ಟ್ರಂಪ್ ಪ್ರಾರ್ಥನಾ ಸಭೆಗೆ ಭಾರತೀಯ ಪುರೋಹಿತ!
ಮೇರಿಲ್ಯಾಂಡ್ ನಲ್ಲಿರುವ ಶ್ರೀ ಶ್ರೀ ಶಿವ ವಿಷ್ಣು ದೇವಾಲಯದ ಪ್ರಧಾನ ಅರ್ಚಕ ನಾರಾಯಣಾಚಾರ್ ಅವರಿಗೆ ಅಮೆರಿಕದ 45ನೇ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸುತ್ತಿರುವ ಡೊನಾಲ್ಡ್ ಟ್ರಂಪ್ ಅವರ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗಿದೆ.
ವಾಷಿಂಗ್ಟನ್, ಜನವರಿ 20: ಅಮೆರಿಕದ 45ನೇ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಡೊನಾಲ್ಡ್ ಟ್ರಂಪ್ ಅವರ ಪ್ರಮಾಣ ವಚನ ಸ್ವೀಕಾರದ ವೇಳೆ ಜರುಗುವ ಪ್ರಾರ್ಥನಾ ಸಮಾರಂಭಕ್ಕೆ ಭಾರತೀಯ ಮೂಲದ ಪುರೋಹಿತ ನಾರಾಯಣಾಚಾರ್ ಎಲ್. ದಿಗಲಕೋಟ ಅವರಿಗೆ ಆಮಂತ್ರಣ ನೀಡಲಾಗಿದೆ.
ನೂತನ ಅಧ್ಯಕ್ಷರ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕಾರಕ್ಕೂ ಮುನ್ನ ಸಾಂಪ್ರದಾಯಿಕವಾಗಿ ಪ್ರಾರ್ಥನಾ ಸಭೆ ಏರ್ಪಡಿಸಲಾಗುತ್ತದೆ. ಈ ಸಭೆಯಲ್ಲಿ ಅಮೆರಿಕದಲ್ಲಿರುವ ವಿವಿಧ ಧರ್ಮ ಪ್ರಚಾರಕ, ಪುರೋಹಿತರನ್ನು ಆಹ್ವಾನಿಸುವ ಪದ್ಧತಿಯಿದೆ.

ಈ ಹಿನ್ನೆಲೆಯಲ್ಲಿ, ಮೇರಿಲ್ಯಾಂಡ್ ನ ಲ್ಯಾನ್ ಹ್ಯಾಮ್ ನಲ್ಲಿರುವ ಶ್ರೀ ಶ್ರೀ ಶಿವ ವಿಷ್ಣು ದೇವಾಲಯದ ಪ್ರಧಾನ ಅರ್ಚಕರಾಗಿರುವ ನಾರಾಯಣಾಚಾರ್ ಅವರನ್ನು ಪ್ರಾರ್ಥನಾ ಸಭೆಗೆ ಆಹ್ವಾನಿಸಲಾಗಿದೆ ಎಂದು ಪ್ರಮಾಣ ವಚನ ಕಾರ್ಯಕ್ರಮದ ಆಯೋಜನಾ ಸಮಿತಿ ತಿಳಿಸಿದೆ.
ಅಂದಾಹಾಗೆ, ನಾರಾಯಣಾಚಾರ್ ಅವರಿಗೆ ಶ್ವೇತಭವನದಿಂದ ಆಮಂತ್ರಣ ಬರುತ್ತಿರುವುದು ಹೊಸತೇನಲ್ಲ. ಬರಾಕ್ ಒಬಾಮ ಅವರ ಅಧ್ಯಕ್ಷಾವಧಿಯಲ್ಲಿ ಶ್ವೇತಭವನದಲ್ಲಿ ಏರ್ಪಡಿಸಲಾಗುತ್ತಿದ್ದ ದೀಪಾವಳಿ ಸಮಾರಂಭದಲ್ಲಿ ಅವರು ಹೋಗಿ ಪೂಜಾ ಕೈಂಕರ್ಯ ನೆರವೇರಿಸಿ ಬರುತ್ತಿದ್ದರು.

ಭಾರತೀಯ ಕಾಲಮಾನದ ಪ್ರಕಾರ, ಶುಕ್ರವಾರ ರಾತ್ರಿ ಸುಮಾರು 10 ಗಂಟೆಗೆ ಡೊನಾಲ್ಡ್ ಟ್ರಂಪ್ ಅವರ ಪ್ರಮಾಣ ವಚನ ನಡೆಯಲಿದೆ. ಸಾಮಾನ್ಯವಾಗಿ ಅಮೆರಿಕ ಅಧ್ಯಕ್ಷರ ಪದಗ್ರಹಣ ಸಮಾರಂಭಕ್ಕಾಗಿ ಶಕ್ತಿ ಸೌಧವಾದ 'ನ್ಯಾಷನಲ್ ಕ್ಯಾಪಿಟಾಲ್' ಕಟ್ಟಡದ ಬಳಿಯಲ್ಲೇ ಬೃಹತ್ ವೇದಿಕೆ ಸಿದ್ಧಗೊಳಿಸಲಾಗಿದೆ. ಈ ಸಮಾರಂಭದಲ್ಲಿ ಸುಮಾರು 1 ಲಕ್ಷದಷ್ಟು ಜನರು ಭಾಗಿಯಾಗುವ ನಿರೀಕ್ಷೆಯಿದೆ.
(ಚಿತ್ರಕೃಪೆ: ಶ್ರೀ ಶ್ರೀ ಶಿವ ವಿಷ್ಣು ದೇವಾಲಯ ವೆಬ್ ಸೈಟ್)
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications