ನೇಪಾಳದ ಕಠ್ಮಂಡು ಪಶುಪತಿನಾಥ ದೇವಾಲಯದಲ್ಲಿ ಶಿವನ ಆರಾಧನೆ
ಕಠ್ಮಂಡು, ನವೆಂಬರ್ 14: ಭಾರತೀಯ ರಾಯಭಾರ ಕಚೇರಿ ಹಾಗೂ ಸ್ವಾಮಿ ವಿವೇಕಾನಂದ ಸಾಂಸ್ಕ್ರತಿಕ ಕೇಂದ್ರ ಸಂಯುಕ್ತಾಶ್ರಯದಲ್ಲಿ ನೇಪಾಳದ ರಾಜಧಾನಿಯ ಕಠ್ಮಂಡುನ ಪಶುಪತಿನಾಥ ದೇವಾಲಯದಲ್ಲಿ ಶಿವ ಪೂಜೆ ಹಾಗೂ ವಿಶೇಷ ಕಾರ್ಯಕ್ರಮವನ್ನು ಸೋಮವಾರ ಸಂಜೆ ಆಯೋಜಿಸಲಾಗಿತ್ತು. ಈ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಕೇಂದ್ರದಿಂದ ಪಶುಪತಿನಾಥದಲ್ಲಿ ವಿಶೇಷವಾದ ಶಿವಪೂಜೆಯಲ್ಲಿ ಶಿವನ ಆರಾಧನೆ ಮಾಡಲಾಯಿತು. ಈ ಸಂದರ್ಭದಲ್ಲಿ ಶಿವನನ್ನು ಭಕ್ತಿಯಿಂದ ಸ್ಮರಿಸಲಾಯಿತು.
ಪಶುಪತಿ ಏರಿಯಾ ಡೆವಲಪ್ಮೆಂಟ್ ಟ್ರಸ್ಟ್ (PADT)ಸಹಯೋಗದಲ್ಲಿ ಸಾಂಸ್ಕೃತಿಕ ಸಂಜೆ ಆಯೋಜಿಸಲಾಗಿದ್ದ ಈ ಕಾರ್ಯಕ್ರಮವು ಸಾಂಪ್ರದಾಯಿಕ ನೇಪಾಳಿ ಕುಮಾರಿ ನೃತ್ಯದೊಂದಿಗೆ ಪ್ರಾರಂಭವಾಯಿತು. ತದನಂತರ ಭರತನಾಟ್ಯ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
ಒಂದು ಗಂಟೆ ಅವಧಿಗೂ ನಡೆದ ಕಾರ್ಯಕ್ರಮದಲ್ಲಿ ಅರ್ಧನಾರೀಶ್ವರ (ಶಿವ ಮತ್ತು ಪಾರ್ವತಿಯ ಒಂದು ರೂಪದಲ್ಲಿ ಸಂಯೋಜನೆ) ಮತ್ತು ಶಿವ ನಾಟ್ಯ ರೂಪವನ್ನು ಭಗವಾನ್ ಶಿವ, ಗಣೇಶ ಮತ್ತು ಪಾರ್ವತಿ ಭಾವರೂಪಗಳನ್ನು ಒಳಗೊಂಡಿದ್ದವು. ಈ ಸಂದರ್ಭದಲ್ಲಿ ಇಡೀ ಶಿವನ ಕುಟುಂಬವನ್ನು ಪೂಜಿಸಲಾಯಿತು. ನೇಪಾಳಿಯಲ್ಲಿ ಸಾಂಪ್ರದಾಯಿಕ ಪ್ರದರ್ಶನಗಳು ದೇವಿಯ ಆರಾಧನೆಯಲ್ಲಿ ಪ್ರಸ್ತುತಪಡಿಸಲಾಯಿತು ಎಂದು ಭಾರತೀಯ ರಾಯಭಾರ ಕಚೇರಿಯು ಪ್ರಕಟಣೆ ತಿಳಿಸಿದೆ.

ಕಾರ್ಯಕ್ರಮವನ್ನು ಪಶುಪತಿನಾಥ ದೇವಸ್ಥಾನದ ಮುಖ್ಯಸ್ಥ ಭಟ್ ಗಣೇಶ್ ರಾವಲ್ ಉದ್ಘಾಟಿಸಿದರು. 200ಕ್ಕೂ ಹೆಚ್ಚು ಜನರು, ಟ್ರಸ್ಟಿಗಳು ಹಾಗೂ ಸಮಾಜದ ಪ್ರಮುಖರು ನೃತ್ಯ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications