ಮುಸುಕು ಧರಿಸಿದ ಮಹಿಳೆಗೆ ಪ್ರವೇಶ ನಿರಾಕರಿಸಿದ ಬಹ್ರೇನ್ನ ಭಾರತೀಯ ರೆಸ್ಟೋರೆಂಟ್ ಈಗ ಬಂದ್
ಬಹ್ರೇನ್, ಮಾರ್ಚ್ 27: ಮುಸುಕು ಧರಿಸಿದ ಮಹಿಳೆಗೆ ಪ್ರವೇಶವನ್ನು ನಿರಾಕರಿಸಿದ ಆರೋಪದ ಮೇಲೆ ಬಹ್ರೇನ್ನ ಅಧಿಕಾರಿಗಳು ಬಹ್ರೇನ್ನಲ್ಲಿನ ಭಾರತೀಯ ರೆಸ್ಟೋರೆಂಟ್ ಅನ್ನು ಮುಚ್ಚಿದ್ದಾರೆ ಎಂದು ಸುದ್ದಿ ವೆಬ್ಸೈಟ್ ಜಿಡಿಎನ್ ಆನ್ಲೈನ್ ವರದಿ ಮಾಡಿದೆ.
ಬಹ್ರೇನ್ ಪ್ರವಾಸೋದ್ಯಮ ಮತ್ತು ವಸ್ತುಪ್ರದರ್ಶನ ಪ್ರಾಧಿಕಾರವು ಈ ಬಗ್ಗೆ ತನಿಖೆಯನ್ನು ಪ್ರಾರಂಭಿಸಿದೆ. ಬಹ್ರೇನ್ನ ರಾಜಧಾನಿ ಮನಾಮಾದ ಅದ್ಲಿಯಾ ಪ್ರದೇಶದಲ್ಲಿರುವ ಲ್ಯಾಂಟರ್ನ್ಸ್ ರೆಸ್ಟೋರೆಂಟ್ನಲ್ಲಿ ಈ ಘಟನೆ ನಡೆದಿದೆ ಎಂದು ವರದಿ ಉಲ್ಲೇಖ ಮಾಡಿದೆ.
ದೇಶದ ಕಾನೂನುಗಳನ್ನು ಉಲ್ಲಂಘಿಸುವ ನೀತಿಗಳನ್ನು ಜಾರಿಗೊಳಿಸುವುದನ್ನು ರೆಸ್ಟೋರೆಂಟ್ಗಳು ತಪ್ಪಿಸಬೇಕು ಎಂದು ಬಹ್ರೇನ್ನ ಅಧಿಕಾರಿಗಳು ಸೂಚನೆ ನೀಡಿ ಈ ಬಹ್ರೇನ್ನಲ್ಲಿನ ಭಾರತೀಯ ರೆಸ್ಟೋರೆಂಟ್ ಅನ್ನು ಮುಚ್ಚಿದ್ದಾರೆ ಎಂದು ದಿ ಡೈಲಿ ಟ್ರಿಬ್ಯೂನ್ ವರದಿ ಹೇಳಿದೆ.

"ಜನರ ನಡುವೆ ತಾರತಮ್ಯ ಮಾಡುವ ಎಲ್ಲಾ ಕ್ರಮಗಳನ್ನು ನಾವು ತಿರಸ್ಕರಿಸುತ್ತೇವೆ, ವಿಶೇಷವಾಗಿ ಅವರ ರಾಷ್ಟ್ರೀಯ ಗುರುತಿನ ಬಗ್ಗೆ ತಾರತಮ್ಯ ಮಾಡುವುದನ್ನು ನಾವು ಸಹಿಸಲಾರೆವು," ಎಂದು ಬಹ್ರೇನ್ ಪ್ರವಾಸೋದ್ಯಮ ಮತ್ತು ವಸ್ತುಪ್ರದರ್ಶನ ಪ್ರಾಧಿಕಾರವು ತಿಳಿಸಿದೆ. ಪ್ರವಾಸೋದ್ಯಮ-ಸಂಬಂಧಿತ ಸಂಸ್ಥೆಗಳಿಗೆ ಸಂಬಂಧಿಸಿದ 1986 ರ ಡಿಕ್ರಿ ಕಾನೂನು ಸಂಖ್ಯೆ 15 ರ ಪ್ರಕಾರ ರೆಸ್ಟೋರೆಂಟ್ ಅನ್ನು ಮುಚ್ಚಲಾಗಿದೆ ಎಂದು ಬಹ್ರೇನ್ ಪ್ರವಾಸೋದ್ಯಮ ಮತ್ತು ವಸ್ತುಪ್ರದರ್ಶನ ಪ್ರಾಧಿಕಾರವು ಸೇರಿಸಿದೆ.
ಮಹಿಳೆಗೆ ಪ್ರವೇಶ ನಿರಾಕರಿಸಿದ್ದ ಭಾರತೀಯ ರೆಸ್ಟೋರೆಂಟ್
ಗುರುವಾರ ಬಹ್ರೇನ್ನಲ್ಲಿನ ಭಾರತೀಯ ರೆಸ್ಟೋರೆಂಟ್ ಲ್ಯಾಂಟರ್ನ್ಸ್ ಮಹಿಳೆಯೊಬ್ಬರನ್ನು ರೆಸ್ಟೋರೆಂಟ್ಗೆ ಪ್ರವೇಶ ಮಾಡುವುದಕ್ಕೆ ಅವಕಾಶ ನೀಡಿಲ್ಲ. ಮಹಿಳೆ ಮುಸುಕು ಧರಿಸಿದ್ದ ಕಾರಣಕ್ಕೆ ಈ ಮಹಿಳೆಗೆ ಈ ರೆಸ್ಟೋರೆಂಟ್ನಲ್ಲಿ ಅವಕಾಶ ನೀಡಿಲ್ಲ ಎಂದು ವರದಿ ಹೇಳಿದೆ. ಈ ಕಾರಣದಿಂದಾಗಿ ಈ ರೆಸ್ಟೋರೆಂಟ್ ಅನ್ನು ಈಗ ಮುಚ್ಚಲಾಗಿದೆ.
ಲ್ಯಾಂಟರ್ನ್ಗೆ ಎಲ್ಲರಿಗೂ ಸ್ವಾಗತ
ಈ ನಡುವೆ "ಸುಂದರವಾದ ಬಹ್ರೇನ್ನಲ್ಲಿ 35 ವರ್ಷಗಳಿಂದ ನಾವು ಎಲ್ಲಾ ರಾಷ್ಟ್ರೀಯತೆಗಳಿಗೆ ಸೇವೆ ಸಲ್ಲಿಸುತ್ತಿದ್ದೇವೆ. ಲ್ಯಾಂಟರ್ನ್ಗೆ ಎಲ್ಲರಿಗೂ ಸ್ವಾಗತವಿದೆ," ಎಂದು ರೆಸ್ಟೋರೆಂಟ್ ಇನ್ಸ್ಟಾಗ್ರಾಮ್ನಲ್ಲಿ ತಿಳಿಸಿದೆ. ಮಾರ್ಚ್ 29 ರಂದು ವಿಶೇಷ ಆಹಾರ ಸೇವನೆ ಮಾಡಲು ಜನರು ಆಗಮಿಸಿ ಎಂದು ರೆಸ್ಟೋರೆಂಟ್ ಆಹ್ವಾನವನ್ನು ಕೂಡಾ ನೀಡಿದೆ.
ಕರ್ನಾಟಕದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಿರುವ ನಡುವೆಯೇ ಬಹ್ರೇನ್ನಲ್ಲಿ ಈ ಘಟನೆ ನಡೆದಿದೆ. ಫೆಬ್ರವರಿಯಲ್ಲಿ ಹಲವಾರು ವಾರಗಳವರೆಗೆ ಮುಸ್ಲಿಂ ವಿದ್ಯಾರ್ಥಿನಿಯರು ತಮಗೆ ಹಿಜಾಬ್ ಧರಿಸಿ ತರಗತಿಗೆ ಹಾಜರಾಗಲು ಅವಕಾಶ ನೀಡಬೇಕು ಎಂದು ಹೇಳಿದರೆ, ಇನ್ನೊಂದೆಡೆ ಹಿಜಾಬ್ ಧರಿಸಿದರೆ ನಾವು ಕೇಸರಿ ಶಾಲು ಧರಿಸುತ್ತೇವೆ ಎಂದು ಹೇಳಿ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ ಆಗಮಿಸಿದ್ದರು. ಈ ಬೆನ್ನಲ್ಲೇ ಹಿಜಾಬ್ ಅನ್ನು ಶಾಲಾ ವಾತಾವರಣದಲ್ಲಿ ನಿಷೇಧ ಮಾಡಲಾಗಿದೆ. ಹೈಕೋರ್ಟ್ ಸರ್ಕಾರದ ಈ ಆದೇಶವನ್ನು ಎತ್ತಿ ಹಿಡಿದಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications