ಮಾನಸ ಸರೋವರಕ್ಕೆ ತೆರಳಿದ ಕನ್ನಡಿಗರಿಗೆ ಇಲ್ಲಿದೆ ಸಹಾಯವಾಣಿ
ಕಠ್ಮಂಡು, ಜುಲೈ 03: ನೇಪಾಳದ ಸಿಮಿಕೋಟ್ ಎಂಬಲ್ಲಿ ಸಿಲುಕಿಕೊಂಡಿರುವ ಮಾನಸ ಸರೋವರ ಯಾತ್ರಿಕರಿಗೆ ನೇಪಾಳದಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಕೆಲವು ಸಹಾಯವಾಣಿಗಳನ್ನು ನೀಡಿದೆ.
ಸಂಕಷ್ಟದಲ್ಲಿರುವ ಯಾತ್ರಿಕರು ಅಥವಾ ಅವರ ಕುಟುಂಬಸ್ಥರು ಈ ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡಿ ಮಾಹಿತಿ ಕಲೆ ಹಾಕಬಹುದು, ಅಥವಾ ರಕ್ಷಣೆಗೆ ಮನವಿ ಮಾಡಬಹುದಾಗಿದೆ.
ಸಹಾಯವಾಣಿ ಸಂಖ್ಯೆಗಳು ಇಂತಿವೆ: :+977-9851107006,+977-9851155007,+977-9851107021, +977-9818832398. ಪ್ರಾದೇಶಿಕ ಭಾಷೆಗಳಿಗಾಗಿ: ಕನ್ನಡ- +977-9823672371, ತೆಲುಗು- +977-9808082292,ತಮಿಳು- +977-9808500642, ಮಲೆಯಾಳಿ- +977-9808500644.

ಮಳಲೆ, ಮಂಜು ಸೇರಿದಂತೆ ಪ್ರತಿಕೂಲ ಹವಾಮಾನದಿಂದಾಗಿ ಕರ್ನಾಟಕದ ಸುಮಾರು 200 ಮಂದಿ ಯಾತ್ರಿಕರು ಸೇರಿದಂತೆ ಹಲವರು ಸಿಮಿಕೋಟ್ ನಲ್ಲಿ ಸಿಲುಕಿಕೊಂಡಿದ್ದಾರೆ. ಕರ್ನಾಟಕದ ಯಾತ್ರಿಗಳು ಸದ್ಯಕ್ಕೆ ಸುರಕ್ಷಿತವಾಗಿದ್ದಾರೆ ಎಂದು ಮೈಸೂರು ಜಿಲ್ಲಾಧಿಕಾರಿ ಅಭಿರಾಮ್ ಹೇಳಿದ್ದಾರೆ. ಮೈಸೂರು, ರಾಮನಗರ, ಚನ್ನಪಟ್ಟಣ ನಿವಾಸಿಗಳೇ ಇಲ್ಲಿ ಹೆಚ್ಚಾಗಿದ್ದು, ಅವರಿಗೆ ಆಹಾರವನ್ನೂ ಒದಗಿಸುವುದಕ್ಕೆ ಸಾಧ್ಯವಾಗುತ್ತಿಲ್ಲ ಎನ್ನಲಾಗಿತ್ತು. ಆದರೆ ಇದೀಗ ನೇಪಾಳದಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಯಾತ್ರಿಕರು ತಂಗಿರುವ ಶಿಬಿರಗಳಿಗೆ ಸಿಬ್ಬಂದಿಯನ್ನು ಕಳಿಸಿ ವೈದ್ಯಕೀಯ ತಪಾಸಣೆ ನಡೆಸುತ್ತಿದ್ದು, ನೇಪಾಳ ಸೇನೆ ರಕ್ಷಣಾ ಕಾರ್ಯವನ್ನೂ ನಡೆಸಲಿದೆ.
ಹೆಲಿಕಾಪ್ಟರ್ ಮೂಲಕವೇ ಯಾತ್ರಿಕರನ್ನು ಅಲ್ಲಿಂದ ಕರೆತರಬೇಕಿದೆ, ಆದರೆ ಹೆಲಿಕಾಪ್ಟರ್ ಹಾರಾಟಕ್ಕೆ ಹವಾಮಾನ ಅನುಕೂಲಕರವಾಗಿಲ್ಲದಿರುವುದರಿಂದ ಮುಂದಿನ ದಾರಿಯನ್ನು ಹುಡುಕಲಾಗುತ್ತಿದೆ.
-
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್












Click it and Unblock the Notifications