44 ರಾಷ್ಟ್ರಗಳಲ್ಲಿ ಭಾರತದ ರೂಪಾಂತರ ಕೊರೊನಾವೈರಸ್ ತಳಿ!
ನವದೆಹಲಿ, ಮೇ 11: ಭಾರತದಲ್ಲಿ ಕೊರೊನಾವೈರಸ್ ಎರಡನೇ ಅಲೆಯು ವೇಗವಾಗಿ ಹರಡಲು ಕಾರಣವಾಗಿರುವ B.1.617 ರೂಪಾಂತರ ರೋಗಾಣು 44 ರಾಷ್ಟ್ರಗಳಲ್ಲಿ ಪತ್ತೆಯಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯು ಮಾಹಿತಿ ನೀಡಿದೆ.
ಕೊರೊನಾವೈರಸ್ ಸೋಂಕಿನ B.1.617 ರೂಪಾಂತರ ತಳಿಯ 2020ರ ಅಕ್ಟೋಬರ್ ತಿಂಗಳಿನಲ್ಲಿ ಮೊದಲ ಬಾರಿಗೆ ಭಾರತದಲ್ಲಿ ಪತ್ತೆಯಾಗಿತ್ತು. ಡಬ್ಲ್ಯುಹೆಚ್ಓ ವ್ಯಾಪ್ತಿಯ 44 ರಾಷ್ಟ್ರಗಳಿಂದ 4500 ಮಾದರಿಯನ್ನು ತಪಾಸಣೆಗೆ ಒಳಪಡಿಸಿದಾಗ ಇದೇ ರೂಪಾಂತರ ತಳಿ ಪತ್ತೆಯಾಗಿದೆ. ಹೆಚ್ಚುವರಿವಾಗಿ ಐದು ದೇಶಗಳಿಂದ ಸೋಂಕುಪತ್ತೆ ಹಚ್ಚುವುದಕ್ಕಾಗಿ ವಿಶ್ವ ಆರೋಗ್ಯ ಸಂಸ್ಥೆಯು ವರದಿ ಸ್ವೀಕರಿಸಿದೆ.
ಭಾರತವನ್ನು ಹೊರತುಪಡಿಸಿದಂತೆ B.1.617 ರೂಪಾಂತರ ತಳಿಯಿಂದ ಅತಿಹೆಚ್ಚು ಅಪಾಯವನ್ನು ಎದುರಿಸುತ್ತಿರುವ ರಾಷ್ಟ್ರಗಳ ಪಟ್ಟಿಯಲ್ಲಿ ಬ್ರಿಟನ್ ಎರಡನೇ ಸ್ಥಾನದಲ್ಲಿ ಗುರುತಿಸಿಕೊಂಡಿದೆ. ಬ್ರೆಜಿಲ್ ಮತ್ತು ದಕ್ಷಿಣ ಆಫ್ರಿಕಾದಲ್ಲೂ ರೂಪಾಂತರ ತಳಿಯ ಅಟ್ಟಹಾಸ ಹೆಚ್ಚಾಗಿರುವುದು ಅಂಕಿ-ಅಂಶಗಳ ಸಹಿತ ಸಾಬೀತಾಗಿದೆ.

ಕೊವಿಡ್-19 ಪ್ರಕರಣಗಳಲ್ಲಿ ಗಣನೀಯ ಏರಿಕೆ:
ಕೊರೊನಾವೈರಸ್ ಮೂಲ ರೋಗಾಣುವಿಗಿಂತ B.1.617 ರೂಪಾಂತರ ತಳಿ ಶೀಘ್ರ ಗತಿಯಲ್ಲಿ ಹರಡುವ ಸಾಮರ್ಥ್ಯವನ್ನು ಹೊಂದಿದೆ. ರೂಪಾಂತರ ವೈರಸ್ ಕಾಣಿಸಿಕೊಂಡ ದೇಶಗಳಲ್ಲಿ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯ ಏರಿಕೆ ಕಂಡು ಬರುತ್ತಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ. ನೈಜ-ಪ್ರಪಂಚದಲ್ಲಿ ರೂಪಾಂತರ ತಳಿಯ ವಿರುದ್ಧ ಲಸಿಕೆಗಳ ಪರಿಣಾಮ ಸೀಮಿತವಾಗಿರಬಹುದು ಎಂದು ಡಬ್ಲ್ಯುಹೆಚ್ಓ ಒತ್ತಿ ಹೇಳಿದೆ.
ಭಾರತದಲ್ಲಿ ಏಪ್ರಿಲ್ ಅಂತ್ಯದ ವೇಳೆಗೆ B.1.617.1 ರೂಪಾಂತರ ತಳಿಯು ಶೇ.21 ಹಾಗೂ B.1.617.2 ರೂಪಾಂತರ ತಳಿಯು ಶೇ.7ರಷ್ಟು ಪ್ರಮಾಣದಲ್ಲಿ ಪತ್ತೆಯಾಗಿದೆ. ಇದರ ಜೊತೆಗೆ ಇಂಗ್ಲೆಂಡಿನಲ್ಲಿ ಮೊದಲ ಪತ್ತೆಯಾದ B.1.1.7 ರೂಪಾಂತರ ತಳಿ ಕೂಡ ಪತ್ತೆಯಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಸ್ಪಷ್ಟಪಡಿಸಿದೆ.

ಭಾರತದಲ್ಲಿ ಕಳೆದ ಒಂದು ದಿನದಲ್ಲಿ 3,29,942 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 2,26,62,575ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ಕೊರೊನಾವೈರಸ್ ಸೋಂಕಿನಿಂದ ಈವರೆಗೂ 2,49,99 ಜನರು ಜೀವ ಚೆಲ್ಲಿದ್ದಾರೆ. ಒಂದು ದಿನದಲ್ಲಿ 3,56,082 ಸೋಂಕಿತರು ಗುಣಮುಖರಾಗಿದ್ದು, ಈವರೆಗೆ 1,90,27,304 ಸೋಂಕಿತರು ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರ ಹೊರತಾಗಿ ಭಾರತದಲ್ಲಿ 37,15,221 ಕೊರೊನಾವೈರಸ್ ಸಕ್ರಿಯ ಪ್ರಕರಣಗಳಿವೆ.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications