India Vs Pakistan: ಭಾರತ & ಪಾಕಿಸ್ತಾನ ಗಡಿಯಲ್ಲಿ ಪರಿಸ್ಥಿತಿ ಈಗಲೂ ಸೂಕ್ಷ್ಮ!
ಬೆಂಕಿ ಹೊತ್ತಿಕೊಂಡಿದೆ, ಭಾರತ & ಪಾಕಿಸ್ತಾನ ಗಡಿಯಲ್ಲಿ ಅಕ್ಷರಶಃ ಕಾಡ್ಗಿಚ್ಚು ಧಗಧಗಿಸುತ್ತಾ ಇದೆ. ಒಂದು ಕಡೆ ಪಹಲ್ಗಾಮ್ ಉಗ್ರರ ದಾಳಿ ಘಟನೆ ಪರಿಸ್ಥಿತಿಯನ್ನ ಸೂಕ್ಷ್ಮಗೊಳಿಸಿದ್ದರೆ, ಈ ಘಟನೆ ನಂತರ ಭಾರತ ಕೈಗೊಂಡಿರುವ ಕ್ರಮಗಳು ಪಾಕಿಸ್ತಾನದ ಬುಡ ಅಲುಗಾಡಿಸಿದೆ. ಇದೇ ಪರಿಸ್ಥಿತಿಯಲ್ಲಿ ಭಾರತ & ಪಾಕಿಸ್ತಾನ ಸಂಬಂಧ ಕೂಡ ಹಾಳಾಗಿ ಹೋಗಿದ್ದು, ದಿನದಿನಕ್ಕೂ ಎರಡೂ ದೇಶಗಳ ಶತ್ರುತ್ವ ಇನ್ನಷ್ಟು ಹೆಚ್ಚಾಗುತ್ತಿದೆ. ಇದೇ ಸಮಯದಲ್ಲಿ, ಗಡಿ ಭಾಗದಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡವಾಗಿದೆ.
ಉಗ್ರರನ್ನು ಸದಾ ಪೋಷಣೆ ಮಾಡುವ, ಉಗ್ರರ ಪರವಾಗಿ ನಿಲ್ಲುವ ಪಾಕಿಸ್ತಾನ ಬದಲಾಗಲ್ಲ ಅನ್ನೋದು ಮತ್ತೆ ಮತ್ತೆ ಪ್ರೂವ್ ಆಗುತ್ತಲೇ ಇದೆ. ಭಾರತ & ಪಾಕಿಸ್ತಾನ ನಡುವಿನ ಬಡಿದಾಟ ನಿಲ್ಲುವ ಲಕ್ಷಣ ಕಾಣುತ್ತಿಲ್ಲ. ಇದು ಹೀಗೆ ಮುಂದುವರಿದರೆ, ಭವಿಷ್ಯದಲ್ಲಿ ಇನ್ನಷ್ಟು ಕಿಚ್ಚು ಹೊತ್ತಿಕೊಳ್ಳುವುದು ಗ್ಯಾರಂಟಿ. ಭಾರತ ಕೂಡ ಯುದ್ಧಕ್ಕೆ ಸಿದ್ಧವಾಗಿದ್ದು, ಪಾಕಿಸ್ತಾನದಲ್ಲಿನ ಉಗ್ರರಿಗೆ ಸರಿಯಾಗಿ ಬುದ್ಧಿ ಕಲಿಸಲು ಸಜ್ಜಾಗಿದೆ. ಪರಿಸ್ಥಿತಿ ಹೀಗಿದ್ದಾಗಲೇ, ಎರಡೂ ಕಡೆಯ ಸೈನಿಕರು ಗುಂಡಿನ ಮೂಲಕ ಮಾತನಾಡುತ್ತಿದ್ದಾರೆ.

ಪಾಕಿಸ್ತಾನದ ಮೇಲೆ ದಿಢೀರ್ ಅಟ್ಯಾಕ್?
ಹೌದು, ಭಾರತ ಇದೀಗ ಉಗ್ರರ ದಾಳಿಯನ್ನು ತುಂಬಾ ಗಂಭೀರವಾಗಿ ಪರಿಗಣಿಸಿದೆ. ಹೀಗಾಗಿ ಯಾವುದೇ ಕ್ಷಣದಲ್ಲಿ ಕೂಡ ಉಗ್ರರ ದಾಳಿಗೆ ಪ್ರತಿಕಾರ ತೆಗೆದುಕೊಳ್ಳುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಪಾಕಿಸ್ತಾನ ಕೂಡ ಕಿರಿಕ್ ಮಾಡಲು ಸಿದ್ಧವಾಗಿದೆ. ಇದೇ ರೀತಿಯಾಗಿ ಇಬ್ಬರ ನಡುವೆ ಕಿರಿಕ್ ನಡೆಯುತ್ತಿದ್ದರೆ ಮತ್ತೊಂದು ಯುದ್ಧ ಗ್ಯಾರಂಟಿ ಎಂಬುದು ವಿಶ್ವಸಂಸ್ಥೆಗೂ ಗೊತ್ತಾಗಿದೆ. ಈ ಹಿನ್ನೆಲೆಯಲ್ಲಿ ವಿಶ್ವಸಂಸ್ಥೆ ಈಗಾಗಲೇ ಶಾಂತಿ ಕಾಪಾಡುವಂತೆ ಮನವಿಯನ್ನ ಮಾಡಿದೆ.
ಕಿರಿಕ್ ತೆಗೆದ ಪಾಕ್ ರಕ್ಷಣಾ ಸಚಿವ!
ರಷ್ಯಾ ಸರ್ಕಾರಿ ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಈ ರೀತಿ ಹೇಳಿಕೆ ನೀಡಿದ್ದು ಮಾತ್ರವಲ್ಲ, ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಕೂಡ ಅಂತಾರಾಷ್ಟ್ರೀಯ ತನಿಖಾ ತಂಡ ಈ ಬಗ್ಗೆ ತನಿಖೆ ನಡೆಸಬೇಕು ಎಂದಿದ್ದಾರೆ ಅಂತಾ ಇದೀಗ ಖವಾಜಾ ತಿಳಿಸಿರೋದು ಭಾರತದ ಕೋಪವನ್ನ ಮತ್ತಷ್ಟು ಹೆಚ್ಚು ಮಾಡಿದೆ.
ರಷ್ಯಾ, ಚೀನಾ ಇಲ್ಲವೇ ಪಾಶ್ಚಿಮಾತ್ಯ ದೇಶಗಳು ಸಕಾರಾತ್ಮಕ ಪಾತ್ರ ವಹಿಸಬಹುದು ಎಂದಿರುವ ಖವಾಜಾಗೆ ಸರಿಯಾದ ಉತ್ತರವೇ ಸಿಗುವ ನಿರೀಕ್ಷೆ ಇದೆ. ಹಾಗೇ ತನಿಖಾ ತಂಡವನ್ನ ರಚಿಸಿ ಭಾರತ ಅಥವಾ ಮೋದಿ ಸುಳ್ಳು ಹೇಳುತ್ತಿದ್ದಾರೆಯೇ? ಎಂಬುದನ್ನ ಅಂತಾರಾಷ್ಟ್ರೀಯ ತನಿಖೆ ಮೂಲಕ ಕಂಡುಹಿಡಿಯಲು ಸಾಧ್ಯ ಎಂದು ಪಾಕಿಸ್ತಾನ ರಕ್ಷಣಾ ಹೇಳಿಕೆ ನೀಡಿರುವುದು ಕಿಚ್ಚು ಹೊತ್ತಿಸಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications