ರಷ್ಯಾದಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್
ನವದೆಹಲಿ, ಆಗಸ್ಟ್ 19: ರಷ್ಯಾಗೆ ಭೇಟಿ ನೀಡಿರುವ ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ದ್ವಿಪಕ್ಷೀಯ ಭದ್ರತಾ ಸಹಕಾರಕ್ಕೆ ಸಂಬಂಧಿಸಿದಂತೆ ರಷ್ಯಾದ ಸಹವರ್ತಿ ನಿಕೊಲಾಯ್ ಪಟ್ರಶೆವ್ ಜೊತೆ ಚರ್ಚಿಸಿದ್ದಾರೆ.
ಕಳೆದ ಫೆಬ್ರವರಿ ತಿಂಗಳಿನಲ್ಲಿ ಉಕ್ರೇನ್ ವಿರುದ್ಧ ರಷ್ಯಾ ಯುದ್ಧ ಪ್ರಾರಂಭವಾಗಿದೆ. ಈ ಬೆಳವಣಿಗೆ ನಂತರ ಮೊದಲ ಬಾರಿಗೆ ಅಜಿತ್ ದೋವಲ್ ಮತ್ತು ಪಟ್ರಶೆವ್ ಮುಖಾಮುಖಿ ಭೇಟಿ ಆಗಿದ್ದಾರೆ. ಈ ವೇಳೆ ಅಫ್ಘಾನಿಸ್ತಾನ ಸೇರಿದಂತೆ ಪ್ರಾದೇಶಿಕ ಭದ್ರತಾ ಪರಿಸ್ಥಿತಿಯು ಚರ್ಚೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.
ಅಜಿತ್ ದೋವಲ್ ಭೇಟಿ ಅಥವಾ ಭೇಟಿಯ ಕುರಿತು ಭಾರತದಿಂದ ಯಾವುದೇ ಅಧಿಕೃತ ಪ್ರಕಟಣೆ ಹೊರ ಬಂದಿಲ್ಲ. ರಷ್ಯಾದ ಭದ್ರತಾ ಮಂಡಳಿಯ ಕಾರ್ಯದರ್ಶಿ ಪಟ್ರಶೆವ್ ಮತ್ತು ದೋವಲ್ ಅವರು "ಭದ್ರತಾ ಕ್ಷೇತ್ರದಲ್ಲಿ ದ್ವಿಪಕ್ಷೀಯ ಸಹಕಾರ, ಸಮಸ್ಯೆಗಳು ಮತ್ತು ಪ್ರಾದೇಶಿಕ ಮತ್ತು ಅಂತಾರಾಷ್ಟ್ರೀಯ ಕಾರ್ಯಸೂಚಿಯಲ್ಲಿನ ಸಾಮಾಜಿಕ ಸಮಸ್ಯೆಗಳ ಕುರಿತು ಚರ್ಚಿಸಿದ್ದಾರೆ'' ಎಂದು ರಷ್ಯಾ ತಿಳಿಸಿದೆ.

ದ್ವಿಪಕ್ಷೀಯ ಚರ್ಚೆಗೆ ಹಸಿರು ನಿಶಾನೆ:
"ರಷ್ಯಾ-ಭಾರತದ ನಡುವಿನ ವಿಶೇಷ ಕಾರ್ಯತಂತ್ರದ ಪಾಲುದಾರಿಕೆಯ ಪ್ರಗತಿಪರ ಅಭಿವೃದ್ಧಿಗೆ ಒತ್ತು ನೀಡಬೇಕಾಗಿದೆ. ಈ ನಿಟ್ಟಿನಲ್ಲಿ ಉಭಯ ದೇಶಗಳ ಭದ್ರತಾ ಮಂಡಳಿಗಳ ನಡುವಿನ ಸಂವಾದ ಮುಂದುವರಿಸಲು ಗ್ರೀನ್ ಸಿಗ್ನಲ್ ಕೊಟ್ಟಿರುವ ಬಗ್ಗೆ ಉಲ್ಲೇಖಿಸಲಾಗಿದೆ.
ಪಾಶ್ಚಿಮಾತ್ಯ ದೇಶಗಳ ವಿರೋಧದ ಹೊರತಾಗಿಯೂ ರಿಯಾಯಿತಿ ದರದ ರಷ್ಯಾದ ಸರಕುಗಳನ್ನು, ಪ್ರಾಥಮಿಕವಾಗಿ ಕಚ್ಚಾ ತೈಲವನ್ನು ಖರೀದಿಸಲು ಭಾರತ ನಿರ್ಧರಿಸಿದ ಹಿನ್ನೆಲೆ ಅಜಿತ್ ದೋವಲ್ ಭೇಟಿಯು ಮಹತ್ವ ಪಡೆದುಕೊಂಡಿದೆ. ಉಜ್ಬೇಕಿಸ್ತಾನ್ನಲ್ಲಿ ಶಾಂಘೈ ಸಹಕಾರ ಸಂಘಟನೆಯ ಸದಸ್ಯ ರಾಷ್ಟ್ರಗಳ ಹಿರಿಯ ಭದ್ರತಾ ಅಧಿಕಾರಿಗಳ ಎರಡು ದಿನಗಳ ಸಭೆಗೆ ಒಂದು ದಿನ ಮುಂಚಿತವಾಗಿ ನಡೆಸಲಾಗುತ್ತಿದೆ.
-
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ












Click it and Unblock the Notifications