ಕಾಬೂಲ್: ಭಾರತದ ಜುಡಿತ್ ಡಿಸೋಜಾ ಅಪಹರಣ
ಕಾಬೂಲ್, ಜೂನ್ 10: ಇಲ್ಲಿನ ಸ್ವಯಂ ಸೇವಾ ಸಂಸ್ಥೆಯೊಂದರಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಕೋಲ್ಕತಾ ಮೂಲದ ಭಾರತೀಯ ಮಹಿಳೆ ಜುಡಿತ್ ಡಿಸೋಜಾ(40) ಅವರನ್ನು ಗುರುವಾರ ರಾತ್ರಿ ಬಂದೂಕುಧಾರಿಯೊಬ್ಬ ಅಪಹರಿಸಿದ್ದಾನೆ. ಅಪಹರಣಕಾರರ ಬಗ್ಗೆ ಯಾವುದೇ ಸುಳಿವು ಇನ್ನೂ ಸಿಕ್ಕಿಲ್ಲ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ.
ಅಫ್ಘಾನಿಸ್ತಾನದಲ್ಲಿ ನೆಲೆಸಿರುವ ಭಾರತೀಯರ ಸುರಕ್ಷತೆ ಬಗ್ಗೆ ಒಂದು ತಿಂಗಳ ಹಿಂದೆ ಎಚ್ಚರಿಕೆ ಸಂದೇಶವನ್ನು ಭಾರತೀಯ ವಿದೇಶಾಂಗ ಸಚಿವಾಲಯ ಹೊರಡಿಸಿತ್ತು. ಉಗ್ರ ಸಂಘಟನೆಗಳ ಕಣ್ಣು ಭಾರತೀಯರ ಮೇಲೆ ಬಿದ್ದಿದೆ ಎಂಬ ಆತಂಕಕಾರಿ ವಿಷಯ ಹೊರ ಬಂದಿತ್ತು. ಅಫ್ಘನ್ ಗೆ ತೆರಳು ಭಾರತೀಯರಿಗೂ ಈ ಬಗ್ಗೆ ಸೂಚನೆ ನೀಡಲಾಗಿತ್ತು.

ಇದಾದ ಸುಮಾರು ಒಂದು ತಿಂಗಳ ಬಳಿಕ ಭಾರತೀಯ ಮಹಿಳೆಯನ್ನು ತೈಮನಿಯ ಕ್ವಾಲ ಇ ಫತೂಲ್ಲಾ ಎಂಬ ಪ್ರದೇಶದಿಂದ ಗುರುವಾರ ರಾತ್ರಿ 10.40ರ ಸುಮಾರಿಗೆ ಅಪಹರಿಸಲಾಗಿದೆ. ಅಪಹರಣಕ್ಕೆ ಒಳಗಾಗಿರುವ ಮಹಿಳೆ ಜುಡಿತ್ ಡಿಸೋಜಾ ಅವರು ಆಘಾ ಖಾನ್ ಫೌಂಡೇಷನ್ನಲ್ಲಿ ಹಿರಿಯ ತಾಂತ್ರಿಕ ಸಲಹೆಗಾರರಾಗಿ ಕೆಲಸ ನಿರ್ಮಿಹಿಸುತ್ತಿದ್ದರು.
ಆಘ್ಘಾನಿಸ್ತಾನದ ಹಿರಿಯ ಅಧಿಕಾರಿಗಳೊಂದಿಗೆ ನಿಂರಂತರ ಸಂಪರ್ಕದಲ್ಲಿದ್ದೇವೆ. ಕೋಲ್ಕತಾದಲ್ಲಿರುವ ಡಿಸೋಜಾ ಅವರ ಕುಟುಂಬಕ್ಕೆ ವಿಷಯ ತಿಳಿಸಲಾಗಿದೆ. ಮಹಿಳೆಯನ್ನು ಸುರಕ್ಷಿತವಾಗಿ ಬಿಡುಗಡೆ ಮಾಡಿಸಲು ಎಲ್ಲಾ ವಿಧದ ಪ್ರಯತ್ನ ಮಾಡಲಾಗುತ್ತಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿವೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications