Breaking; ಟೋಕಿಯೋಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ
ಟೋಕಿಯೋ, ಮೇ 23; ಜಪಾನ್ ಪ್ರವಾಸ ಕೈಗೊಂಡಿರುವ ಭಾರತ ಪ್ರಧಾನಿ ನರೇಂದ್ರ ಮೋದಿ ಜಪಾನ್ ರಾಜಧಾನಿ ಟೋಕಿಯೋಗೆ ಸೋಮವಾರ ಮುಂಜಾನೆ ಆಗಮಿಸಿದರು. ಮೋದಿ ಮೇ 24ರಂದು ಕ್ವಾಡ್ ನಾಯಕರ ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಟೋಕಿಯೋಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ ದೊರೆಯಿತು. ವಿಮಾನ ನಿಲ್ದಾಣದಲ್ಲಿ ನೂರಾರು ಭಾರತೀಯರು 'ಭಾರತ್ ಮಾತಾ ಕೀ ಶೇರ್' ಎಂಬ ಘೋಷಣೆಯೊಂದಿಗೆ ಮೋದಿ ಸ್ವಾಗತಿಸಿದರು.
ಜಪಾನ್ ಪ್ರಧಾನಮಂತ್ರಿ ಫ್ಯೂಮಿಯೊ ಕಿಶಿಡಾ ಆಹ್ವಾನದ ಮೇರೆಗೆ ನರೇಂದ್ರ ಮೋದಿ ಮೇ 24ರಂದು ಟೋಕಿಯೋದಲ್ಲಿ ನಡೆಯಲಿರುವ ಕ್ವಾಡ್ ನಾಯಕರ ಶೃಂಗಸಭೆಯಲ್ಲಿ ಅಮರಿಕ ಅಧ್ಯಕ್ಷ ಜೋ ಬೈಡೆನ್ ಮತ್ತು ಆಸ್ಟ್ರೇಲಿಯಾ ಪ್ರಧಾನಮಂತ್ರಿಗಳ ಜೊತೆ ಪಾಲ್ಗೊಳ್ಳಲಿದ್ದಾರೆ.

2021ರ ಮಾರ್ಚ್ ನಲ್ಲಿ ಮೊದಲ ವರ್ಚುವಲ್ ಸಭೆ ನಡೆದಿತ್ತು. ಆನಂತರ ಇದೀಗ ಟೋಕಿಯೋದಲ್ಲಿ ನಡೆಯುತ್ತಿರುವುದು ಕ್ವಾಡ್ ನಾಯಕರ 4ನೇ ಸಂವಾದವಾಗಿದೆ. 2021ರ ಸೆಪ್ಟೆಂಬರ್ನಲ್ಲಿ ವಾಷಿಂಗ್ಟನ್ ಡಿಸಿಯಲ್ಲಿ 2ನೇ ಮುಖಾಮುಖಿ ಶೃಂಗಸಭೆ ಹಾಗೂ 2022ರ ಮಾರ್ಚ್ ನಲ್ಲಿ 3ನೇ ವರ್ಚುವಲ್ ಶೃಂಗಸಭೆ ನಡೆದಿತ್ತು.
ಮೇ 24ರಂದು ನಡೆಯುವ 4ನೇ ಕ್ವಾಡ್ ಶೃಂಗಸಭೆಯಲ್ಲಿ ಭಾರತ-ಪೆಸಿಫಿಕ್ ಪ್ರದೇಶದಲ್ಲಿನ ಬೆಳವಣಿಗೆಗಳು ಮತ್ತು ಪರರಸ್ಪರ ಹಿತಾಸಕ್ತಿಯ ಸಮಕಾಲೀನ ಜಾಗತಿಕ ವಿಷಯಗಳ ಬಗ್ಗೆ ನಾಯಕರು ಚರ್ಚೆಗಳನ್ನು ನಡೆಸಲಿದ್ದಾರೆ.
ಪ್ರಧಾನಿ ಮೋದಿ ಜಪಾನ್ ಪ್ರಧಾನಮಂತ್ರಿ ಫ್ಯೂಮಿಯೊ ಕಿಶಿಡಾ ಜೊತೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಜಪಾನ್ನ ಉದ್ಯಮಿಗಳ ವ್ಯಾವಹಾರಿಕ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಮತ್ತು ಜಪಾನ್ನಲ್ಲಿನ ಭಾರತೀಯ ಸಮುದಾಯದೊಂದಿಗೆ ಸಂವಾದ ನಡೆಸಲಿದ್ದು, ಅವರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಪ್ರಧಾನಿ ಮೋದಿ ಜಪಾನ್ನಲ್ಲಿ ಒಂದು ರಾತ್ರಿ ವಾಸ್ತವ್ಯ ಹೂಡಲಿದ್ದಾರೆ. 23 ಗಂಟೆಗಳಲ್ಲಿ ಮೋದಿ 40 ಸಭೆಗಳಲ್ಲಿ ಪಾಳ್ಗೊಳ್ಳಲಿದ್ದಾರೆ. ಅಮೆರಿಕ ಅಧ್ಯಕ್ಷ ಜೋ ಬೈಡನ್ ಭೇಟಿಯ ವೇಳೆ ಉಕ್ರೇನ್-ರಷ್ಯಾ ಯುದ್ಧದ ಬಗ್ಗೆಯೂ ಪ್ರಧಾನಿ ನರೇಂದ್ರ ಮೋದಿ ಚರ್ಚೆ ನಡೆಸುವ ನಿರೀಕ್ಷೆ ಇದೆ.
2022ರ ಮಾರ್ಚ್ 21ರಂದು ವರ್ಚುವಲ್ ರೂಪದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ದ್ವಿಪಕ್ಷೀಯ ಮಾತುಕತೆ ನಡೆದಿತ್ತು. ನಂತರ ಏಪ್ರಿಲ್ 2ರಂದು ಭಾರತ-ಆಸ್ಟ್ರೇಲಿಯಾ ಆರ್ಥಿಕ ಸಹಕಾರ ಮತ್ತು ವ್ಯಾಪಾರ ಒಪ್ಪಂದ (ಇಸಿಟಿಎ)ಕ್ಕೆ ಸಹಿ ಹಾಕಲಾಗಿತ್ತು.
ಟೋಕಿಯೋದಲ್ಲಿ ಆಸ್ಟ್ರೇಲಿಯಾದ ಪ್ರಧಾನಮಂತ್ರಿಗಳನ್ನು ಮೋದಿ ನೇರವಾಗಿ ಭೇಟಿಯಾಗಲಿದ್ದು, ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸುವ ಸಾಧ್ಯತೆ ಇದೆ.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications