ಜಲ ಸಮರ: ಪಾಕಿಸಾನ ವಿರುದ್ಧ ಭಾರತಕ್ಕೆ ಜಯ
ನವದೆಹಲಿ, ಆಗಸ್ಟ್ 03: ಜಮ್ಮು ಮತ್ತು ಕಾಶ್ಮೀರದ ಕಿಶನ್ಗಂಗಾ ಮತ್ತು ರಾಟ್ಲೆಯಲ್ಲಿ ಜಲ ವಿದ್ಯುತ್ ಘಟಕಗಳನ್ನು ನಿರ್ಮಿಸಲು ಮುಂದಾಗಿರುವ ಭಾರತದ ಬೆನ್ನಿಗೆ ವಿಶ್ವಬ್ಯಾಂಕ್ ನಿಂತಿದೆ.
ಝೇಲಂ ಮತ್ತು ಚೆನಬ್ ನದಿ ವ್ಯಾಪ್ತಿಯ ಕಿಶನ್ ಗಂಗಾ ಹಾಗೂ ರಾಟ್ಲೆಯಲ್ಲಿ ಯೋಜನೆಗೆ ಅನುಮತಿ ಸಿಕ್ಕಿದೆ. ಯೋಜನೆಯನ್ನು ವಿರೋಧಿಸುತ್ತಾ ಬಂದಿದ್ದ ಪಾಕಿಸ್ತಾನಕ್ಕೆ ಈ ಆದೇಶದಿಂದ ತೀವ್ರ ಮುಖಭಂಗವಾಗಿದೆ.

ಕಿಶನ್ಗಂಗಾದಲ್ಲಿ 330 ಮೆಗಾವಾಟ್ ಮತ್ತು ರಾಟ್ಲೆಯಲ್ಲಿ 850 ಮೆಗಾವಾಟ್ ಸಾಮರ್ಥ್ಯದ ಜಲ ವಿದ್ಯುತ್ ಘಟಕಗಳನ್ನು ನಿರ್ಮಿಸಲು ಉದ್ದೇಶಿಸಿರುವ ಭಾರತಕ್ಕೆ ಷರತ್ತುಬದ್ಧ ಅನುಮತಿಯನ್ನು ವಿಶ್ವಬ್ಯಾಂಕ್ ನೀಡಿದೆ.
ಈ ಯೋಜನೆಯ ವಿನ್ಯಾಸದ ಬಗ್ಗೆ ಆತಂಕ ವ್ಯಕ್ತಪಡಿಸಿ, ಸಂಬಂಧ ಮಧ್ಯಸ್ಥಿಕೆ ನ್ಯಾಯಾಲಯ ಸ್ಥಾಪಿಸುವಂತೆ ಒತ್ತಾಯಿಸಿತ್ತು. ಭಾರತ ಸಹ ಈ ವಿಷಯದ ಬಗ್ಗೆ ಪರಿಶೀಲಿಸಲು ತಟಸ್ಥ ರಾಷ್ಟ್ರಗಳ ತಜ್ಞರನ್ನು ನೇಮಿಸುವಂತೆ ಆಗ್ರಹಿಸಿತ್ತು.
ಸಿಂಧೂ ಜಲ ಒಪ್ಪಂದ(1960ರಲ್ಲಿ ವಿಶ್ವಬ್ಯಾಂಕ್ ಮಧ್ಯಸ್ಥಿಕೆಯಲ್ಲಿ ಸಿಂಧೂ ಜಲ ಒಪ್ಪಂದಕ್ಕೆ ಸಹಿ ಹಾಕಲಾಯಿತು) ಅನ್ವಯ ಈ ಎರಡು ನದಿಗಳನ್ನು 'ಪಶ್ಚಿಮದ ನದಿಗಳು' ಎಂದು ಪರಿಗಣಿಸಲಾಗಿದೆ. ಹೀಗಾಗಿ ಈ ನದಿಗಳ ನೀರನ್ನು ಪಾಕಿಸ್ತಾನ ಸಹ ಯಾವುದೇ ಷರತ್ತುಗಳು ಇಲ್ಲದೆ ಬಳಸಬಹುದು. ಆದ್ದರಿಂದ ಎರಡು ಜಲ ವಿದ್ಯುತ್ ಘಟಕಗಳನ್ನು ನಿರ್ಮಿಸಲು ಭಾರತಕ್ಕೆ ಅನುಮೋದನೆ ನೀಡಲಾಗಿದೆ ಎಂದು ವಿಶ್ವಬ್ಯಾಂಕ್ ತಿಳಿಸಿದೆ.(ಪಿಟಿಐ)
-
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
ಐಪಿಎಲ್ 2026ಕ್ಕೆ ಮುಹೂರ್ತ ಫಿಕ್ಸ್: ಇಲ್ಲಿದೆ ಮಾಹಿತಿ -
ಎಲ್ಪಿಜಿ ಸಿಲಿಂಡರ್ ಬೆಲೆ ಏರಿಕೆ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್ಗಳಲ್ಲಿ ಆಹಾರ ದರ ಏರಿಸಲು ಚಿಂತನೆ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ












Click it and Unblock the Notifications