ಪಾಕ್ ಸೇನೆ ಮತ್ತು ಉಗ್ರರ ಸೀಕ್ರೆಟ್ ಕೋಡ್ಸ್ ಭೇದಿಸಿದ ಭಾರತ
ನವದೆಹಲಿ, ಸೆಪ್ಟೆಂಬರ್ 11: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ 370 ನೇ ವಿಧಿಯನ್ನು ಭಾರತ ಸರ್ಕಾರ ರದ್ದುಗೊಳಿಸಿದ ನಂತರ ಪಾಕಿಸ್ತಾನ ಭಾರತದಲ್ಲಿ ಶಾಂತಿ ಕದಡಲು ಹಲವು ಪ್ರಯತ್ನಗಳನ್ನು ನಡೆಸಿದೆ.
ಆ ಪ್ರಯತ್ನಕ್ಕೆ ಸಾಕ್ಷಿ ಎಂಬಂತೆ ಪಾಕಿಸ್ತಾನ ಸೈನಿಕರು ಮತ್ತು ಪಾಕಿಸ್ತಾನ ಆಶ್ರಯ ನೀಡಿದ ಭಯೋತ್ಪಾದಕರು ಬಳಸುತ್ತಿದ್ದ ಕೆಲವು ಸೀಕ್ರೆಟ್ ಕೋಡ್ ಗಳನ್ನು ಭೇದಿಸುವಲ್ಲಿ ಭಾರತೀಯ ಸೇನೆ ಯಶಸ್ವಿಯಾಗಿದೆ.
ಭಾರತೀಯ ಸೇನೆಯ ಬಲೆಗೆ ಬೀಳದೆ ತಪ್ಪಿಸಿಕೊಂಡು, ಕಾಶ್ಮೀರದ ಶಾಂತಿ ಕದಡುವುದು ಹೇಗೆ ಎಂಬ ಬಗ್ಗೆ ಸಿಕ್ರೇಟ್ ಕೋಡ್ ಗಳ ಮೂಲಕ ಪಾಕ್ ಸೈನಿಕರು ಮತ್ತು ಭಯೋತ್ಪಾದಕರು ಸಂವಹನ ನಡೆಸುತ್ತಿದ್ದುದು ಬೆಳಕಿಗೆ ಬಂದಿದೆ.

ಈ ಸಂವಹನಕ್ಕಾಗಿ ಪಾಕಿಸ್ತಾನದ ರಾಷ್ಟ್ರಗೀತೆಯ ಪದಗಳನ್ನು ಅವರು ಬಳಸುತ್ತಿದ್ದುದು ತಿಳಿದುಬಂದಿದೆ.
"--ಜೆಇಎಂ(66/88), ಎಲ್ ಇಟಿ(A3) ಅಲ್ ಬದರ್ (D9) ಎಂಬಿತ್ಯಾದಿ ಕೋಡ್ ಗಳನ್ನು ಉಗ್ರರು ಮತ್ತು ಸೈನಿಕರು ಬಳಲುತ್ತಿದ್ದರು ಎಂದು ಗುಪ್ತಚರ ಇಲಾಖೆಯ ಮೂಲಗಳು ತಿಳಿಸಿದ್ದು ಈ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ನೀಡಲು ನಿರಾಕರಿಸಿವೆ.
ಪಾಕ್ ಆಕ್ರಮಿತ ಕಾಶ್ಮೀರದ ಎಫ್ಎಂ ತರಂಗಗಳನ್ನು ಬಳಸಿಕೊಂಡು ಜಮ್ಮು ಮತ್ತು ಕಾಶ್ಮೀರದಲ್ಲಿರುವ ತಮ್ಮ ಸಹವರ್ತಿಗಳಿಗೆ ಪಾಕ್ ಸೇನೆ ಮತ್ತು ಉಗ್ರರು ಕೋಡ್ ಪದಗಳನ್ನು ಕಳಿಸುತ್ತಿದ್ದಾರೆ ಎಂಬುದು ಗುಪ್ತಚರ ಇಲಾಖೆಯ ಗಮನಕ್ಕೆ ಬಂದಿದೆ.
ಎರಡು ತಿಂಗಳಷ್ಟೇ ಪಾಕಿಸ್ತಾನ ಹೊಸ ಎಂಎಂ ಸ್ಟೇಷನ್ ಅನ್ನು ಆರಂಭಿಸಿದ್ದು, ಇದರ ಮೂಲಕ ಗಡಿ ನಿಯಂತ್ರಣ ರೇಖೆಯ ಬಳಿ ಇರುವ ಉಗ್ರರಿಗೆ ಅಗತ್ಯ ಮಾಹಿತಿಯನ್ನು ರವಾನಿಸುತ್ತಿದೆ ಎಂಬ ಆಘಾತಕಾರಿ ಮಾಹಿತಿ ಲಣಭ್ಯವಾಗಿದೆ.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ












Click it and Unblock the Notifications