ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ಭಾರತ ಮೂಲದ ನ್ಯೂಜಿಲೆಂಡ್ ಸಂಸದ
ವೆಲ್ಲಿಂಗ್ಟನ್, ನವೆಂಬರ್ 26: ನ್ಯೂಜಿಲ್ಯಾಂಡ್ನ ಅತಿ ಕಿರಿಯರಲ್ಲಿ ಒಬ್ಬರಾದ ಮತ್ತು ನೂತನವಾಗಿ ಆಯ್ಕೆಯಾದ ಭಾರತ ಮೂಲದ ಸಂಸದ ಡಾ. ಗೌರವ್ ಶರ್ಮಾ ಬುಧವಾರ ದೇಶದ ಸಂಸತ್ನಲ್ಲಿ ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಹಿಮಾಚಲಪ್ರದೇಶದ ಹಮಿರ್ಪುರದವರದ ಡಾ. ಗೌರವ್ ಶರ್ಮಾ (33) ನ್ಯೂಜಿಲೆಂಡ್ನ ಹ್ಯಾಮಿಲ್ಟನ್ ವೆಸ್ಟ್ನಿಂದ ಲೇಬರ್ ಪಕ್ಷದ ಸಂಸದರಾಗಿ ಸಂಸತ್ಗೆ ಆಯ್ಕೆಯಾಗಿದ್ದಾರೆ. ಗೌರವ್ ಶರ್ಮಾ ಅವರು ಬುಧವಾರ ಎರಡು ಭಾಷೆಗಳಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ನ್ಯೂಜಿಲೆಂಡ್ನಲ್ಲಿನ ಭಾರತದ ಹೈಕಮಿಷನರ್ ಮುಕ್ತೇಶ್ ಪರ್ದೇಶಿ ಟ್ವಿಟ್ಟರ್ನಲ್ಲಿ ಈ ಮಾಹಿತಿ ನೀಡಿದ್ದಾರೆ. 'ಶರ್ಮಾ ಅವರು ಮೊದಲು ನ್ಯೂಜಿಲೆಂಡ್ನ ಸ್ಥಳೀಯ ಭಾಷೆ ಮಾವೊರಿಯಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದರು. ಬಳಿಕ ಭಾರತದ ಶಾಸ್ತ್ರೀಯ ಭಾಷೆ ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದರು. ಈ ಮೂಲಕ ಭಾರತ ಮತ್ತು ನ್ಯೂಜಿಲೆಂಡ್ ಎರಡರ ಸಾಂಸ್ಕೃತಿ ಸಂಪ್ರದಾಯಕ್ಕೆ ಅಪಾರ ಗೌರವವನ್ನು ತೋರಿಸಿದರು' ಎಂದು ಅವರು ಹೇಳಿದ್ದಾರೆ.

ಆಕ್ಲಂಡ್ನಲ್ಲಿ ಎಂಬಿಬಿಎಸ್ ಮತ್ತು ವಾಷಿಂಗ್ಟನ್ನಲ್ಲಿ ಎಂಬಿಎ ಪಡೆದಿರುವ ಶರ್ಮಾ ಅವರು, ಹ್ಯಾಮಿಲ್ಟನ್ನ ನಾವ್ಟನ್ನಲ್ಲಿ ವೈದ್ಯರಾಗಿ ಕೆಲಸ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಅವರು ನ್ಯೂಜಿಲೆಂಡ್ ಮತ್ತು ಭಾರತ ಸೇರಿದಂತೆ ವಿವಿಧ ದೇಶಗಳ ಸಾರ್ವಜನಿಕ ಆರೋಗ್ಯ, ನೀತಿ, ಔಷಧ ಮತ್ತು ಸಲಹೆಗಾರರಾಗಿ ಕೆಲಸ ಮಾಡಿದ್ದರು.
Historic Moment 👏
— Mahesh Joshi (@MaheshJoshi_MJ) November 26, 2020
Dr Gaurav Sharma a newly-elected MP in New Zealand, takes oath in #Sanskrit in the Parliament.
Hope all Indian politician take cue from him😊@Swamy39 @gmsharmanz pic.twitter.com/bXxttc3UHe
2017ರ ಚುನಾವಣೆಯಲ್ಲಿ ಸ್ಪರ್ಧೆಯಲ್ಲಿ ಸ್ಪರ್ಧಿಸಿ ಸೋಲು ಕಂಡಿದ್ದ ಗೌರವ್ ಶರ್ಮಾ, ಈ ಬಾರಿ ನ್ಯಾಷನಲ್ ಪಾರ್ಟಿಯ ಟಿಮ್ ಮ್ಯಾಸಿಂಡೊ ಅವರನ್ನು ಮಣಿಸಿದ್ದಾರೆ.
ಈ ವರ್ಷದ ಆರಂಭದಲ್ಲಿ ಪ್ರಿಯಾಂಕಾ ರಾಧಾಕೃಷ್ಣನ್ ಅವರು ನ್ಯೂಜಿಲೆಂಡ್ನ ಮೊದಲ ಭಾರತ ಮೂಲದ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದರು.
-
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ












Click it and Unblock the Notifications