ಅಮೆರಿಕದಲ್ಲಿ ಅಣ್ಣಾಮಲೈ ಸ್ವಾಮೀಜಿಗೆ 27 ವರ್ಷ ಶಿಕ್ಷೆ
ಜಾರ್ಜಿಯಾ, ಏ.15: ವಂಚನೆ ಆರೋಪ ಹೊತ್ತಿರುವ ತಮಿಳುನಾಡು ಮೂಲದ ಹಿಂದೂ ಅರ್ಚಕ ಕಮ್ ಸ್ವಾಮೀಜಿ ಅಣ್ಣಾಮಲೈ ಎಂಬುವರಿಗೆ 27 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.
ಸ್ವಾಮೀಜಿ ಸೆಲ್ವಂ ಸಿದ್ಧಾರ್ ಅಲಿಯಾಸ್ ಅಣ್ಣಾಮಲೈ ಮೇಲೆ ಬ್ಯಾಂಕುಗಳಿಗೆ ಮೋಸ, ತೆರಿಗೆ ವಂಚನೆ, ಮನಿಲಾಂಡ್ರಿಂಗ್ ಸೇರಿದಂತೆ ಹಲವಾರು ಅರೋಪಗಳನ್ನು ಹೊರೆಸಲಾಗಿದೆ.
ಆಗಸ್ಟ್ 2014ರಲ್ಲಿ ಸ್ವಾಮೀಜಿ ಇದ್ದ ದೇಗುಲದಲ್ಲಿ ಅವ್ಯವಹಾರ ನಡೆಸಿದ ಆರೋಪ ಹೊರೆಸಲಾಗಿತ್ತು.ಪವಿತ್ರ ಸ್ಥಳವನ್ನು ಅಪವಿತ್ರ ಮಾಡಿದ್ದಲ್ಲದೆ, ಅವ್ಯವಹಾರ ಮಾಡಿ ಜನರ ಮುಂದೆ ತಲೆ ತಗ್ಗಿಸುವ ಕೆಲಸ ಮಾಡಿದ ಅಣ್ಣಾಮಲೈಗೆ 27 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ ಎಂದು ಅಟರ್ನಿ ಜಾನ್ ಎ ಹಾರ್ನ್ ವಾದಿಸಿದ್ದರು.

ಅಣ್ಣಾಮಲೈ ತನ್ನ ಅನುಯಾಯಿಗಳ ಕ್ರೆಡಿಟ್ ಕಾರ್ಡ್ ದುರ್ಬಳಕೆ ಮಾಡಿರುವುದು ಸಾಬೀತಾಗಿದೆ. ದೇಗುಲಕ್ಕೆ ಸಿಕ್ಕ ದಾನ ದತ್ತಿಗಳನ್ನು ದುರುಪಯೋಗಪಡಿಸಿಕೊಂಡಿದ್ದಾರೆ.
ಅಣ್ಣಾಮಲೈ ಹಾಗೂ ಆತನ ಕುಟುಂಬ ಐಷಾರಾಮಿ ಜೀವನ ಸಾಗಿಸುತ್ತಿದ್ದು, ಬಂಗಲೆ, ಕಾರು, ವಿದೇಶಿ ಬ್ಯಾಂಕುಗಳಲ್ಲಿ ಭಾರಿ ಮೊತ್ತದ ಹಣ ಹೊಂದಿರುವುದು ಪತ್ತೆಯಾಗಿದೆ. ಇದೆಲ್ಲವೂ ದೇಗುಲದಿಂದ ಬಂದ ಹಣವಾಗಿದೆ ಎಂದು ಯುಎಸ್ ಡಿಸ್ಟ್ರಿಕ್ ಕೋರ್ಟ್ ಜಡ್ಜ್ ತಿಮೋತಿ ಬ್ಯಾಟನ್ ತಮ್ಮ ಆದೇಶದಲ್ಲಿ ಹೇಳಿದ್ದಾರೆ.
ಅಣ್ಣಾಮಲೈ ಅವರನ್ನು ಪ್ರತ್ಯೇಕ ಸೆಲ್ ನಲ್ಲಿ ಇರಿಸಲು ಸೂಚಿಸಲಾಗಿದ್ದು, ಅವರ ಪ್ರತಿ ಟೆಲಿಫೋನ್ ಸಂಭಾಷಣೆ, ಎಲೆಕ್ಟ್ರಾನಿಕ್ ಸಂವಹನ ಚಟುವಟಿಕೆಗಳ ಮೇಲೆ ನಿಗಾ ವಹಿಸುವಂತೆ ಅಧಿಕಾರಿಗಳಿಗೆ ಕೋರ್ಟ್ ನಿರ್ದೇಶಿಸಿದೆ.(ಪಿಟಿಐ)
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications