ಭಾರತೀಯ ಸಂಜಾತ ನೀಲ್ ಮುಖರ್ಜಿ ಕೈತಪ್ಪಿದ ಬೂಕರ್
ಲಂಡನ್, ಅ. 15 : ಪ್ರತಿಷ್ಠಿತ ಮ್ಯಾನ್ ಬೂಕರ್ ಪ್ರಶಸ್ತಿ ಭಾರತೀಯ ಮೂಲದ ಲೇಖಕ ನೀಲ್ ಮುಖರ್ಜಿ ಕೈ ತಪ್ಪಿದೆ. ನಾಮಕರಣಗೊಂಡಿದ್ದ ಮುಖರ್ಜಿ ಕೃತಿ 'ದಿ ಲೈವ್ಸ್ ಆಫ್ ಅದರ್ಸ್' ಅಂತಿಮ ಸ್ಪರ್ಧೆಯಲ್ಲಿ ತೀರ್ಪುಗಾರರ ಮನ ಗೆಲ್ಲುವಲ್ಲಿ ವಿಫಲವಾಗಿದೆ.
ಬೂಕರ್ ಪ್ರಶಸ್ತಿ ಆಸ್ಟ್ರೇಲಿಯಾದ ಲೇಖಕ ರಿಚರ್ಡ್ ಪಾಲಾಗಿದೆ. ಯುದ್ಧ ಕಾಲದ ಕೆಟ್ಟ ಸನ್ನಿವೇಶಗಳು ಮತ್ತು ಅದರ ನಂತರದ ಘೋರ ಪರಿಣಾಮಗಳ ಕುರಿತು ಬರೆದ ಪುಸ್ತಕಕ್ಕೆ ಬೂಕರ್ ದೊರೆತಿದೆ. ಮಂಗಳವಾರ ಪ್ರಶಸ್ತಿ ಘೋಷಣೆ ಮಾಡಲಾಗಿದ್ದು ಭಾರತ ಮೂಲದ ಮುಖರ್ಜಿ ನಿರಾಸೆ ಅನುಭವಿಸಿದ್ದಾರೆ.[ಪ್ರಶಸ್ತಿ ಹಾದಿಯಲ್ಲಿ ಭಾರತ ಮೂಲದ ಲೇಖಕ]

ಎರಡನೇ ಮಹಾಯುದ್ಧದ ನಂತರದ ಸನ್ನಿವೇಶಗಳನ್ನು ರಿಚರ್ಡ್ ತಮ್ಮ ತಂದೆಯ ಅನುಭವದ ಸಹಾಯದಿಂದ ಚಿತ್ರಿಸಿದ್ದರು. 53 ವರ್ಷದ ರಿಚರ್ಡ್ ಪ್ಲಾಗ್ನಂ ವಿರಚಿತ 'ದಿ ನ್ಯಾರೋ ರೋಡ್ ಟು ದಿ ಡೀಪ್ ನಾರ್ತ್' ಪ್ರಶಸ್ತಿ ಗಳಿಸಿಕೊಂಡಿದೆ.
1960ನೇ ಇಸವಿಯಲ್ಲಿ ಪಶ್ಚಿಮ ಬಂಗಾಳದಲ್ಲಿ ಚಾಲ್ತಿಯಲ್ಲಿದ್ದ ನಕ್ಸಲಿಸಂ ಕತೆ ಆಧಾರಿತ ಕೃತಿ 'ದಿ ಲೈವ್ಸ್ ಆಫ್ ಅದರ್ಸ್' 2014ರ ಬೂಕರ್ಗೆ ನಾಮನಿರ್ದೇಶನಗೊಂಡಿತ್ತು. 2013ರಲ್ಲಿ ದಿವಗಂತ ಯು.ಆರ್.ಅನಂತಮೂರ್ತಿ ನಾಮನಿರ್ದೇಶನಗೊಂಡಿದ್ದರು. ಕಳೆದ ಮೇ ತಿಂಗಳಲ್ಲಿ ಪ್ರಕಟವಾದ ಪುಸ್ತಕ ಬಹಳಷ್ಟು ಜನರಿಗೆ ಇಷ್ಟವಾಗಿತ್ತು. ಅಲ್ಲದೇ ಬೂಕರ್ ತೀರ್ಪುಗಾರರು ಮುಖರ್ಜಿ ಕೃತಿ ಬಗ್ಗೆ ಸಹ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಆದರೆ ಇದೀಗ ಪ್ರಶಸ್ತಿ ಕೈ ತಪ್ಪಿದೆ.[ಯು.ಆರ್.ಅನಂತಮೂರ್ತಿ ಕೈ ತಪ್ಪಿದ ಬೂಕರ್ ಪ್ರಶಸ್ತಿ]
ಏನಿದು ಪ್ರಶಸ್ತಿ?
ಮ್ಯಾನ್ ಬೂಕರ್ ಇಂಟರ್ ನ್ಯಾಷನಲ್ ಪ್ರಶಸ್ತಿಯನ್ನು ವಿಶ್ವದ ಯಾವುದೇ ದೇಶದ, ಇಂಗ್ಲೀಷ್ ಭಾಷೆ ತರ್ಜುಮೆಗೆ ಲಭ್ಯವಿರುವ ಯಾವುದೇ ಭಾಷೆಯ ಕೃತಿಗೆ ನೀಡಲಾಗುತ್ತದೆ. 2005ರಿಂದ ಈ ಪ್ರಶಸ್ತಿಯನ್ನು ಪ್ರತಿ 2 ವರ್ಷಕ್ಕೊಮ್ಮೆ ನೀಡಲಾಗುತ್ತಿದೆ. ಪ್ರಶಸ್ತಿಯೂ 51 ಲಕ್ಷ ರೂ. ನಗದು ಮತ್ತು ಸ್ಮರಣಿಕೆಯನ್ನು ಒಳಗೊಂಡಿರುತ್ತದೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications