ಚಿತ್ರಸುದ್ದಿ : ಏಕೋ ಈ ಕೋಪ ಶಂಕರ, ಶಿವಶಂಕರ
ಕಠ್ಮಂಡು, ಏ. 25 : ಭೂಮಿತಾಯಿಗೆ ಅದೇನು ಮುನಿಸು ಬಂದಿತ್ತೋ... ಅಥವಾ ಹಿಮಾಲಯವಾಸಿ ಶಿವನೇ ರುದ್ರತಾಂಡವ ಆರಂಭಿಸಿದನೋ... ನೇಪಾಳದ ಭೂಮಿಯಾಳದಲ್ಲಿ ಮೈಯನ್ನು ನಡುಗಿಸಿದ್ದಕ್ಕೆ ಸಾವಿರಾರು ಕಟ್ಟಡಗಳು ನೆಲಸಮವಾಗಿವೆ, ನೂರಾರು ಜೀವಗಳು ಬಲಿಯಾಗಿವೆ, ಹಿಮಾಲಯದ ತಪ್ಪಲಲ್ಲಿ ಅಲ್ಲೋಲಕಲ್ಲೋಲ ಸೃಷ್ಟಿಯಾಗಿದೆ.
ನೇಪಾಳದಲ್ಲಿ ನೂರಾರು ಐತಿಹಾಸಿಕ ದೇಗುಲಗಳು, ಕಟ್ಟಡಗಳು ಉರುಳಿವೆ, ಅವುಗಳಡಿಯಲ್ಲಿ ಸಾವಿರಾರು ಜನರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಪ್ರವಾಸಕ್ಕೆಂದು ತೆರಳಿದ್ದ 85ಕ್ಕೂ ಹೆಚ್ಚು ಕನ್ನಡಿಗರು ಕೂಡ ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದಾರೆ. [ನೇಪಾಳದಲ್ಲಿ ಕನ್ನಡಿಗರು ಸಂಕಷ್ಟದಲ್ಲಿ]
ಭೂಕಂಪನ ನೇಪಾಳದಲ್ಲಿ ಮಾತ್ರವಲ್ಲ, ಭಾರತದಲ್ಲಿಯೂ ಸಂಭವಿಸಿದೆ. ಉತ್ತರಪ್ರದೇಶ, ಪಶ್ಚಿಮ ಬಂಗಾಳ, ಬಿಹಾರ, ಸಿಕ್ಕಿಂ, ದೆಹಲಿಗಳಲ್ಲಿ ಕಟ್ಟಡಗಳು ಬಿರುಕು ಬಿಟ್ಟಿವೆ, ಹಲವಾರು ಮನೆಗಳು ಧರೆಗುರುಳಿವೆ. ಇದರ ಪರಿಣಾಮ ಇಪ್ಪತ್ತಕ್ಕೂ ಹೆಚ್ಚು ಜನರು ಬಲಿಯಾದ ವರದಿ ಬಂದಿದೆ. [ನೇಪಾಳ, ಭಾರತ ಭೂಕಂಪ ಪೀಡಿತರಿಗೆ ಸಹಾಯವಾಣಿ]
ಈ ನಡುವೆ, ನೇಪಾಳದ ರಾಜಧಾನಿ ಹೆಚ್ಚು ಹಾನಿಗೊಳಗಾಗಿದ್ದು, ರಸ್ತೆರಸ್ತೆಗಳಲ್ಲಿಯೇ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಕಟ್ಟಡಗಳು ನಾಮಾವಶೇಷವಾಗಿದ್ದು, ಗಾಯಾಳುಗಳು ನೋವಿನಿಂದ ಚೀತ್ಕರಿಸುತ್ತಿರುವ ಚಿತ್ರಗಳು ನಿಜಕ್ಕೂ ಭೀತಿ ಹುಟ್ಟಿಸುವಂತಿವೆ. [ಭೂಕಂಪದ ಟ್ವಿಟ್ಟರ್ ಚಿತ್ರಗಳು] [ಪಿಟಿಐ ಚಿತ್ರಗಳು]

ಗಾಯಾಳುಗಳಿಗೆ ರಸ್ತೆಯಲ್ಲಿಯೇ ಚಿಕಿತ್ಸೆ
ಕಟ್ಟಡಗಳ ಅವಶೇಷಗಳಡಿಯಲ್ಲಿ ಸಿಲುಕಿದ್ದರೂ ಪಾರಾದ ಗಾಯಾಳುಗಳಿಗೆ ರಸ್ತೆರಸ್ತೆಯಲ್ಲಿಯೇ ತ್ವರಿತ ಚಿಕಿತ್ಸೆ ನೀಡಲಾಗುತ್ತಿದೆ.

ಆತಂಕದಿಂದ ಓಡೋಡಿ ಬಂದ ಉದ್ಯೋಗಿಗಳು
ಇದು ಕೋಲ್ಕತಾದ ದೃಶ್ಯ. ಪ್ರಬಲ ಭೂಕಂಪನ ಸಂಭವಿಸುತ್ತಿದ್ದಂತೆ ಉದ್ಯೋಗಿಗಳು ಹೊರಗೆ ಓಡೋಡಿ ಬಂದಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಒಟ್ಟು ಐವರು ಮೃತಪಟ್ಟಿರುವ ಸುದ್ದಿ ಬಂದಿದೆ.

ಜೀವ ಉಳಿದರೆ ಸಾಕಪ್ಪಾ ಸಾಕು
ನೇಪಾಳದಲ್ಲಿ ಭೂಕಂಪದ ಕೇಂದ್ರಬಿಂದುವಿದ್ದರೂ ಭಾರತದ ಅನೇಕ ರಾಜ್ಯಗಳಲ್ಲಿ ಭೂಮಿ ಪ್ರಬಲವಾಗಿ ಕಂಪಿಸಿದೆ. ಕೋಲ್ಕತಾದಲ್ಲಿ ಜನರು ಆತಂಕದಿಂದ ನೋಡುತ್ತಿರುವ ದೃಶ್ಯ.

ರಸ್ತೆಗಳಲ್ಲಿ ನರಳಾಟದ ಕರುಣಾಜನಕ ದೃಶ್ಯ
ನೇಪಾಳದಲ್ಲಿ ಸಂಜೆ 4ರ ಹೊತ್ತಿಗೆ 150ಕ್ಕೂ ಹೆಚ್ಚು ಜನರು ಸತ್ತ ವರದಿ ಬಂದಿದೆ. ಕಠ್ಮಂಡುವಿನ ಆಸ್ಪತ್ರೆಗಳು ಗಾಯಾಳುಗಳಿಂದ ತುಂಬಿ ತುಳುಕುತ್ತಿವೆ. ಉಳಿದವರಿಗೆ ರಸ್ತೆಯಲ್ಲೇ ಪ್ರಾಥಮಿಕ ಚಿಕಿತ್ಸೆ.

ಎರಡು ನಿಮಿಷ ಸತತ ನಡುಗಿದ ಭೂಮಿ
ಕಠ್ಮಂಡುವಿನ ಎಲ್ಲೆಡೆಯಲ್ಲಿ ಇದೇ ದೃಶ್ಯ. ರಸ್ತೆಗಳು ಸಂಪೂರ್ಣ ಹಾಳಾಗಿವೆ. ಇದೆಲ್ಲ ಸರಿಹೋಗಲು ಇನ್ನೆಷ್ಟು ವರ್ಷಗಳು ಬೇಕೋ?

ಮತ್ತೆ ಮತ್ತೆ ಕಂಪಿಸುತ್ತಿರುವ ಭೂಮಿ
ಪ್ರಬಲ ಭೂಕಂಪ ಸಂಭವಿಸಿದ ನಂತರ ಹಲವಾರು ಮತ್ತೆ ಭೂಮಿ ಕಂಪಿಸಿದೆ. ರಸ್ತೆ ಸಂಚಾರ ಸಂಪೂರ್ಣ ತಾಳತಪ್ಪಿದೆ. ಜನಜೀವನ ನಿಂತ ನೀರಾಗಿದೆ.

ಜಾರಬಂಡಿಯಾಗಿರುವ ಕಠ್ಮಂಡು ರಸ್ತೆಗಳು
ಶತಮಾನದ ಭೀಕರ ಭೂಕಂಪ ನೇಪಾಳದಲ್ಲಿ ಅಲ್ಲೋಲಕಲ್ಲೋಲ ಸೃಷ್ಟಿಸಿದೆ. ರಸ್ತೆಗಳು ಅಗಲವಾಗಿ ಬಾಯಿ ತೆರೆದುಕೊಂಡಿರುವುದು ಈ ಭೀಕರತೆಗೆ ಕನ್ನಡಿ ಹಿಡಿದಿವೆ.

ನೇಪಾಳದಲ್ಲಿ ನಷ್ಟ ಅಸದಳ
ಪ್ರಾಣಹಾನಿ ಮಾತ್ರವಲ್ಲ ಆಸ್ತಿಪಾಸ್ತಿಗೆ ನೇಪಾಳದಲ್ಲಿ ಭಾರೀ ಹಾನಿ ಸಂಭವಿಸಿದೆ. ಒಟ್ಟಾರೆ ನಷ್ಟವೆಷ್ಟು? ಲೆಕ್ಕ ಹಾಕಲು ಇನ್ನೂ ಸಮಯ ಬೇಕು.

ಪ್ರಕೃತಿ ವಿಕೋಪಕ್ಕೆ ಎಣೆಯುಂಟೆ?
ನೇಪಾಳದಲ್ಲಿ ಜನಜೀವನ ಸ್ಥಬ್ದವಾಗಿದೆ. ವಾಹನ ಸಂಚಾರ ನಿಂತುಹೋಗಿದೆ. ವಿಮಾನಗಳು ಹಾರಾಟ ನಿಲ್ಲಿಸಿವೆ. ಏಕೋ ಈ ಕೋಪ ಶಂಕರ?

ಬದುಕಿದೆಯಾ ಬಡಜೀವವೆ
ನೇಪಾಳಕ್ಕೆ ಭಾರತವೂ ಸಹಾಯಹಸ್ತ ಚಾಚಿದೆ. ಎಲ್ಲಕ್ಕಿಂತ ಹೆಚ್ಚಾಗಿ ಅಮೆರಿಕಾದಿಂದ, ಇತರ ಬಲಿಷ್ಠ ರಾಷ್ಟ್ರಗಳಿಂದ ನೆರವು ಬರಬೇಕಿದೆ.
-
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ












Click it and Unblock the Notifications