ಎವರೆಸ್ಟ್ನಲ್ಲಿ ಕಾಣೆಯಾಗಿದ್ದ ಭಾರತೀಯ ಯುವಕನ ಮೃತದೇಹ ಪತ್ತೆ
ಕಾಠ್ಮಂಡು, ಮೇ 22 : ಮೌಂಟ್ ಎವರೆಸ್ಟ್ ಚಾರಣದ ವೇಳೆ ನಾಪತ್ತೆಯಾಗಿದ್ದ ಭಾರತೀಯ ಮೂಲದ ಯುವಕ ರವಿಕುಮಾರ್ (27) ಅವರ ಮೃತದೇಹ ಪತ್ತೆಯಾಗಿದೆ ಎಂದು ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
ಉತ್ತರಪ್ರದೇಶದ ಮೊರಾದಾಬಾದ್ ನವರಾದ ರವಿಕುಮಾರ್ ಪರ್ವತಾರೋಹಣ ಮಾಡಿ ವಾಪಸಾಗುತ್ತಿದ್ದ ವೇಳೆ ಶನಿವಾರ ಅವರು ಸಹಚರಿಂದ ಸಂಪರ್ಕ ಕಡಿದುಕೊಂಡಿದ್ದರು. [ಮೌಂಟ್ ಎವರೆಸ್ಟ್ ಚಾರಣ ಮಾಡುತ್ತಿದ್ದ ಅಮೆರಿಕ ಪ್ರಜೆ ಸಾವು]

8,200 ಅಡಿ ಎತ್ತರದ 'ಬಾಲ್ಕನಿ' ಎಂದೇ ಪ್ರಸಿದ್ಧಗೊಂಡಿರುವ (ಈ ಪ್ರದೇಶವನ್ನು ಡೆತ್ ಝೋನ್ ಎಂದೂ ಕರೆಯಲಾಗುತ್ತಿದೆ) ಪ್ರದೇಶದಲ್ಲಿ ಅವರು ಪ್ರಪಾತಕ್ಕೆ ಬಿದ್ದಿದ್ದಾರೆ ಎಂದು ಪ್ರವಾಸೋದ್ಯಮ ಇಲಾಖೆಯ ಪ್ರಧಾನ ನಿರ್ದೇಶಕ ದಿನೇಶ್ ಭಟ್ಟಾರಾಯ್ ತಿಳಿಸಿದ್ದಾರೆ.
ರವಿಕುಮಾರ್ ಅವರ ಪರ್ವತಾರೋಹಣ ಮಾರ್ಗದರ್ಶಕ, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ವೊಂಗ್ಯಾ ಶೆರ್ಪಾ ಅವರನ್ನು ರಕ್ಷಿಸಲಾಗಿದೆ. ಸಂಪರ್ಕ ಕಡಿದುಕೊಂಡು 24 ಗಂಟೆ ಕಳೆದರೂ ಪತ್ತೆಯಾಗದಿರುವುದರಿಂದ ರವಿಕುಮಾರ್ ಮೃತಪಟ್ಟಿರುವ ಸಾಧ್ಯತೆಯೇ ಹೆಚ್ಚಿದೆ ಎಂದು ನೇಪಾಳ ಪರ್ವತಾರೋಹಿಗಳ ಸಂಘಟನೆಯ ಅಧ್ಯಕ್ಷ ಆಂಗ್ ಶೆರಿಂಗ್ ಶೆರ್ಪಾ ಅಭಿಪ್ರಾಯಪಟ್ಟಿದ್ದರು.
ರವಿಕುಮಾರ್ ಸಾವಿನೊಂದಿಗೆ ಎವರೆಸ್ಟ್ ಪರ್ವತಾರೋಹಣದ ವೇಳೆ ಇತ್ತೀಚೆಗೆ ಮೃತಪಟ್ಟ ಪರ್ವತಾರೋಹಿಗಳ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್












Click it and Unblock the Notifications