ಜಾಗತಿಕ ಹಸಿವು ಸೂಚ್ಯಂಕ ಪಟ್ಟಿ: ಪಾಕಿಸ್ತಾನಕ್ಕಿಂತ ಕೆಳಗಿಳಿದ ಭಾರತ
ನವದೆಹಲಿ, ಅಕ್ಟೋಬರ್ 16: ಜಾಗತಿಕ ಹಸಿವು ಸೂಚ್ಯಂಕ ಪಟ್ಟಿಯಲ್ಲಿ ಪಾಕಿಸ್ತಾನಕ್ಕಿಂತ ಭಾರತವು ಕೆಳಗಿರುವುದು ಕೇಂದ್ರಕ್ಕೆ ಮುಜುಗರ ಉಂಟಾಗಿದೆ.
ಭಾರತ 117 ದೇಶಗಳ ಪೈಕಿ 102ನೇ ಸ್ಥಾನಕ್ಕೆ ಕುಸಿದಿದೆ. ಇದು ದಕ್ಷಿಣ ಏಷ್ಯಾ ಮತ್ತು ಬ್ರಿಕ್ಸ್ ದೇಶಗಳ ಪೈಕಿ ಕನಿಷ್ಠ ಸೂಚ್ಯಂಕವಾಗಿದೆ.
ದಕ್ಷಿಣ ಏಷ್ಯಾ ದೇಶಗಳು 66ರಿಂದ 94ನೇ ಸ್ಥಾನದಲ್ಲಿದ್ದರೆ ಬ್ರಿಕ್ಸ್ ದೇಶಗಳ ಪೈಕಿ ಭಾರತ ಹೊರತುಪಡಿಸಿದರೆ ಕನಿಷ್ಠ ಸ್ಥಾನ ಪಡೆದಿರುವ ಪಾಕಿಸ್ತಾನ ಕೂಡ ಭಾರತಕ್ಕಿಂತ ಮುಂದಿದ್ದು 94ನೇ ಸ್ಥಾನದಲ್ಲಿದೆ.

2014ರಿಂದ 2018ರ ಅವಧಿಯ ಅಪೌಷ್ಠಿಕ ಮಕ್ಕಳ ಪ್ರಮಾಣ, ಎತ್ತರಕ್ಕೆ ಹೋಲಿಸಿದರೆ ಸಮಪರ್ಕ ತೂಕ ಹೊಂದಿಲ್ಲದ ಐದು ವರ್ಷದೊಳಗಿನ ಮಕ್ಕಳ ಪ್ರಮಾಣ ಮತ್ತು ಐದು ವರ್ಷದೊಳಗಿನ ಮಕ್ಕಳ ಮರಣ ಪ್ರಮಾಣದ ಅಂಕಿ ಅಂಶಗಳನ್ನು ಕ್ರೋಢೀಕರಿಸಿ ಸೂಚ್ಯಂಕ ಬಿಡುಗಡೆ ಮಾಡಿದೆ.
ಭಾರತದಲ್ಲಿ ಆರರಿಂದ 23 ತಿಂಗಳರೆಗಿನ ಶೇ.9.6ರಷ್ಟು ಮಕ್ಕಳಿಗೆ ಕನಿಷ್ಠ ಸ್ವೀಕಾರಾರ್ಹ ಆಹಾರಕ್ಕಿಂತ ಕಡಿಮೆ ಆಹಾರ ನೀಡಲಾಗುತ್ತಿದೆ ಎಂದು ಸೂಚ್ಯಂಕ ವರದಿ ಹೇಳಿದೆ. ನೆರೆ ದೇಶವಾದ ಬಾಂಗ್ಲಾದೇಶ ಈ ನಿಟ್ಟಿನಲ್ಲಿ ಸಾಧಿಸಿರುವ ಪ್ರಗತಿಯನ್ನು ವರದಿ ಶ್ಲಾಘಿಸಿದೆ. ಆಕರ್ಷಕ ಆರ್ಥಿಕ ಪ್ರಗತಿ ಹಾಗೂ ಪೌಷ್ಟಿಕತೆ ಒತ್ತು ನೀಡಲಾಗಿದ್ದು, ಶಿಕ್ಷಣ ನೈರ್ಮಲ್ಯ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಗಮನ ಹರಿಸಿರುವುದು ಶ್ಲಾಘನೀಯ ಎಂದು ಹೇಳಿದೆ.
ಹಸಿವು ಮುಕ್ತ ವಿಶ್ವವನ್ನು ಸೃಷ್ಟಿಸುವ ನಿಟ್ಟಿನಲ್ಲಿ ಇನ್ನೂ ಬಲು ದೂರ ಕ್ರಮಿಸಬೇಕಿದೆ ಎಂದು ವರದಿ ಹೇಳಿದೆ.ಶೂನ್ಯದಿಂದ 100ವರೆಗಿನ ಅಂಕಪದ್ಧತಿಯಲ್ಲಿ ಶೂನ್ಯ ಅಂಕ ಗಳಿಸಿದ ದೇಶ ಕನಿಷ್ಠ ಹಸಿವು ಹೊಂದಿದೆ ಎಂಬ ಅರ್ಥ. 100 ಅಂಕ ಗಳಿಸಿದ ದೇಶ ಗರಿಷ್ಠ ಹಸಿವು ಹೊಂದಿದೆ ಎಂಬ ಅರ್ಥ ಭಾರತ 30.3 ಅಂಕ ಗಳಿಸಿದ್ದು, ಗಂಭೀರ ಹಸಿವಿನ ವರ್ಗದಲ್ಲಿ ಸೇರಿದೆ.
-
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು












Click it and Unblock the Notifications