ಭಾರತೀಯರು ಪಾಲ್ಗೊಂಡಿದ್ದ 'ಗುರುತ್ವ ಅಲೆ'ಗಳ ಸಂಶೋಧನೆಗೆ ನೊಬೆಲ್
ಸ್ಟಾಕ್ ಹೋಮ್, ಅಕ್ಟೋಬರ್ 4: 'ಗುರುತ್ವ ತರಂಗ'ಗಳ ಅನ್ವೇಷಣೆಗೆ 2017ನೇ ಸಾಲಿನ ನೊಬೆಲ್ ಪ್ರಶಸ್ತಿ ಸಂದಿದೆ.
ಅಮೆರಿಕಾದ ಭೌತ ವಿಜ್ಞಾನಿಗಳಾದ ರೈನರ್ ವೆಯಿಸ್, ಬ್ಯಾರಿ ಬ್ಯಾರಿಶ್ ಮತ್ತು ಕಿಪ್ ಥಾರ್ನೆ ನೊಬೆಲ್ ಪಾರಿತೋಷಕ ಪಡೆದಿದ್ದು, ಈ ಗುರುತ್ವ ಅಲೆಗಳ ಅನ್ವೇಷಣೆಯಲ್ಲಿ ಇಬ್ಬರು ಭಾರತೀಯ ವಿಜ್ಞಾನಿಗಳೂ ಪಾಲ್ಗೊಂಡಿದ್ದರು.

ದಿವಂಗತ ಸಿವಿ ವಿಶ್ವೇಶ್ವರ ಮತ್ತು ಸಂಜೀವ್ ಧುರಂಧರ್ ಈ ಸಂಶೋಧನೆಯಲ್ಲಿ ಪಾಲ್ಗೊಂಡಿದ್ದರು ಎಂಬುದು ಭಾರತೀಯರಗೆಲ್ಲಾ ಹೆಮ್ಮೆಯ ವಿಷಯವಾಗಿದೆ.
2016ರ ಫೆಬ್ರವರಿ 18ರಂದು ಗುರುತ್ವ ತರಂಗಗಳ ಅನ್ವೇಷಣೆಯನ್ನು ಘೋಷಿಸಲಾಗಿತ್ತು. ವಿಶ್ವವಿಖ್ಯಾತ ವಿಜ್ಞಾನಿ ಆಲ್ಬರ್ಟ್ ಐನ್ ಸ್ಟೈನ್ ಸಿದ್ಧಾಂತ ಆಧರಿಸಿ ನಡೆದ ಪ್ರಯೋಗದಲ್ಲಿ ಗುರುತ್ವ ಅಲೆಗಳ ಇರುವಿಕೆ ಸಾಬೀತಾಗಿತ್ತು. ಐನ್ ಸ್ಟೈನ್ ಸಾಪೇಕ್ಷ ಸಿದ್ದಾಂತ ನೀಡಿದ 100 ವರ್ಷಗಳ ನಂತರ ಗುರುತ್ವದ ಅಲೆಗಳ ಇರುವಿಕೆ ಋಜುವಾತಾಗಿತ್ತು. ಅರ್ಹವಾಗಿಯೇ ಈ ಸಂಶೋಧನೆ ನೊಬೆಲ್ ಪ್ರಶಸ್ತಿ ಪಡೆದುಕೊಂಡಿದೆ.

ತಂಡವಾಗಿ ಸಂಶೋಧನೆ ನಡೆಸಿದರೂ ಗರಿಷ್ಠ ಮೂರು ಜನರಿಗೆ ಮಾತ್ರ ನೊಬೆಲ್ ಪ್ರಶಸ್ತಿ ನೀಡುವುದರಿಂದ ಭಾರತೀಯರು ನೊಬೆಲ್ ಪ್ರಶಸ್ತಿಯಿಂದ ವಂಚಿತರಾಗಿದ್ದಾರೆ. ಗುರುತ್ವ ತರಂಗಳ ಸಂಶೋಧನೆಯಲ್ಲಿ ಧುರಂಧರ್ ಪ್ರಮುಖ ಪಾತ್ರ ವಹಿಸಿದ್ದರು. ಇನ್ನು ಸಿವಿ ವಿಶ್ವೇಶ್ವರರ ಪಾತ್ರವೂ ಪ್ರಮುಖವಾಗಿದ್ದು ಅವರು ತಮ್ಮ 74ನೇ ವಯಸ್ಸಿನಲ್ಲಿ, ಈ ವರ್ಷದ ಆರಂಭದಲ್ಲಿ ಅಸುನೀಗಿದ್ದರು.
37 ವಿಜ್ಞಾನಿಗಳ ತಂಡ ಈ ಗುರುತ್ವ ಅಲೆಗಳನ್ನು ಪತ್ತೆ ಹಚ್ಚುವ 'ಲೈಗೊ' (ಲೇಸರ್ ಇಂಟರ್ಫೆರೊಮೀಟರ್ ಗ್ರಾವಿಟೇಶನಲ್- ವೇವ್ ಒಬ್ಸರ್ವೇಟರಿ) ಸಂಶೋಧನೆಯನ್ನು ನಡೆಸಿತ್ತು. ಇದರಲ್ಲಿ ಇಬ್ಬರು ಭಾರತೀಯರು ಇದ್ದರು.
ರಸಾಯನ ಶಾಸ್ತ್ರ ನೊಬೆಲ್
ಪರಮಾಣುಗಳ ಮಟ್ಟದಲ್ಲಿ ಕೆಲಸ ಮಾಡುವ ಮಾನವ ಜೀವಕೋಶಗಳ ವೀಕ್ಷಣೆಯ ಸಂಶೋಧನೆಗೆ ರಸಾಯನಿಕ ವಿಭಾಗದ ನೊಬೆಲ್ ಪ್ರಶಸ್ತಿ ದಕ್ಕಿದೆ.
ಸ್ವಿಟ್ಜರ್ಲಾಂಡ್ ನ ಸಂಶೋಧಕ ಜಾಕ್ವೆಸ್ ಡುಬೋಶೆಟ್, ಅಮೆರಿಕಾದ ಜೋಕಿಮ್ ಫ್ರಾಂಕ್ ಮತ್ತು ಬ್ರಿಟನ್ ನ ರಿಚರ್ಡ್ ಹೆಂಡರ್ಸನ್ ನೊಬೆಲ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications