ಭಾರತ ಮೂಲದ ಹಲೀಮತ್ ಈಗ ಸಿಂಗಾಪುರದ ರಾಷ್ಟ್ರಾಧ್ಯಕ್ಷೆ
ಸಿಂಗಾಪುರದ ಮೊದಲ ಮಹಿಳಾ ಅಧ್ಯಕ್ಷೆಯಾದ ಭಾರತ ಮೂಲದ ಹಲೀಮತ್. ಸ್ಪೀಕರ್ ಆಗಿ ಸೇವೆ ಸಲ್ಲಿಸಿದ ಹಲೀಮತ್ ಈಗ ರಾಷ್ಟ್ರಾಧ್ಯಕ್ಷೆ.
ಸಿಂಗಾಪುರ, ಸೆಪ್ಟೆಂಬರ್ 12: ಸಿಂಗಾಪುರದ ಮಾಜಿ ಸ್ಪೀಕರ್, ಭಾರತ ಮೂಲದ ಹಲೀಮತ್ ಯಾಕೂಬ್ ಅವರು ಸಿಂಗಾಪುರದ ಅಧ್ಯಕ್ಷೆಯಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ, ಸಿಂಗಾಪುರದ ಮೊಟ್ಟಮೊದಲ ಮಹಿಳಾ ಅಧ್ಯಕ್ಷೆಯೆಂಬ ಹೆಗ್ಗಳಿಕೆಗೂ ಅವರು ಪಾತ್ರರಾಗಿದ್ದಾರೆ.
63 ವರ್ಷದ ಯಾಕೂಬ್ ಅವರು, ಇದೇ ಬುಧವಾರ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿದ್ದಾರೆಂದು ಸಿಂಗಾಪುರ ಸರ್ಕಾರಿ ಮೂಲಗಳು ತಿಳಿಸಿವೆ. ಯಾಕೂಬ್ ಅವರ ತಂದೆ ಭಾರತ ಮೂಲದವರು. ಇವರ ತಾಯಿ ಸಿಂಗಾಪುರದ ಮಲಾಯ್ ಮುಸ್ಲಿಂ ಸಮುದಾಯಕ್ಕೆ ಸೇರಿದವರು.

ಇವರು ಅಧ್ಯಕ್ಷರಾಗಿ ಆಯ್ಕೆಯಾಗುವ ಮೂಲಕ ಮಲಾಯ್ ಸಮುದಾಯದ ಎರಡನೇ ವ್ಯಕ್ತಿಯೊಬ್ಬರು ಈ ಮಹತ್ತರ ಹುದ್ದೆಗೆ ಕಾಲಿಟ್ಟಂತಾಗಿದೆ. ಈ ಹಿಂದೆ, 1965 ಹಾಗೂ 1970ರಲ್ಲಿ ಮಲಾಯ್ ಸಮುದಾಯದ ಯೂಸುಫ್ ಇಶಾಕ್ ಅವರು ಸಿಂಗಾಪುರದ ಅಧ್ಯಕ್ಷರಾಗುವ ಮೂಲಕ ರಾಷ್ಟ್ರಪತಿ ಹುದ್ದೆಗೆ ಏರಿದ ಹಿಂದುಳಿದ ಸಮುದಾಯದ ಮೊದಲ ವ್ಯಕ್ತಿಯೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಸಿಂಗಾಪುರ ಸಂಸತ್ತಿನಲ್ಲಿ ಅನೇಕ ವರ್ಷಗಳ ಕಾಲ ಅವರು ಸ್ಪೀಕರ್ ಆಗಿ ಕಾರ್ಯನಿರ್ವಹಿಸಿದ ಅನುಭವವಿದೆ.
More From
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ












Click it and Unblock the Notifications