ನ.7ರಿಂದ ಎರಡು ದಿನ ಪ್ರವಾಸ; ವಿದೇಶಾಂಗ ಸಚಿವ ಜೈಶಂಕರ್ ರಷ್ಯಾ ಭೇಟಿ ರಹಸ್ಯ
ಮಾಸ್ಕೋ, ನವೆಂಬರ್ 4: ರಷ್ಯಾ-ಉಕ್ರೇನ್ ನಡುವಿನ ಯುದ್ಧದ ಕಾರ್ಮೋಡದ ನಡುವೆ ಭಾರತೀಯ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ನವೆಂಬರ್ 7 ರಿಂದ ಎರಡು ದಿನ ರಷ್ಯಾ ಪ್ರವಾಸ ಕೈಗೊಳ್ಳಲಿದ್ದಾರೆ. ನವೆಂಬರ್ 7 ಮತ್ತು 8ರಂದು ರಷ್ಯಾಗೆ ಭೇಟಿ ನೀಡಲಿರುವ ಅವರು, ರಷ್ಯಾದ ಸಹವರ್ತಿ ಸೆರ್ಗೆ ಲಾವ್ರೊವ್ ಜೊತೆಗೆ ಮಾತುಕತೆ ನಡೆಸಲಿದ್ದಾರೆ.
ವಿದೇಶಾಂಗ ಸಚಿವ ಜೈಶಂಕರ್ ಭೇಟಿಯನ್ನು ವಿದೇಶಾಂಗ ವ್ಯವಹಾರಗಳ ಸಚಿವಾಲಯ (ಎಂಇಎ) ಗುರುವಾರ ಸ್ಪಷ್ಟಪಡಿಸಿದೆ. ಮಾಸ್ಕೋಗೆ ಭೇಟಿ ನೀಡಿದಾಗ, ಜೈಶಂಕರ್ ಲಾವ್ರೊವ್ ಜೊತೆಗೆ ದ್ವಿಪಕ್ಷೀಯ, ಪ್ರಾದೇಶಿಕ ಮತ್ತು ಅಂತರರಾಷ್ಟ್ರೀಯ ವಿಷಯಗಳ ಕುರಿತು ಮಾತುಕತೆ ನಡೆಸಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ವಕ್ತಾರ ಅರಿಂದಮ್ ಬಾಗ್ಚಿ ತಿಳಿಸಿದ್ದಾರೆ.
ಕಳೆದ ಕೆಲವು ತಿಂಗಳುಗಳಲ್ಲಿ ಭಾರತ ಮತ್ತು ರಷ್ಯಾ ನಡುವಿನ ವಹಿವಾಟು ಜೋರಾಗಿದೆ. ಹಲವಾರು ಪಾಶ್ಚಿಮಾತ್ಯ ಶಕ್ತಿಗಳಿಂದ ಹೆಚ್ಚುತ್ತಿರುವ ಆತಂಕದ ಹೊರತಾಗಿಯೂ, ಭಾರತವು ರಷ್ಯಾದಿಂದ ರಿಯಾಯಿತಿ ದರದ ಹೆಚ್ಚಿನ ಕಚ್ಚಾ ತೈಲವನ್ನು ಆಮದು ಮಾಡಿಕೊಳ್ಳುತ್ತಿದೆ.

ನಾಲ್ಕು ಬಾರಿ ಜೈಶಂಕರ್-ಲಾವ್ರೊವ್ ಭೇಟಿ:
ಕಳೆದ ಫೆಬ್ರವರಿಯಲ್ಲಿ ಉಕ್ರೇನ್ ಮತ್ತು ರಷ್ಯಾ ನಡುವೆ ಯುದ್ಧ ಪ್ರಾರಂಭವಾದ ದಿನದಿಂದ ಇದುವರೆಗೂ ಭಾರತೀಯ ವಿದೇಶಾಂಗ ಸಚಿವ ಜೈಶಂಕರ್ ಹಾಗೂ ರಷ್ಯಾದ ಸೆರ್ಗೆ ಲಾವ್ರೊವ್ ನಾಲ್ಕು ಬಾರಿ ಭೇಟಿ ಆಗಿದ್ದಾರೆ. ಏಪ್ರಿಲ್ ತಿಂಗಳಿನಲ್ಲಿ ರಷ್ಯಾದ ವಿದೇಶಾಂಗ ಸಚಿವರು ಜೈಶಂಕರ್ ಜೊತೆಗೆ ಸಭೆ ನಡೆಸಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿಯನ್ನೂ ಭೇಟಿ ಮಾಡಿದ್ದರು.
ವಿಶ್ವಸಂಸ್ಥೆಯಲ್ಲಿ ಅಂತರ ಕಾಯ್ದುಕೊಂಡ ಭಾರತ:
ಪಾಶ್ಚಿಮಾತ್ಯ ರಾಷ್ಟ್ರಗಳ ಒತ್ತಡದ ಹೊರತಾಗಿಯೂ ರಷ್ಯಾ ವಿರುದ್ಧದ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಪ್ರಮುಖ ನಿರ್ಣಯಗಳಲ್ಲಿ ಭಾರತವು ಮತದಾನದಿಂದ ದೂರ ಉಳಿಯಿತು. ಕಳೆದ ತಿಂಗಳು ಸಮರ್ಕಂಡ್ನಲ್ಲಿ ನಡೆದ ಶಾಂಘೈ ಸಹಕಾರ ಸಂಘಟನೆ ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿ ಮಾಡಿದ್ದರು. ಈ ಸಭೆಯಲ್ಲಿ "ಇದು ಯುದ್ಧದ ಯುಗವಲ್ಲ" ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ನೀಡಿದ ಹೇಳಿಕೆಯನ್ನು ಅನೇಕ ಪಾಶ್ಚಿಮಾತ್ಯ ರಾಷ್ಟ್ರಗಳು ಸಾರ್ವಜನಿಕ ಬೆಂಬಲಿಸಿದ್ದವು.
ಭಾರತಕ್ಕೆ ಭೇಟಿ ನೀಡಿದ್ದ ಪುಟಿನ್:
ಕಳೆದ ವರ್ಷ ಡಿಸೆಂಬರ್ ತಿಂಗಳಿನಲ್ಲಿ ನಡೆದ ಭಾರತ-ರಷ್ಯಾ ವಾರ್ಷಿಕ ಸಮ್ಮೇಳನದ ಅಂಗವಾಗಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭಾರತಕ್ಕೆ ಭೇಟಿ ನೀಡಿದ್ದರು.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications