ದುಷ್ಕರ್ಮಿಗಳ ದಾಳಿಯಿಂದ ಕಾಂಗೋ ಸೇನೆಯನ್ನು ರಕ್ಷಿಸಿದ ಭಾರತೀಯ ಸೈನಿಕರು
ಕಿನ್ಶಾಸ, ಕಾಂಗೊ, ಮೇ 26: ಆಫ್ರಿಕಾ ನಾಡಿನಲ್ಲಿ ಭಾರತೀಯ ಸೈನಿಕರು ತಮ್ಮ ಶೌರ್ಯ ಪ್ರದರ್ಶನ ಮಾಡಿದ್ದಾರೆ. ಕಾಂಗೋ ದೇಶದ ಸೇನೆಯ ಮೇಲೆ ಸಶಸ್ತ್ರಧಾರಿಗಳ ಗುಂಪೊಂದು ನಡೆಸಿದ ದಾಳಿಯನ್ನು ಭಾರತೀಯ ಸೈನಿಕರು ವಿಫಲಗೊಳಿಸಿದ್ದಾರೆ. ಮೇ 22ರಂದು ನಡೆದಿರುವ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ವಿಶ್ವಸಂಸ್ಥೆಯ ಶಾಂತಿಪಾಲನಾ ಪಡೆಗಳ ಭಾಗವಾಗಿ ಭಾರತೀಯ ಸೈನಿಕರು ಕಾಂಗೋ ನಾಡಿನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.
ಕಾಂಗೋದಲ್ಲಿ ಅಂದು ನಡೆದ ದಾಳಿ ಘಟನೆಯನ್ನು ವಿಶ್ವಸಂಸ್ಥೆ ಭದ್ರತಾ ಮಂಡಳಿ ಗಂಭೀರವಾಗಿ ಪರಿಗಣಿಸಿದ್ದು, ಕೃತ್ಯವನ್ನು ಬಲವಾಗಿ ಖಂಡಿಸಿ ಹೇಳಿಕೆ ನೀಡಿದೆ. "ಶಾಂತಿಪಾಲಕರನ್ನು (ವಿಶ್ವಸಂಸ್ಥೆಯ) ಗುರಿಯಾಗಿಸಿ ನಡೆದ ದಾಳಿ ಖಂಡನೀಯ. ಇಂಥ ದಾಳಿಗಳು ಅಂತರರಾಷ್ಟ್ರೀಯ ಕಾನೂನಿನಲ್ಲಿ ಯುದ್ಧಾಪರಾಧ ಆಗುತ್ತದೆ" ಎಂದು ಯುಎನ್ಎಸ್ಸಿ ಎಚ್ಚರಿಕೆ ನೀಡಿದೆ.
ಕಾಂಗೋ ದೇಶದಲ್ಲಿ ಸಾಕಷ್ಟು ನಾಗರಿಕ ಮತ್ತು ಭದ್ರತಾ ಸಮಸ್ಯೆಗಳು ಕಾಡುತ್ತಿವೆ. ಸಶಸ್ತ್ರ ಗುಂಪುಗಳು ಆಗಾಗ್ಗೆ ದಾಳಿ ಮಾಡಿ ಅಮಾಯಕ ಜನರನ್ನು ಬಲಿತೆಗೆದುಕೊಳ್ಳುತ್ತಿವೆ. ಅದರಲ್ಲೂ ಪೂರ್ವಭಾಗದ ಕಾಂಗೋ ಪ್ರದೇಶಗಳಲ್ಲಿ ಇಂಥ ಗುಂಪುಗಳು ಭಯಾನಕ ದಾಳಿಗಳನ್ನು ಮಾಡಿವೆ. ಈ ಘಟನೆಗಳ ಬಗ್ಗೆ ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಸದಸ್ಯ ರಾಷ್ಟ್ರಗಳು ಆತಂಕ ವ್ಯಕ್ತಪಡಿಸಿವೆ.

"ಕಾಂಗೋ ಪ್ರಜಾತಂತ್ರ ಗಣರಾಜ್ಯ ದೇಶ ಮತ್ತು ಅದರ ಜೊತೆಗಾರರಾಗಿರುವ ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆಗಳು ಮೊದಲಾದವು ಕೂಡಲೇ ಪರಿಸ್ಥಿತಿ ನಿಭಾಯಿಸಲು ಸಕಾಲದಲ್ಲಿ ಅವಶ್ಯಕ ನೆರವು ಒದಗಿಸಬೇಕೆಂದು ಭದ್ರತಾ ಮಂಡಳಿ ಸದಸ್ಯ ದೇಶಗಳು ಒತ್ತಾಯಿಸುತ್ತಿವೆ" ಎಂದು ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಕಾಂಗೋ ದೇಶದಲ್ಲಿ ವಿಶ್ವಸಂಸ್ಥೆಯ ಪೀಸ್ಕೀಪಿಂಗ್ ಪಡೆಗಳಲ್ಲಿ ಭಾರತೀಯ ಸೈನಿಕರೂ ಇದ್ದಾರೆ. ಜೊತೆಗೆ ವಿವಿಧ ದೇಶಗಳ ಸೈನಿಕರೂ ಇದ್ದಾರೆ. ಯಾವುದೇ ದೇಶದಲ್ಲಿ ಭದ್ರತಾ ಸಮಸ್ಯೆ ಎದುರಾದಾಗ ಅಗತ್ಯ ಬಿದ್ದಲ್ಲಿ ವಿಶ್ವಸಂಸ್ಥೆಯ ಈ ಶಾಂತಿಪಾಲನಾ ಪಡೆಗಳು ಧಾವಿಸುತ್ತವೆ. ಅದರಲ್ಲಿ ವಿವಿಧ ದೇಶಗಳ ಸೈನಿಕರೂ ಇರುತ್ತಾರೆ.
(ಒನ್ಇಂಡಿಯಾ ಸುದ್ದಿ)
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications