ಪೂರ್ವ ಲಡಾಖ್ ಸಂಬಂಧ ಭಾರತ-ಚೀನಾ ನಡುವೆ ದ್ವಿಪಕ್ಷೀಯ ಮಾತುಕತೆ
ನವದೆಹಲಿ, ಸೆಪ್ಟೆಂಬರ್ 1: ಪೂರ್ವ ಲಡಾಖ್ನಲ್ಲಿ ಭದ್ರತೆಯಲ್ಲಿ ಸ್ಥಿರತೆಯನ್ನು ಕಾಯ್ದುಕೊಳ್ಳುವುದಕ್ಕೆ ಸಂಬಂಧಿಸಿದಂತೆ ಭಾರತ ಮತ್ತು ಚೀನಾದ ಸೇನಾ ಮುಖ್ಯಸ್ಥರು ಬುಧವಾರ ಮಾತುಕತೆ ನಡೆಸಿದರು.
ಕಳೆದ ಆಗಸ್ಟ್ 31ರಂದು ಭಾರತ ಮತ್ತು ಚೀನಾದ ಹಿರಿಯ ಸೇನಾ ಅಧಿಕಾರಿಗಳು ಪೂರ್ವ ಲಡಾಖ್ನಲ್ಲಿ ಮಾತುಕತೆ ನಡೆಸಿದರು. ಈ ಎಲ್ಲ ಬೆಳವಣಿಗೆಯ ಬಗ್ಗೆ ತಿಳಿದಿರುವ ಮೂಲಗಳ ಪ್ರಕಾರ, ಇದು ಮೇಜರ್ ಜನರಲ್ ಮಟ್ಟದಲ್ಲಿ ನಡೆಯುವ ವಾಡಿಕೆಯ ಸಂಭಾಷಣೆಯಾಗಿದೆ. ಅಂತಹ ಮಾತುಕತೆಗಳು ಮಾಸಿಕ ಆಧಾರದ ಮೇಲೆ ನಡೆಯುತ್ತವೆ ಎಂದು ಹೇಳಿವೆ.
ಪೂರ್ವ ಲಡಾಖ್ ಪ್ರದೇಶದಲ್ಲಿನ ಹಲವಾರು ಘರ್ಷಣೆಯ ಹಂತಗಳಲ್ಲಿ ಉಭಯ ಪಕ್ಷಗಳ ನಡುವಿನ ದೀರ್ಘಕಾಲದ ಬಿಕ್ಕಟ್ಟಿನ ನಡುವೆ ಮಾತುಕತೆ ನಡೆದಿದೆ. ಆದರೆ ಮಾತುಕತೆ ಬಗ್ಗೆ ಯಾವುದೇ ಅಧಿಕೃತ ಮಾತುಗಳಿಲ್ಲ. ಭಾರತ ಮತ್ತು ಚೀನಾ ಸೇನೆಗಳು ಎರಡು ವರ್ಷಗಳಿಂದ ಘರ್ಷಣೆಗೆ ಈ ಪ್ರದೇಶವೇ ಕೇಂದ್ರಬಿಂದುವಾಗಿ ಗುರುತಿಸಿಕೊಂಡಿದೆ.

16ನೇ ಸುತ್ತಿನ ದ್ವಿಪಕ್ಷೀಯ ಮಾತುಕತೆ:
ದ್ವಿಪಕ್ಷೀಯ ಬಾಂಧವ್ಯಗಳ ಒಟ್ಟಾರೆ ಅಭಿವೃದ್ಧಿಗೆ ವಾಸ್ತವಿಕ ನಿಯಂತ್ರಣ ರೇಖೆಯ (ಎಲ್ಎಸಿ) ಉದ್ದಕ್ಕೂ ಶಾಂತಿಯನ್ನು ಮತ್ತು ಸ್ಥಿರತೆಯನ್ನು ಕಾಯ್ದುಕೊಳ್ಳುವುದೇ ಪ್ರಮುಖವಾಗಿದೆ ಎಂದು ಭಾರತವು ನಿರಂತರವಾಗಿ ಹೇಳುತ್ತಿದೆ. ಈ ಬಿಕ್ಕಟ್ಟನ್ನು ಪರಿಹರಿಸಲು ಉಭಯ ಸೇನಾಪಡೆಗಳು 16 ಸುತ್ತಿನ ಕಾರ್ಪ್ಸ್ ಕಮಾಂಡರ್ ಮಟ್ಟದ ಮಾತುಕತೆ ನಡೆಸಿವೆ.
ಮಿಲಿಟರಿ ಮತ್ತು ರಾಜತಾಂತ್ರಿಕ ಮಾತುಕತೆಗಳ ಸರಣಿಯ ಪರಿಣಾಮವಾಗಿ ಎರಡು ಕಡೆಯವರು ಕಳೆದ ವರ್ಷ ಪ್ಯಾಂಗಾಂಗ್ ತ್ಸೋ ಸರೋವರದ ಉತ್ತರ ಮತ್ತು ದಕ್ಷಿಣ ದಂಡೆಗಳಲ್ಲಿ ಮತ್ತು ಗೋಗ್ರಾ ಪ್ರದೇಶದಲ್ಲಿ ಎಲ್ಲ ಚಟುವಟಿಕೆಗಳನ್ನು ನಿಷ್ಕ್ರಿಯಗೊಳಿಸುವುದಕ್ಕೆ ಒಪ್ಪಿಗೆ ಸೂಚಿಸಿದ್ದವು.
ಭಾರತ ಮತ್ತು ಚೀನಾದ ಹಿರಿಯ ಕಮಾಂಡರ್ಗಳ ನಡುವಿನ ಕೊನೆಯ ಸುತ್ತಿನ ಮಾತುಕತೆ ಜನವರಿ 12 ರಂದು ನಡೆಯಿತು. ವಾಸ್ತವಿಕ ನಿಯಂತ್ರಣ ರೇಖೆಯ ಉದ್ದಕ್ಕೂ ಶಾಂತಿಯನ್ನು ಮರುಸ್ಥಾಪಿಸಲು, ಉಳಿದ ಸಮಸ್ಯೆಗಳ ಪರಿಹಾರಕ್ಕಾಗಿ ಎರಡೂ ಕಡೆಯವರು ಕೆಲಸ ಮಾಡುತ್ತಾರೆ ಎಂದು ಅವರು ಒಪ್ಪಿಕೊಂಡರು. ಅರುಣಾಚಲ ಪ್ರದೇಶದ ಸ್ಥಳಗಳಿಗೆ ಚೀನಾ ಮರುನಾಮಕರಣ ಮಾಡುವ ವರದಿಗಳ ಬಗ್ಗೆ ಈಶಾನ್ಯ ರಾಜ್ಯವು ಭಾರತದ ಅವಿಭಾಜ್ಯ ಅಂಗವಾಗಿದೆ ಎಂದು ಸರ್ಕಾರ ಪುನರುಚ್ಚರಿಸಿದೆ.
"ಭಾರತದ ಅರುಣಾಚಲ ಪ್ರದೇಶದಲ್ಲಿ ಚೀನಾ ಕೆಲವು ಸ್ಥಳಗಳ ಮರುನಾಮಕರಣದ ವರದಿಗಳನ್ನು ಸರ್ಕಾರ ಗಮನಿಸಿದೆ. ಇದು ನಿರರ್ಥಕ ಕಸರತ್ತು, ಇದು ಅರುಣಾಚಲ ಪ್ರದೇಶವು ಯಾವಾಗಲೂ ಭಾರತದ ಅವಿಭಾಜ್ಯ ಅಂಗವಾಗಿದೆ ಎಂಬ ಅಂಶವನ್ನು ಬದಲಾಯಿಸುವುದಿಲ್ಲ," ಎಂದು ಸರ್ಕಾರ ಹೇಳಿತ್ತು.
2020ರಲ್ಲಿ ಗಲ್ವಾನ್ ಸಂಘರ್ಷ:
ಕಳೆದ 2020ರ ಜೂನ್ 15 ಮತ್ತು 16ರ ರಾತ್ರಿ ಲಡಾಖ್ ಪೂರ್ವ ಗಡಿ ಪ್ರದೇಶದ ಗಾಲ್ವಾನ್ ಕಣಿವೆಯ ಬಳಿ ಭಾರತ-ಚೀನಾ ಯೋಧರ ನಡುವೆ ಸಂಘರ್ಷ ನಡೆಯಿತು. ಅಂದು ರೌಡಿಗಳಂತೆ ವರ್ತಿಸಿದ ಚೀನಾ ಯೋಧರು ಮಾರಕಾಸ್ತ್ರಗಳಿಂದ ಭಾರತೀಯ ಯೋಧರ ಮೇಲೆ ಹಲ್ಲೆ ನಡೆಸಿದ್ದರು. ಈ ವೇಳೆ ಭಾರತದ 20 ಯೋಧರು ಹುತಾತ್ಮರಾಗಿದ್ದು, 70ಕ್ಕೂ ಹೆಚ್ಚು ಯೋಧರು ಗಾಯಗೊಂಡಿದ್ದರು. ಗಲ್ವಾನ್ ಕಣಿವೆಯಲ್ಲಿ ನಡೆದ ಸಂಘರ್ಷದಲ್ಲಿ 20 ಭಾರತೀಯ ಯೋಧರ ಸಾವಿಗೆ ಕಾರಣವಾದ ಚೀನಾದ ವಿರುದ್ಧ ಭಾರತೀಯ ಯೋಧರು ಪ್ರತೀಕಾರ ತೀರಿಸಿಕೊಂಡರು.
ಭಾರತ ನಡೆಸಿದ ಪ್ರತಿದಾಳಿಯಲ್ಲಿ ಚೀನಾದ 44ಕ್ಕೂ ಹೆಚ್ಚು ಯೋಧರು ಹತರಾಗಿದ್ದಾರೆ ಎಂದು ಜಾಗತಿಕ ಮಾಧ್ಯಮಗಳೇ ವರದಿ ಮಾಡಿತ್ತು. ಆದರೆ ಚೀನಾ ನೀಡಿದ ಲೆಕ್ಕಕ್ಕಿಂತ ನಾಲ್ಕರಿಂದ ಒಂಬತ್ತು ಪಟ್ಟು ಚೀನಾ ಯೋಧರು ಮೃತಪಟ್ಟಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಿದೆ. 1962ರ ಯುದ್ಧದ ನಂತರ ಘರ್ಷಣೆಯಲ್ಲಿ 20 ಸೈನಿಕರು ಹುತಾತ್ಮರಾಗಿದ್ದಾರೆ ಎಂದು ಭಾರತ ಅಧಿಕೃತವಾಗಿ ಘೋಷಿಸಿತ್ತು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications