ಡಬ್ಲಿನ್ ನಲ್ಲಿ ಸೆಲ್ಫಿ ಹುಚ್ಚಿಗೆ ಭಾರತದ ವಿದ್ಯಾರ್ಥಿ ಬಲಿ
ಡಬ್ಲಿನ್ (ಐರ್ಲೆಂಡ್), ಜನವರಿ 05 : ಐರ್ಲೆಂಡ್ ನಲ್ಲಿರುವ ಬೆಟ್ಟದ ತುದಿಯಲ್ಲಿ ನಿಂತು ಸೆಲ್ಫಿ ತೆಗೆದುಕೊಳ್ಳುವಾಗ ಆಯತಪ್ಪಿ ಬಿದ್ದು ಭಾರತದ ವಿದ್ಯಾರ್ಥಿಯೊಬ್ಬ ಬಿದ್ದು ಅಸುನೀಗಿದ್ದಾನೆ ಎಂದು ಡಬ್ಲಿನ್ ಪೊಲೀಸರು ತಿಳಿಸಿದ್ದಾರೆ.
ಇಪ್ಪತ್ತರ ಆಸುಪಾಸಿನಲ್ಲಿರುವ ಯುವಕನ ವಿವರಗಳು ಇನ್ನೂ ಪತ್ತೆಯಾಗಿಲ್ಲ. ಆದರೆ, ಆತ ಡಬ್ಲಿನ್ ವಿಶ್ವವಿದ್ಯಾಲಯವೊಂದರಲ್ಲಿ ಅಧ್ಯಯನ ಮಾಡುತ್ತಿದ್ದ ಎಂದು ಮಾತ್ರ ತಿಳಿದುಬಂದಿದೆ.
ಶುಕ್ರವಾರ ಮಧ್ಯಾಹ್ನ ಈ ಘಟನೆ ಜರುಗಿದೆ. ಕಂಟ್ರಿ ಕ್ಲೇರ್ ನಲ್ಲಿರುವ ಅತ್ಯಂತ ಜನಪ್ರಿಯ ತಾಣವಾಗಿರುವ ಮೋಹರ್ ಬೆಟ್ಟದ ತುದಿಯಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳುವಾಗ ಈ ದುರ್ಘಟನೆ ನಡೆದಿದೆ. ನೂರಾರು ಜನರು ಅಲ್ಲಿ ಇದ್ದಾಗಲೇ ಈ ಘಟನೆ ಜರುಗಿದೆ.

ದುರ್ಷಟನೆಯ ಅಲಾರ್ಮ್ ಮೊಳಗಿದ ಕೂಡಲೆ ಆತನ ದೇಹದ ಹುಡುಕಾಟಕ್ಕೆ ಹೆಲಿಕಾಪ್ಟರ್, ತುರ್ತು ಸೇವೆ ಕರೆಸಿಕೊಳ್ಳಲಾಯಿತು. ಸಮುದ್ರ ತಟದಲ್ಲಿ ಬಿದ್ದಿದ್ದ ವಿದ್ಯಾರ್ಥಿಯನ್ನು ಹತ್ತಿರದ ಡೂಲಿನ್ ಗೆ ಕರೆದೊಯ್ಯಲಾಯಿತಾದರೂ ಅಲ್ಲಿಗೆ ಕರೆದುಕೊಂಡು ಹೋಗುವಾಗಲೇ ಕೊನೆಯುಸಿರೆಳೆದಿದ್ದ.
2007ರಲ್ಲಿ ಇದೇ ಸ್ಥಳದಲ್ಲಿ ಇಂಥದೇ ದುರ್ಘಟನೆ ನಡೆದಿತ್ತು. ಹಂಗರಿಯ ವ್ಯಕ್ತಿಯೊಬ್ಬರು ಇಲ್ಲಿ ಫೋಟೋ ತೆಗೆದುಕೊಳ್ಳುವಾಗ ಆಯತಪ್ಪಿ ಬಿದ್ದು ಅಸುನೀಗಿದ್ದರು. ಪೊಲೀಸರು ವಿದ್ಯಾರ್ಥಿಯ ಭಾರತದಲ್ಲಿರುವ ಪೋಷಕರನ್ನು ಸಂಪರ್ಕಿಸಲು ಯತ್ನಿಸುತ್ತಿದ್ದಾರೆ.
ಈ ಸೆಲ್ಫಿ ಹುಚ್ಚು ಎಂದು ಮಾಯವಾಗುವುದೋ? ಸೆಲ್ಫಿ ಎನ್ನುವುದು ಒಂದು ಮಾನಸಿಕ ಅಸ್ವಸ್ಥತೆಯಂತಾಗಿದೆ. ಹಲವರು ಸಮುದ್ರದ ಅಲೆಗಳಿಗೆ, ರೈಲಿನ ಹಳಿಗೆ ಸಿಲುಗಿ ಪ್ರಾಣ ನೀಗಿಕೊಂಡಿದ್ದಾರೆ. ಇಂಥದೇ ಘಟನೆ ಕ್ಯಾಲಿಫೋರ್ನಿಯಾದಲ್ಲಿ ಕೂಡ ಕಳೆದ ಅಕ್ಟೋಬರ್ ನಲ್ಲಿ ನಡೆದಿತ್ತು.
ಕ್ಯಾಲಿಫೋರ್ನಿಯಾದ ಯೂಸೆಮೈಟ್ ನ್ಯಾಷನಲ್ ಪಾರ್ಕ್ ನಲ್ಲಿ ಸೆಲ್ಫಿ ತೆಗೆದುಕೊಳ್ಳಲು ಹೋಗಿ, ಪ್ರವಾಸವನ್ನು ತುಂಬಾ ಇಷ್ಟಪಡುತ್ತಿದ್ದ ಭಾರತದ ದಂಪತಿಗಳಾದ ಮೀನಾಕ್ಷಿ ಮೂರ್ತಿ ಮತ್ತು ವಿಷ್ಣು ವಿಶ್ವನಾಥ್ ಅವರು ಪ್ರಪಾತಕ್ಕೆ ಬಿದ್ದು ದುರಂತ ಸಾವಿಗೀಡಾಗಿದ್ದರು.
-
Dog Satish: ಇನ್ಸ್ಟಾಗ್ರಾಂ ಯಾರ ಅಪ್ಪಂದೂ ಅಲ್ಲ, ವಿಡಿಯೋ ಡಿಲೀಟ್ ಮಾಡಲ್ಲ, ನನಗೆ ಮೀಟರ್ ಇದೆ: ಡಾಗ್ ಸತೀಶ್ -
Vrial News: ಕೆಲಸದಿಂದ ತೆಗೆದ ಬಳಿಕ ಪುಕ್ಕಟೆ ಸಹಾಯ ಕೇಳಿದ ಮಾಜಿ ಬಾಸ್: ನೌಕರ ಕೊಟ್ಟ ಉತ್ತರ ವೈರಲ್ -
Toxic: ಅವಸರಕ್ಕಿಂತ ತಾಳ್ಮೆ ಮುಖ್ಯ: ಟಾಕ್ಸಿಕ್ ಬಿಡುಗಡೆ ಮುಂದೂಡಿದ ಬೆನ್ನಲ್ಲೇ ಯಶ್ ಬೆಂಬಲಕ್ಕೆ ನಿಂತ ಅಭಿಮಾನಿಗಳು -
Gold Rate: ಚಿನ್ನ, ಬೆಳ್ಳಿ ದರದಲ್ಲಿ ಏರಿಳಿತ; ಬೆಂಗಳೂರಿನಲ್ಲಿ ಇಂದು ಚಿನ್ನದ ಬೆಲೆ ಎಷ್ಟಿದೆ? -
Sourav Ganguly: ಟಿ20 ವಿಶ್ವಕಪ್ 2026; ಸಂಜು ಆಟಕ್ಕೆ ಮನಸೋತು ಬಿಸಿಸಿಐಗೆ ಬಿಸಿ ಮುಟ್ಟಿಸಿದ 'ದಾದಾ' ಸೌರವ್ ಗಂಗೂಲಿ -
Today Horoscope Mar 3: ಹುಣ್ಣಿಮೆಯ ದಿನ ಚಂದ್ರಗ್ರಹಣ, ಈ ರಾಶಿಯವರ ಆರೋಗ್ಯದಲ್ಲಿ ಏರುಪೇರು -
ಬೆಂಗಳೂರು ಆಡಳಿತ ಬಿಬಿಎಂಪಿಯಿಂದ ಜಿಬಿಎಗೆ: 5 ಪಾಲಿಕೆಗಳ ರಚನೆ, ಹೊಸ ಪ್ರದೇಶಗಳ ಸೇರ್ಪಡೆಯಿಂದ ರಿಯಲ್ ಎಸ್ಟೇಟ್ಗೆ ಬಂಪರ್ -
Property: ಖಾತಾ ಎಂದರೇನು, ಇ, ಬಿ - ಎ ಖಾತಾಗಳ ವ್ಯತ್ಯಾಸ, ಆಸ್ತಿದಾರರಿಗೆ ಹೇಗೆ ಲಾಭ ಇಲ್ಲಿದೆ ಸಂಪೂರ್ಣ ವಿವರ -
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಮದುವೆ ಸಂಭ್ರಮ: 'ಸಂಗೀತ' ರಾತ್ರಿಯ ನೆನಪುಗಳನ್ನು ಹಂಚಿಕೊಂಡ ನಟಿ -
National Highway: ರಾಷ್ಟ್ರೀಯ ಹೆದ್ದಾರಿ-373 ಕಾಮಗಾರಿ ಎಲ್ಲಿಗೆ ಬಂತು? -
Horoscope March 4: ಈ ರಾಶಿಯವರಿಗೆ ವೃತ್ತಿಯಲ್ಲಿ ಸುಧಾರಣೆ, ಆರೋಗ್ಯ ಕಾಳಜಿ ಮುಖ್ಯ, ದಿನ ಭವಿಷ್ಯ ಇಲ್ಲಿದೆ -
Toxic release postponed: ಯಶ್ ಅಭಿಮಾನಿಗಳಿಗೆ ಆಘಾತ: "ಟಾಕ್ಸಿಕ್" ಸಿನಿಮಾ ಬಿಡುಗಡೆ ದಿಢೀರ್ ಮುಂದೂಡಿಕೆ












Click it and Unblock the Notifications