪಿಟಿಐ) ಪಕ್ಷದ ಸಮಾವೇಶದಲ್ಲಿ ಮಾತನಾಡಿದ ಅವರು, ಪಾಕಿಸ್ತಾನದ ಅನೇಕ ಬುದ್ಧಿಜೀವಿಗಳು, ತಂತ್ರಜ್ಞರು ಹಾಗೂ ಇತರ ವಿದ್ಯಾವಂತರು ಉತ್ತಮ ಉದ್ಯೋಗಗಳನ್ನು ಅರಸಿ ಅಮೆರಿಕದ ಕಡೆಗೆ ವಲಸೆ ಹೋಗುತ್ತಾರೆ. ಟ್ರಂಪ್ ಅವರು ಪಾಕಿಸ್ತಾನದ ಪ್ರಜೆಗಳಿಗೆ ನಿರ್ಬಂಧ ವಿಧಿಸಿದಲ್ಲಿ ಆ ಬುದ್ಧಿವಂತ ಪಾಕ್ ಪ್ರಜೆಗಳು ನಮ್ಮಲ್ಲೇ ಉಳಿಯುತ್ತಾರೆ. ಇದರಿಂದ ನಮ್ಮ ದೇಶಕ್ಕೇ ಅನುಕೂಲ'' ಎಂದು ಹೇಳಿದ್ದಾರೆ.[ಪಾಕ್ ವಲಸಿಗರಿಗೆ ಯುಎಸ್ ನಿಂದ ನಿಷೇಧ: ಭಾರತ ಸ್ವಾಗತ]

ಈಗಾಗಲೇ ಪಾಕಿಸ್ತಾನವು ಹಲವಾರು ಸಮಸ್ಯೆಗಳಿಂದ ನರಳುತ್ತಿದೆ. ಇವೆಲ್ಲವನ್ನೂ ಪ್ರಜೆಗಳು ಇಲ್ಲೇ ಖುದ್ದಾಗಿ ನೆಲೆನಿಂತು ನಿವಾರಿಸಬೇಕಿದೆ. ಹಾಗಾಗಿ, ವಿದ್ಯಾವಂತರು ದೇಶ ಬಿಟ್ಟು ಹೋಗಬಾರದು ಎಂದು ಆಶಿಸುತ್ತೇನೆ ಎಂದಿದ್ದಾರೆ.
ಇದೇ ವೇಳೆ, ದೇಶದಲ್ಲಿನ ಅರಾಜಕತೆ, ಭ್ರಷ್ಟಾಚಾರದ ವಿರುದ್ಧ ದನಿಯೆತ್ತಿದ ಅವರು, ದೇಶದಲ್ಲಿನ ಕೆಟ್ಟ ವಾತಾವರಣಕ್ಕೆ ಪ್ರಧಾನಿ ನವಾಜ್ ಶರೀಫ್ ಅವರ ದುರಾಡಳಿತವೇ ಕಾರಣವೆಂದು ದೂಷಿಸಿದರು.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ












Click it and Unblock the Notifications