ಮಾನಸ ಸರೋವರಕ್ಕೆ ತೆರಳಿದ ಕನ್ನಡಿಗರಿಗೆ ಇಲ್ಲಿದೆ ಸಹಾಯವಾಣಿ
ಕಠ್ಮಂಡು, ಜುಲೈ 03: ನೇಪಾಳದ ಸಿಮಿಕೋಟ್ ಎಂಬಲ್ಲಿ ಸಿಲುಕಿಕೊಂಡಿರುವ ಮಾನಸ ಸರೋವರ ಯಾತ್ರಿಕರಿಗೆ ನೇಪಾಳದಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಕೆಲವು ಸಹಾಯವಾಣಿಗಳನ್ನು ನೀಡಿದೆ.
ಸಂಕಷ್ಟದಲ್ಲಿರುವ ಯಾತ್ರಿಕರು ಅಥವಾ ಅವರ ಕುಟುಂಬಸ್ಥರು ಈ ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡಿ ಮಾಹಿತಿ ಕಲೆ ಹಾಕಬಹುದು, ಅಥವಾ ರಕ್ಷಣೆಗೆ ಮನವಿ ಮಾಡಬಹುದಾಗಿದೆ.
ಸಹಾಯವಾಣಿ ಸಂಖ್ಯೆಗಳು ಇಂತಿವೆ: :+977-9851107006,+977-9851155007,+977-9851107021, +977-9818832398. ಪ್ರಾದೇಶಿಕ ಭಾಷೆಗಳಿಗಾಗಿ: ಕನ್ನಡ- +977-9823672371, ತೆಲುಗು- +977-9808082292,ತಮಿಳು- +977-9808500642, ಮಲೆಯಾಳಿ- +977-9808500644.

ಮಳಲೆ, ಮಂಜು ಸೇರಿದಂತೆ ಪ್ರತಿಕೂಲ ಹವಾಮಾನದಿಂದಾಗಿ ಕರ್ನಾಟಕದ ಸುಮಾರು 200 ಮಂದಿ ಯಾತ್ರಿಕರು ಸೇರಿದಂತೆ ಹಲವರು ಸಿಮಿಕೋಟ್ ನಲ್ಲಿ ಸಿಲುಕಿಕೊಂಡಿದ್ದಾರೆ. ಕರ್ನಾಟಕದ ಯಾತ್ರಿಗಳು ಸದ್ಯಕ್ಕೆ ಸುರಕ್ಷಿತವಾಗಿದ್ದಾರೆ ಎಂದು ಮೈಸೂರು ಜಿಲ್ಲಾಧಿಕಾರಿ ಅಭಿರಾಮ್ ಹೇಳಿದ್ದಾರೆ. ಮೈಸೂರು, ರಾಮನಗರ, ಚನ್ನಪಟ್ಟಣ ನಿವಾಸಿಗಳೇ ಇಲ್ಲಿ ಹೆಚ್ಚಾಗಿದ್ದು, ಅವರಿಗೆ ಆಹಾರವನ್ನೂ ಒದಗಿಸುವುದಕ್ಕೆ ಸಾಧ್ಯವಾಗುತ್ತಿಲ್ಲ ಎನ್ನಲಾಗಿತ್ತು. ಆದರೆ ಇದೀಗ ನೇಪಾಳದಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಯಾತ್ರಿಕರು ತಂಗಿರುವ ಶಿಬಿರಗಳಿಗೆ ಸಿಬ್ಬಂದಿಯನ್ನು ಕಳಿಸಿ ವೈದ್ಯಕೀಯ ತಪಾಸಣೆ ನಡೆಸುತ್ತಿದ್ದು, ನೇಪಾಳ ಸೇನೆ ರಕ್ಷಣಾ ಕಾರ್ಯವನ್ನೂ ನಡೆಸಲಿದೆ.
ಹೆಲಿಕಾಪ್ಟರ್ ಮೂಲಕವೇ ಯಾತ್ರಿಕರನ್ನು ಅಲ್ಲಿಂದ ಕರೆತರಬೇಕಿದೆ, ಆದರೆ ಹೆಲಿಕಾಪ್ಟರ್ ಹಾರಾಟಕ್ಕೆ ಹವಾಮಾನ ಅನುಕೂಲಕರವಾಗಿಲ್ಲದಿರುವುದರಿಂದ ಮುಂದಿನ ದಾರಿಯನ್ನು ಹುಡುಕಲಾಗುತ್ತಿದೆ.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications