ಚೀನಾ ಕಂಪನಿಗಳ ಹೂಡಿಕೆಗೆ ಕಡಿವಾಣ ವಿಧಿಸಿದ ಭಾರತ
ನವದೆಹಲಿ, ಏಪ್ರಿಲ್.20: ಕೊರೊನಾ ವೈರಸ್ ಹಾವಳಿ ನಡುವೆಯೇ ಭಾರತೀಯ ಸರ್ಕಾರವು ವಿದೇಶಿ ನೇರ ಬಂಡವಾಳ ಹೂಡಿಕೆಗೆ ಸಂಬಂಧಿಸಿದಂತೆ ರಚಿಸಿದ ಹೊಸ ನಿಯಮದಿಂದ ಅಂತಾರಾಷ್ಟ್ರೀಯ ವಾಣಿಜ್ಯ ಸಂಸ್ಥೆಯ ನಿಯಮಗಳ ಉಲ್ಲಂಘನೆ ಆಗಿದೆ ಎಂದು ಚೀನಾ ರಾಯಭಾರಿ ದೂರಿದ್ದಾರೆ.
ಅಂತಾರಾಷ್ಟ್ರೀಯ ವಾಣಿಜ್ಯ ಸಂಸ್ಥೆಯ ಜಾಗತೀಕರಣ, ವಾಣಿಜ್ಯ ಮತ್ತು ಹೂಡಿಕೆಯ ನಿಯಮಗಳನ್ನು ಉಲ್ಲಂಘಿಸಲಾಗುತ್ತಿದೆ. ಜಿ-20 ರಾಷ್ಟ್ರಗಳಲ್ಲಿ ತಾರತಮ್ಯರಹಿತ, ಪಾರದರ್ಶಕ, ಸ್ಥಿರ ವ್ಯಾಪಾರ, ಹೂಡಿಕೆಗೆ ಅನುಕೂಲಕರ ವಾತಾವರಣ ನಿರ್ಮಿಸಲು ನಾಯಕರು ಒಮ್ಮತ ತೋರುತ್ತಿಲ್ಲ.
ಭಾರತವು ಅಂತಾರಾಷ್ಟ್ರೀಯ ಮಾರುಕಟ್ಟೆಯ ಸಿದ್ದಾಂತಗಳ ಅನ್ವಯ ತಾರತಮ್ಯ ರಹಿತ ಹೂಡಿಕೆಗೆ ಮುಕ್ತ ಮಾರುಕಟ್ಟೆ ತೆರೆಯಲು ಅವಕಾಶ ನೀಡುತ್ತದೆ ಎಂಬ ವಿಶ್ವಾಸವಿದೆ ಎಂದು ಚೀನಾ ರಾಯಭಾರಿ ಕೌನ್ಸಿಲೊರ್ ಜಿ ರೊಂಗ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಅಂತಾರಾಷ್ಟ್ರೀಯ ಹೂಡಿಕೆಗೆ ತಿದ್ದುಪಡಿ:
ಕಳೆದ ಏಪ್ರಿಲ್.18ರಂದು ವಾಣಿಜ್ಯ ಮತ್ತು ಆಂತರಿಕ ವ್ಯವಹಾರ ಇಲಾಖೆಯು ವಿದೇಶಿ ಹೂಡಿಕೆ ನಿಯಮಗಳನ್ನು ಮತ್ತಷ್ಟು ಕಟ್ಟುನಿಟ್ಟುಗೊಳಿಸಲಾಯಿತು. ಚೀನಾದ ಸೇರಿದಂತೆ ದೇಶದ ಗಡಿಗೆ ಹೊಂದಿಕೊಂಡಿರುವ ರಾಷ್ಟ್ರಗಳು ಇಲ್ಲಿ ಹೂಡಿಕೆ ಮಾಡುವ ನಿಯಮಗಳನ್ನು ಮತ್ತಷ್ಟು ಕಠಿಣಗೊಳಿಸಲಾಯಿತು. ಕಳೆದ 2019ರ ಡಿಸೆಂಬರ್ ವೇಳೆಗೆ ಅಂಕಿ ಅಂಶಗಳನ್ನು ಅವಲೋಕಿಸಿದಾಗ ಚೀನಾ ರಾಷ್ಟ್ರವೊಂದೇ ಭಾರತದಲ್ಲಿ 8 ಬಿಲಿಯನ್ ಡಾಲರ್ ಹಣವನ್ನು ಹೂಡಿಕೆ ಮಾಡಿದೆ.
ಭಾರತದಲ್ಲಿ ಕೈಗಾರಿಕೆಗಳಲ್ಲಿ ಚೀನಾ ಹಣವನ್ನು ಹೂಡಿಕೆ ಮಾಡುತ್ತಿದ್ದು, ಮೊಬೈಲ್ ಮನೆ ಬಳಕೆಯ ಎಲೆಕ್ಟ್ರಾನಿಕ್ ಸರಕುಗಳು, ಇನ್ ಫ್ರಾಸ್ಟಕ್ಚರ್ ಮತ್ತು ಆಟೋಮೊಬೈಲ್ ಕಂಪನಿಗಳಲ್ಲಿ ಹೆಚ್ಚಿನ ಹೂಡಿಕೆ ಮಾಡಿದ್ದು, ಇದರಿಂದ ಉದ್ಯೋಗ ಸೃಷ್ಟಿಯಾಗಿತ್ತು ಎನ್ನುವುದು ಚೀನಾ ವಾದವಾಗಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications