ಹಲವು ತಿಂಗಳಿನಿಂದ ಬಂದರಿನಲ್ಲಿ ಸಿಲುಕಿಕೊಂಡ ಭಾರತದ ನಾವಿಕರು: ಮನೆಗೆ ಮರಳಲು ಬಿಡದ ಚೀನಾ
ಬೀಜಿಂಗ್, ಡಿಸೆಂಬರ್ 25: ಆಸ್ಟ್ರೇಲಿಯಾದಿಂದ ಕಲ್ಲಿದ್ದಲು ಸಾಗಿಸುತ್ತಿದ್ದ ಭಾರತದ ಎರಡು ಸರಕು ಸಾಗಣೆ ನೌಕೆಗಳ ನಾವಿಕರು ಚೀನಾದಲ್ಲಿ ಸಿಲುಕಿಕೊಂಡಿದ್ದಾರೆ. ಈ ಘಟನೆಗೂ ಉಭಯ ದೇಶಗಳ ನಡುವಿನ ಗಡಿ ಬಿಕ್ಕಟಿನ ಸಮಸ್ಯೆಗೂ ಯಾವುದೇ ಸಂಬಂಧ ಇಲ್ಲ ಎಂದು ಚೀನಾ ಹೇಳಿಜೆ ನೀಡಿದೆ.
ಚೀನಾದಲ್ಲಿ ಕೊರೊನಾ ವೈರಸ್ ಸೋಂಕಿನ ನಿಯಂತ್ರಣಕ್ಕೆ ತೆಗೆದುಕೊಂಡಿರುವ ಕ್ವಾರೆಂಟೈನ್ ಕ್ರಮಗಳ ಕಾರಣದಿಂದ ಭಾರತಕ್ಕೆ ಸೇರಿದ ಎರಡು ಹಡಗುಗಳು ಬಂದರಿನಲ್ಲಿ ಸಿಲುಕಿವೆ ಎಂದು ಚೀನಾ ವಿದೇಶಾಂಗ ಸಚಿವಾಲಯ ಹೇಳಿದೆ.
ಈ ಎರಡು ಸರಕು ಸಾಗಣೆ ಹಡಗುಗಳಲ್ಲಿ ಭಾರತದ 39 ನಾವಿಕರಿದ್ದಾರೆ. ಭಾರತದ ಎಂವಿ ಜಾಗ್ ಆನಂದ್ ಮತ್ತು ಎಂವಿ ಅನಸ್ತೇಷಿಯಾ ಹಡಗುಗಳು ಚೀನಾದ ಹೆಬೀನಲ್ಲಿನ ಉತ್ತರ ಪ್ರಾಂತ್ಯದಲ್ಲಿರುವ ಜಿಂಗ್ಟಾಂಗ್ ಮತ್ತು ಕಾವೊಫೀಡಿಯನ್ ಬಂದರುಗಳಲ್ಲಿನ ನೀರಿನಲ್ಲಿ ಹಲವು ತಿಂಗಳುಗಳಿಂದ ಸಿಲುಕಿಕೊಂಡಿದೆ. ಮುಂದೆ ಓದಿ.

ಸರಕು ಇಳಿಸಲೂ ಅವಕಾಶವಿಲ್ಲ
ಹಡಗಿನಲ್ಲಿರುವ ಸರಕನ್ನು ಇಳಿಸಲು ಮತ್ತು ಸಿಬ್ಬಂದಿ ದಡಕ್ಕೆ ಬರಲು ಕೂಡ ಅವಕಾಶ ನೀಡುತ್ತಿಲ್ಲ. ಇದು ಅವರ ಮಾನಸಿಕ ಮತ್ತು ದೈಹಿಕ ಆರೋಗ್ಯದ ಮೇಲೆ ಕೆಟ್ಟಪರಿಣಾಮ ಬೀರುತ್ತಿದೆ ಎಂದು ವರದಿಯಾಗಿದೆ. ಈ ಹಡಗುಗಳು ಬಂದರಿನಿಂದ ಹೊರಡಲು ಅವಕಾಶ ನೀಡದಿರುವ ಬಗ್ಗೆ ಚೀನಾದ ಅಧಿಕಾರಿಗಳನ್ನು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಪ್ರಶ್ನಿಸಿದೆ.

ಕಾರಣ ಸ್ಪಷ್ಟವಾಗುತ್ತಿಲ್ಲ
'ಭಾರತದ ಹಡಗುಗಳು ಬಂದ ಬಳಿಕ ಅಲ್ಲಿಗೆ ಬಂದ ಅನೇಕ ಹಡಗುಗಳಿಗೆ ತಮ್ಮ ಸರಕು ಇಳಿಸಿ ಅಲ್ಲಿಂದ ನಿರ್ಗಮಿಸಲು ಅವಕಾಶ ನೀಡಲಾಗಿದೆ ಎನ್ನುವುದು ನಮಗೆ ತಿಳಿದಿದೆ. ಇದಕ್ಕೆ ಕಾರಣಗಳು ಇನ್ನೂ ಸ್ಪಷ್ಟವಾಗಿಲ್ಲ' ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅನುರಾಗ್ ಶ್ರೀವಾಸ್ತವ್ ಹೇಳಿದ್ದರು.

ಬಿಕ್ಕಟ್ಟಿಗೂ ಇದಕ್ಕೂ ಸಂಬಂಧವಿಲ್ಲ
ಕ್ವಾರೆಂಟೈನ್ನ ನಿರ್ದಿಷ್ಟ ಷರತ್ತುಗಳನ್ನು ಪೂರೈಸಿದ ಹಡಗುಗಳು ಮತ್ತು ಸಿಬ್ಬಂದಿಗೆ ಅಲ್ಲಿಂದ ಹೊರಡಲು ಅನುಮತಿ ನೀಡಲಾಗಿದೆ. ಭಾರತದೊಂದಿಗೆ ಚೀನಾ ನಿರಂತರ ಸಂಪರ್ಕದಲ್ಲಿದ್ದು, ಅವರ ಮನವಿಗೆ ಸ್ಪಂದಿಸುತ್ತಿದೆ. ಅವರಿಗೆ ಅಗತ್ಯ ಎಲ್ಲ ನೆರವು ನೀಡಲಾಗುತ್ತಿದೆ ಎಂದು ಹೇಳಿರುವ ಚೀನಾ ವಿದೇಶಾಂಗ ಸಚಿವಾಲಯದ ವಕ್ತಾರ ವಾಂಗ್ ವೆನ್ಬಿನ್, ಪ್ರಸ್ತುತ ಚೀನಾವು ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಹೊಂದಿರುವ ಸೇನೆ ಮತ್ತು ವ್ಯಾಪಾರ ವಿವಾದಗಳಿಗೆ ಇದು ಯಾವುದೇ ರೀತಿ ಸಂಬಂಧ ಹೊಂದಿಲ್ಲ ಎಂದಿದ್ದಾರೆ.

ಹಡಗಿನಲ್ಲಿ ಔಷಧಗಳ ಕೊರತೆ
ಎಂವಿ ಜಾಗ್ ಆನಂದ್ ಹಡಗಿನಲ್ಲಿರುವ 23 ಭಾರತೀಯ ಸಿಬ್ಬಂದಿ ಮನೆಗೆ ಮರಳಲು ಭಾರತ ಸರ್ಕಾರದ ಸಹಾಯ ಕೋರಿದ್ದಾರೆ. ಅವರಲ್ಲಿ ಕೆಲವರು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದು, ಹಡಗಿನಲ್ಲಿ ಔಷಧಗಳ ಕೊರತೆ ಎದುರಾಗಿದೆ. ಈ ಹಡಗು ಹೆಬೀ ಪ್ರಾಂತ್ಯದ ಜಿಂಗ್ಟಾಂಗ್ ಬಂದರಿನಲ್ಲಿ ಜೂನ್ 13ರಿಂದಲೂ ಇದ್ದರೆ, ಮತ್ತೊಂದಿ ಹಡಗು ಸೆಪ್ಟೆಂಬರ್ 20ರಿಂದ ಕಾವೊಫೀಡಿಯನ್ ಬಂದರಿನಲ್ಲಿದೆ.
-
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು












Click it and Unblock the Notifications