ಚೀನಾಕ್ಕೆ ರಫ್ತಾಗಲಿದೆ ಭಾರತದ ಅಕ್ಕಿ: ಎರಡು ಒಪ್ಪಂದಗಳಿಗೆ ಸಹಿ
ಶಾಂಡೋಂಗ್, ಜೂನ್ 9: ಬ್ರಹ್ಮಪುತ್ರ ನದಿ ನೀರು ಮಾಹಿತಿ ಪೂರೈಕೆ ಮತ್ತು ಭಾರತದಿಂದ ಚೀನಾಕ್ಕೆ ಅಕ್ಕಿ ರಫ್ತು ಸಂಬಂಧ ಭಾರತ ಹಾಗೂ ಚೀನಾಗಳು ಮಹತ್ವದ ದ್ವಿಪಕ್ಷೀಯ ಒಪ್ಪಂದಕ್ಕೆ ಸಹಿ ಹಾಕಿದವು.
ಪ್ರಧಾನಿ ನರೇಂದ್ರ ಮೋದಿ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಸಮ್ಮುಖದಲ್ಲಿ ನಡೆದ ನಿಯೋಗ ಮಟ್ಟದ ಮಾತುಕತೆ ನಂತರ ಒಪ್ಪಂದಗಳಿಗೆ ಸಹಿ ಹಾಕಲಾಯಿತು.
ಪ್ರವಾಹ ಸಂದರ್ಭಗಳಲ್ಲಿ ಬ್ರಹ್ಮಪುತ್ರ ನದಿ ನೀರಿನ ಮಟ್ಟದ ಬಗ್ಗೆ ಚೀನಾವು ಭಾರತಕ್ಕೆ ಮಾಹಿತಿ ನೀಡುವ ಮೊದಲ ಒಪ್ಪಂದಕ್ಕೆ ಚೀನಾ ಜಲಸಂಪನ್ಮೂಲ ಸಚಿವಾಲಯ ಮತ್ತು ಭಾರತದ ಜಲಸಂಪನ್ಮೂಲ, ನದಿ ಅಭಿವೃದ್ಧಿ ಮತ್ತು ಗಂಗಾ ಪುನಶ್ಚೇತನ ಸಚಿವಾಲಯಗಳು ಸಹಿ ಹಾಕಿದವು.

ಬಾಸ್ಮತಿಯೇತರ ವಿವಿಧ ಬಗೆಯ ಅಕ್ಕಿಗಳನ್ನು ಭಾರತದಿಂದ ಚೀನಾಕ್ಕೆ ರಫ್ತು ಮಾಡುವ ಸಂಬಂಧ ಭಾರತದ ಕೃಷಿ, ಸಹಕಾರ ಮತ್ತು ರೈತರ ಕಲ್ಯಾಣ ಇಲಾಖೆ ಹಾಗೂ ಚೀನಾದ ಕಸ್ಟಮ್ಸ್ ಆಡಳಿತ ಇಲಾಖೆಗಳ ನಡುವೆ ಒಪ್ಪಂದಕ್ಕೆ ಸಹಿ ಹಾಕಲಾಯಿತು.
ಒಪ್ಪಂದಗಳಿಗೆ ಸಹಿ ಹಾಕಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಉಜ್ಬೇಕಿಸ್ತಾನದ ಅಧ್ಯಕ್ಷ ಶಾವ್ಕತ್ ಮಿರ್ಜಿಯೊಯೆವ್ ಅವರೊಂದಿಗೆ ಮಾತುಕತೆ ನಡೆಸಿದರು.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ












Click it and Unblock the Notifications