ಇಸ್ರೇಲ್-ಭಾರತದ ನಡುವೆ 7 ಮಹತ್ವದ ಒಪ್ಪಂದಗಳ ವಿನಿಮಯ
ಟೆಲ್ ಅವಿವ್, ಜುಲೈ 5: ಭಾರತ ಮತ್ತು ಇಸ್ರೇಲ್ ಬುಧವಾರ 7 ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಿವೆ. ಸಣ್ಣ ಉಪಗ್ರಹಗಳಿಗೆ ಬೇಕಾದ ಎಲೆಕ್ಟ್ರಿಕ್ ಪ್ರೊಪಲ್ಶನ್ ಹಾಗೂ ನೀರಿನ ಸದ್ಬಳಕೆಯ ಸುಧಾರಣೆ ಅಂಶಗಳೂ ಇದರಲ್ಲಿ ಸೇರಿವೆ.
ಭಾರತ ಮತ್ತು ಇಸ್ರೇಲಿನ ಸಂಬಂಧವನ್ನು 'ಐತಿಹಾಸಿಕ' ಎಂದು ಬಣ್ಣಿಸಿದ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು, "ಇದು ಸ್ವರ್ಗದಲ್ಲೇ ನಡೆದ ಮದುವೆ. ಆದರೆ, ನಾವಿದನ್ನು ಭೂಮಿಯಲ್ಲಿ ಕಾರ್ಯರೂಪಕ್ಕಿಳಿಸುತ್ತಿದ್ದೇವೆ," ಎಂದು ಹೇಳಿದರು.
"ಭಯೋತ್ಪಾದಕರಿಂದ ನಾವು ಸವಾಲು ಎದುರಿಸಿದವರು. ನಾವು ಈ ವಿಷಯದಲ್ಲಿ ಪರಸ್ಪರ ಸಹಕಾರಕ್ಕೆ ಒಪ್ಪಿಕೊಂಡಿದ್ದೇವೆ," ಎಂದು ಇಸ್ರೇಲ್ ಪ್ರಧಾನಿ ನೇತನ್ಯಾಹು ಹೇಳಿದ್ದಾರೆ.

ಜಲ ಸಂರಕ್ಷಣೆ, ಅಣು ಗಡಿಯಾರ
ಇದರ ಜತೆಗೆ ಜಲ ಸಂರಕ್ಷಣೆ, ಅಣು ಗಡಿಯಾರಗಳಲ್ಲಿ ಸಹಕಾರ ನೀಡುವ ಸಂಬಂಧ ಎರಡೂ ದೇಶಗಳ ನಡುವೆ ಒಪ್ಪಂದ ನಡೆದಿದೆ.

ಮೂಲಭೂತವಾದದ ವಿರುದ್ಧ ಹೋರಾಟ
ಒಪ್ಪಂದದ ವಿನಿಮಯದ ನಂತರ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಎರಡೂ ದೇಶಗಳು ಬೆಳೆಯುತ್ತಿರುವ ಮೂಲಭೂತವಾದದ ವಿರುದ್ಧ ಹೋರಾಟ ನಡೆಸಲು ಒಪ್ಪಿಕೊಂಡಿವೆ ಎಂದು ಹೇಳಿದ್ದಾರೆ.

ಜಾಗತಿಕ ಶಾಂತಿ ಮತ್ತು ಸ್ಥಿರತೆಗೆ ಸಹಕಾರ
"ಇಸ್ರೇಲಿನಂತೆ ಭಾರತ ಕೂಡಾ ಹಿಂಸಾಚಾರ ಮತ್ತು ಭಯೋತ್ಪಾದನೆಯಿಂದ ನಲುಗಿದೆ," ಎಂದು ಹೇಳಿದ ಪ್ರಧಾನಿ ಮೋದಿ ನಮ್ಮ ನಡುವೆ ದ್ವಿಪಕ್ಷೀಯ ಸಂಬಂಧಗಳಾಚೆಗೆ ಜಾಗತಿಕ ಶಾಂತಿ ಮತ್ತು ಸ್ಥಿರತೆಗೆ ಸಂಬಂಧಿಸಿದ ಸಹಕಾರದ ಬಗ್ಗೆಯೂ ಚರ್ಚೆ ನಡೆಯಿತು ಎಂದಿದ್ದಾರೆ.

ಪ್ರಜಾಪ್ರಭುತ್ವ ಮೌಲ್ಯಗಳ ವಿನಿಮಯ
"ಗಣತಂತ್ರದ ಮೌಲ್ಯಗಳು ಮತ್ತು ಆರ್ಥಿಕ ಅಭಿವೃದ್ಧಿಯ ಬಗ್ಗೆ ನಮಗಿರುವ ನಂಬಿಕೆ ಕೂಡಾ ನಮ್ಮ ನಡುವೆ ಹಂಚಿಕೊಂಡ ಅನ್ವೇಷಣೆಗಳಾಗಿವೆ," ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಹಲವು ಒಪ್ಪಂದಗಳಿಗೆ ಸಹಿ
ಮೂರು ವರ್ಷಗಳ ಕೃಷಿ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಎರಡೂ ದೇಶಗಳ ನಡುವೆ ಒಪ್ಪಂದ ನಡೆದಿದೆ. ಇನ್ನು ಜಿಇಒ-ಎಲ್ಇಒ ಆಪ್ಟಿಕಲ್ ಲಿಂಕ್ ಗೆ ಸಹಕಾರ ನೀಡಲು ಎರಡೂ ದೇಶಗಳು ಒಪ್ಪಿಕೊಂಡಿವೆ. ಸಂಶೋಧನೆ ಮತ್ತು ಅಭಿವೃದ್ಧಿ ಹಾಗೂ ತಾಂತ್ರಿಕ ಅನ್ವೇಷಣೆ ನಿಧಿ ಸ್ಥಾಪನೆಗೆ ಸಂಬಂಧಿಸಿದಂತೆಯೂ ಎರಡೂ ದೇಶಗಳು ಒಮ್ಮತಕ್ಕೆ ಬಂದಿವೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications