ಟಿಬೆಟ್ ಗಡಿಯಲ್ಲಿ ಸೇನಾ ನಿಯೋಜನೆ ಹೆಚ್ಚಿಸುತ್ತಿರುವ ಚೀನಾ
ನವದೆಹಲಿ, ಜುಲೈ 27: ಪೂರ್ವ ಲಡಾಖ್ನಲ್ಲಿ ಚೀನಾದ ತಕರಾರು ಮುಗಿದ ಬೆನ್ನಲ್ಲೇ ಟಿಬೆಟ್ ಗಡಿಯಲ್ಲಿ ಸೇನೆ ನಿಯೋಜಿಸುತ್ತಿರುವುದು ವರದಿಯಾಗಿದೆ.
Recommended Video
ಎಮಿಸ್ಯಾಟ್ ಉಪಗ್ರಹ ಸಂಗ್ರಹಿಸಿರುವ ಚಿತ್ರಗಳನ್ನು ಆಧರಿಸಿ ಭಾರತೀಯ ಗುಪ್ತಚರ ಸಂಸ್ಥೆಗಳು ಈ ಅಂಶವನ್ನು ಸರ್ಕಾರಕ್ಕೆ ತಿಳಿಸಿದೆ.
ಅರುಣಾಚಲ ಪ್ರದೇಶ ಗಡಿಗೆ ಹತ್ತಿರವಾಗಿ ಟಿಬೆಟಿಯನ್ ಪ್ರದೇಶಗಳಲ್ಲಿ ಚೀನಾ ಸೈನಿಕರನ್ನು ಹೆಚ್ಚೆಚ್ಚು ನಿಯೋಜಿಸುತ್ತಿದೆ ಎಂದು ಹೇಳಲಾಗಿದೆ.

ಕಳೆದ ವಾರ ಪೂರ್ವ ಲಡಾಖ್ನಲ್ಲಿ 40 ಸಾವಿರಕ್ಕೂ ಅಧಿಕ ಸೈನಿಕರನ್ನು ನಿಯೋಜಿಸಿರುವ ಸುದ್ದಿ ಬಂದಿತ್ತು, ಇದರ ಬೆನ್ನಲ್ಲೇ ಚೀನಾ ಹಾಗೂ ಭಾರತೀಯ ಸೇನಾ ಅಧಿಕಾರಿಗಳು ಮಾತುಕತೆ ನಡೆಸಿ ಸೇನೆಯನ್ನು ಸಂಪೂರ್ಣ ಹಿಂತೆಗೆದುಕೊಳ್ಳಲು ಒಪ್ಪಿಗೆ ಸೂಚಿಸಿದ್ದವು.
ಆದರೆ ಈ ಕ್ರಮವು ಈಗ ಮತ್ತಷ್ಟು ಸಂಶಯಕ್ಕೆ ಎಡೆಮಾಡಿಕೊಟ್ಟಿದೆ.ಸೇನಾ ಮೂಲಗಳ ಪ್ರಕಾರ ಪೂರ್ವ ಲಡಾಖ್ನಲ್ಲಿ ಚೀನಾ ಸೇನಾ ನಿಯೋಜನೆ ಹಾಗೆಯೇ ಇದ್ದು, ಗಡಿ ಪ್ರದೇಶದ ತನ್ನ ಕಡೆ ಕೆಲವು ನಿರ್ಮಾಣ ಕಾರ್ಯಗಳನ್ನು ಮಾಡುತ್ತಿದೆ ಎಂದು ವರದಿಯಾಗಿದೆ.
ಇನ್ನೊಂದೆಡೆ ನೆರೆಹೊರೆಯ ದೇಶಗಳನ್ನು ಚೀನಾ ಎತ್ತಿಕಟ್ಟುತ್ತಿದೆ. ಹಾಗೆಯೇ ಮುಂದಿನ ಚಳಿಗಾಲದಲ್ಲಿ ಪಾಕಿಸ್ತಾನ ಹಾಗೂ ಚೀನಾ ಒಟ್ಟಾಗಿ ಭಾರತದ ಮೇಲೆ ದಾಳಿ ನಡೆಸುವ ಸಾಧ್ಯತೆ ಇದೆ ಎನ್ನುವ ಊಹಾಪೋಹಗಳು ಹರಿದಾಡುತ್ತಿವೆ.
ಪೂರ್ವ ಲಡಾಖ್ ನಲ್ಲಿನ ವಾಸ್ತವಿಕ ನಿಯಂತ್ರಣ ರೇಖೆ(ಎಲ್ಎಸಿ) ಬಳಿ ಚೀನಾ ಸೇನೆಯ ಚಲನವಲನದ ಮೇಲೆ ಕಣ್ಣಿಡಲು ಭಾರತೀಯ ಸೇನೆ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಧೆ(ಡಿಆರ್ಡಿಒ) ನಿರ್ಮಾಣದ ಭಾರತ್ ಡ್ರೋನ್ ಗಳನ್ನು ಬಳಸಿಕೊಳ್ಳುತ್ತಿದೆ.
ವಿಶ್ವದ ಅತ್ಯಂತ ಚುರುಕುಬುದ್ಧಿಯ ಮತ್ತು ಹಗುರ ಕಣ್ಗಾವಲು ಡ್ರೋನ್ ಗಳ ಪಟ್ಟಿಗೆ ಭಾರತ್ ಸರಣಿಯ ಡ್ರೋನ್ ಗಳನ್ನು ಸೇರಿಸಬಹುದಾಗಿದೆ.ಈ ಭಾರತ್ ಡ್ರೋನ್ ಸಣ್ಣ ಹಾಗೂ ಶಕ್ತಿಯುತವಾದ ಡ್ರೋನ್ ಆಗಿದ್ದು ಸ್ಥಳದಲ್ಲಿ ನಿಖರವಾಗಿ ಕಾರ್ಯ ನಿರ್ವಹಿಸಬಲ್ಲದು. ಮಿತ್ರರು ಹಾಗೂ ವೈರಿಗಳನ್ನು ಪತ್ತೆ ಹಚ್ಚಲು ಕೃತಕ ಬುದ್ದಿಮತ್ತೆಯನ್ನು ಅಳವಡಿಸಲಾಗಿದೆ. ಅದಕ್ಕೆ ಅನುಗುಣವಾಗಿ ಈ ಡ್ರೋನ್ ಕಾರ್ಯ ನಿರ್ವಹಿಸುತ್ತದೆ.
-
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications