ಸುಯೆಜ್ ಕಾಲುವೆಯಲ್ಲಿ ಸಿಲುಕಿದ್ದ ಹಡಗಿನ ಭಾರತೀಯ ಸಿಬ್ಬಂದಿಗೆ ಕಾನೂನು ಸಮಸ್ಯೆ ಭೀತಿ
ಕೈರೋ, ಏಪ್ರಿಲ್ 1: ಜಗತ್ತಿನಾದ್ಯಂತ ಸದ್ದು ಮಾಡಿದ್ದ ಸುಯೆಜ್ ಕಾಲುವೆಯಲ್ಲಿ ಹಡಗು ಸಿಲುಕಿಕೊಂಡಿದ್ದ ಪ್ರಕರಣ ಸಂಪೂರ್ಣವಾಗಿ ಬಗೆಹರಿಸಲು ಹಲವು ತಿಂಗಳು ಬೇಕಾಗಬಹುದು ಎನ್ನಲಾಗಿದೆ. 'ಎವರ್ ಗ್ರೀನ್' ಹಡಗಿನಲ್ಲಿದ್ದ ಎಲ್ಲ 25 ಸಿಬ್ಬಂದಿ ಭಾರತೀಯರಾಗಿದ್ದು, ಎಲ್ಲರ ಆರೋಗ್ಯವೂ ಚೆನ್ನಾಗಿದೆ. ಹೀಗಾಗಿ ಅವರನ್ನು ಸದ್ಯಕ್ಕೆ ಬದಲಿಸುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಾರ್ಚ್ 23ರಂದು ಸರಕು ಸಾಗಣೆ ಹಡಗು ಎವರ್ ಗ್ರೀನ್ ಸುಯೆಜ್ ಕಾಲುವೆಯಲ್ಲಿ ಸಿಲುಕಿಕೊಂಡ ಸಂದರ್ಭದಿಂದಲೂ ಅದರೊಳಗೆ ಇದ್ದ ಸಿಬ್ಬಂದಿ ಸುರಕ್ಷಿತವಾಗಿದ್ದಾರೆ. ಆದರೆ ಈ ಸಿಬ್ಬಂದಿ ಅಪರಾಧ ಪ್ರಕರಣ ಸೇರಿದಂತೆ ವಿವಿಧ ಕಾನೂನಾತ್ಮಕ ಕ್ರಮಗಳನ್ನು ಎದುರಿಸುವ ಸಾಧ್ಯತೆ ಇದೆ ಎಂಬ ಆತಂಕ ಭಾರತ ಸರ್ಕಾರ ಹಾಗೂ ಸಾಗರ ವ್ಯವಹಾರದ ವಿವಿಧ ಸಂಘಟನೆಗಳಲ್ಲಿ ಉಂಟಾಗಿದೆ.
ಈ ಘಟನೆ ನಡೆಯಲು ಕಾರಣದ ತನಿಖೆ ಪೂರ್ಣಗೊಳ್ಳುವವರೆಗೂ ಭಾರತದ ಈ ಸಿಬ್ಬಂದಿಯನ್ನು ಗೃಹಬಂಧನದಲ್ಲಿ ಇರಿಸುವ ಸಾಧ್ಯತೆ ಇದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಪ್ರಾಕೃತಿಕ ಸಮಸ್ಯೆ ಈ ಬಿಕ್ಕಟ್ಟಿಗೆ ಪ್ರಮುಖ ಕಾರಣವಾಗಿದ್ದರೂ, ಸಿಬ್ಬಂದಿಯನ್ನು ಹರಕೆ ಕುರಿಯಂತೆ ಈ ಪ್ರಕರಣದಲ್ಲಿ ಸಿಲುಕಿಸುವ ಸಂಭವವೂ ಇದೆ ಎನ್ನಲಾಗಿದೆ.

'ಎವರ್ ಗ್ರೀನ್' ಹಡಗನ್ನು ನಿರ್ವಹಿಸುತ್ತಿರುವ ಜರ್ಮನ್ ಕಂಪೆನಿ ಬರ್ನ್ಹಾರ್ಡ್ ಶಲ್ಟ್ ಶಿಪ್ ಮ್ಯಾನೇಜ್ಮೆಂಟ್ (ಬಿಎಸ್ಎಂ), 'ಸಿಬ್ಬಂದಿ ಸುರಕ್ಷಿತ ಮತ್ತು ಆರೋಗ್ಯವಂತರಾಗಿದ್ದಾರೆ. ಅವರ ಕಠಿಣ ಶ್ರಮ ಮತ್ತು ದಣಿವರಿಯದ ವೃತ್ತಿಪರತೆಯನ್ನು ಶ್ಲಾಘಿಸಲಾಗುತ್ತಿದೆ' ಎಂದು ಹೇಳಿದೆ. ಆದರ ಹಡಗಿನ ಸಿಬ್ಬಂದಿ ಕಾನೂನಾತ್ಮಕ ಸಮಸ್ಯೆಗಳನ್ನು ಎದುರಿಸಲಿದ್ದಾರೆಯೇ ಎಂಬ ಬಗ್ಗೆ ಅದು ವಿವರಣೆ ನೀಡಿಲ್ಲ.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ












Click it and Unblock the Notifications