ಡೊನಾಲ್ಡ್ ಟ್ರಂಪ್ ವಿರುದ್ಧವೇ ತಿರುಗಿಬಿದ್ದ ಭಾರತೀಯರು, ಕಾರಣ ತಿಳಿಯಿರಿ... Harvard University
ಡೊನಾಲ್ಡ್ ಟ್ರಂಪ್ ಕೈಗೊಳ್ಳುತ್ತಿರುವ ನಿರ್ಧಾರಗಳು ಇದೀಗ, ಭಾರತೀಯರ ಮೇಲೆ ದೊಡ್ಡ ಪರಿಣಾಮ ಬೀರುತ್ತಿವೆ. ನಾನು ಭಾರತದ ಗೆಳೆಯ ಅಂತಾ ಹೇಳಿಕೊಂಡೇ ಅಮೆರಿಕ ಎಲೆಕ್ಷನ್ ಗೆದ್ದ ಡೊನಾಲ್ಡ್ ಟ್ರಂಪ್ ಇದೀಗ ಭಾರತದ ವಿರೋಧಿ ರೀತಿ ವರ್ತಿಸುತ್ತಿದ್ದಾರೆ ಎಂಬ ಆರೋಪ ಕೂಡ ಇದೆ. ಹೀಗಿದ್ದಾಗ ಮತ್ತೊಂದು ಫಿಟ್ಟಿಂಗ್ ಇಟ್ಟಿರುವ ಡೊನಾಲ್ಡ್ ಟ್ರಂಪ್ ಭಾರತೀಯ ವಿದ್ಯಾರ್ಥಿಗಳಿಗೆ ಆಘಾತ ನೀಡಿದ್ದು, ಈ ಬಗ್ಗೆ ಭಾರತೀಯರು ಏನು ಹೇಳುತ್ತಿದ್ದಾರೆ ಗೊತ್ತಾ?
ಭಾರತದ ಸಹಾಯ ಇಲ್ಲದೆ ಅಮೆರಿಕ ಬದುಕಲು ಕೂಡ ಆಗುವುದಿಲ್ಲ, ಯಾಕಂದ್ರೆ ಭಾರತದ ಮೂಲಕ ಅಮೆರಿಕ ಲೆಕ್ಕವಿಲ್ಲದಷ್ಟು ಸಹಾಯ ಪಡೆಯುತ್ತಿದೆ. ಆದರೆ ಮತ್ತೆ ಮತ್ತೆ ಭಾರತ & ಭಾರತೀಯರ ಬೆನ್ನಿಗೆ ಚೂರಿ ಹಾಕುತ್ತಿದೆ ಅಮೆರಿಕ ಎಂಬ ಆರೋಪ ಇದೆ. ಅದರಲ್ಲೂ ಈ ವಿಚಾರದಲ್ಲಿ ಡೊನಾಲ್ಡ್ ಟ್ರಂಪ್ ಕೈಗೊಳ್ಳುತ್ತಿರುವ ನಿರ್ಧಾರಗಳು ಬೆಂಕಿಯ ಕಿಡಿ ಹೊತ್ತಿಸಿ, ಭಾರಿ ದೊಡ್ಡ ಅಲ್ಲೋಲ ಕಲ್ಲೋಲ ಎಬ್ಬಿಸಿವೆ. ಅಮೆರಿಕಗೆ ಹೋಗಿ ಓದಬೇಕು ಎನ್ನುತ್ತಿದ್ದ ಭಾರತೀಯ ವಿದ್ಯಾರ್ಥಿಗಳ ಭವಿಷ್ಯವನ್ನೇ ಡೊನಾಲ್ಡ್ ಟ್ರಂಪ್ ಕಸಿದುಕೊಂಡರಾ? ಹಾಗಾದ್ರೆ ಡೊನಾಲ್ಡ್ ಟ್ರಂಪ್ ಮಾಡುತ್ತಿರುವ ಎಡವಟ್ಟುಗಳ ಬಗ್ಗೆ ಭಾರತೀಯರು ಏನು ಹೇಳುತ್ತಿದ್ದಾರೆ?

ಟ್ರಂಪ್ ಎಡವಟ್ಟು, ಭಾರತೀಯರ ಆಕ್ರೋಶ!
ಹೌದು, ಭಾರತವೂ ಸೇರಿದಂತೆ ಲಕ್ಷಾಂತರ ಜನರು ಅಮೆರಿಕಗೆ ಹೋಗಿ ನೆಲೆಸುತ್ತಿದ್ದಾರೆ. ಈ ಮೂಲಕ ಜಗತ್ತಿನ ದೊಡ್ಡಣ್ಣ ಅಮೆರಿಕದ ಅಭಿವೃದ್ಧಿಗೆ ಭಾರತೀಯರ ಕೊಡುಗೆ ಕೂಡ ಭಾರಿ ದೊಡ್ಡದಾಗಿದೆ. ಇಷ್ಟೆಲ್ಲಾ ಇದ್ದರೂ ಡೊನಾಲ್ಡ್ ಟ್ರಂಪ್ ಮಾತ್ರ ಭಾರತದ ಬಗ್ಗೆ & ಭಾರತ ಮೂಲದ ವಿದ್ಯಾರ್ಥಿಗಳ ವಿರುದ್ಧ ನಿಲುವು ಕೈಗೊಳ್ಳುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಪ್ರಮುಖವಾಗಿ ಹಾರ್ವರ್ಡ್ ವಿಶ್ವವಿದ್ಯಾಲಯ ವಿಚಾರ ಇದೀಗ ದೊಡ್ಡ ಬೆಂಕಿಯ ಕಿಡಿಯನ್ನೇ ಹೊತ್ತಿಸಿದೆ.
ಡೊನಾಲ್ಡ್ ಟ್ರಂಪ್ ಆಟ ಅತೀ ಆಯ್ತು?
ಅಮೆರಿಕದಲ್ಲಿ ಲಕ್ಷಾಂತರ ವಿದೇಶಿ ವಿದ್ಯಾರ್ಥಿಗಳು ಓದುತ್ತಾ, ಉನ್ನತ ಶಿಕ್ಷಣ ಪಡೆಯುತ್ತಿದ್ದಾರೆ. ಆದರೂ ಇದೀಗ ಹೊಸ ನಿಯಮವನ್ನು ಹೇರಿಕೆ ಮಾಡಿರುವ ಡೊನಾಲ್ಡ್ ಟ್ರಂಪ್ ಸರ್ಕಾರ, ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ವಿದೇಶಿ ವಿದ್ಯಾರ್ಥಿಗಳ ಸೇರ್ಪಡೆಗೆ ಬ್ರೇಕ್ ಹಾಕಿ ಆಘಾತದ ಬಿರುಗಾಳಿ ನೀಡಿದೆ. ಇದರ ಜೊತೆಗೆ, ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ಒದುತ್ತಾ ಇರುವ ವಿದೇಶಿ ಅಂದ್ರೆ ಭಾರತವೂ ಸೇರಿ ಬೇರೆ ಬೇರೆ ದೇಶಗಳ ವಿದ್ಯಾರ್ಥಿಗಳು ಬೇರೆ ಕಾಲೇಜುಗಳು ಅಥವಾ ಶಾಲೆಗಳಿಗೆ ವರ್ಗಾವಣೆ ಆಗಬೇಕೆಂಬ ನಿಯಮ ಹೇರಲಾಗಿದ. ಅಕಸ್ಮಾತ್ ಈ ನಿಯಮ ಮೀರಿದರೆ ದೊಡ್ಡ ಸಮಸ್ಯೆ ಕೂಡ ಎದುರಾಗಲಿದೆಯಂತೆ. ಈ ಬಗ್ಗೆ ಇದೀಗ ಭಾರತೀಯರು ಭಾರಿ ಆಕ್ರೋಶ ಹೊರ ಹಾಕಿದ್ದು, ಡೊನಾಲ್ಡ್ ಟ್ರಂಪ್ ಆಟ ಅತೀ ಆಯ್ತು ಅಂತಿದ್ದಾರೆ!
-
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ












Click it and Unblock the Notifications