ಭಾರತೀಯರಿಗೆ ಸಿಗಲಿದೆ ಬಂಪರ್.. ಅಮೆರಿಕ ವೀಸಾ ವಿಚಾರದಲ್ಲಿ ಲಾಟರಿ!
ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಇನ್ನೇನು ಕೆಲವೇ ಕೆಲವು ದಿನಗಳು ಬಾಕಿ ಇವೆ. ಹೀಗೆ ಚುನಾವಣೆಗೆ ಸಜ್ಜಾಗಿರುವ ಅಮೆರಿಕದಲ್ಲಿ ಭಾರತೀಯರಿಗೆ ವಿಶೇಷ ಬೆಂಬಲ ಕೂಡ ಸಿಗ್ತಿದೆ. ಅದರಲ್ಲೂ ಭಾರತೀಯರಿಗೆ ವೀಸಾ ವಿಚಾರದಲ್ಲಿ ಭರ್ಜರಿ ಸುದ್ದಿ ಸಿಕ್ಕಂತಾಗಿದೆ. ಈಗ ಅಲ್ಲಿ ಅಂದ್ರೆ ಅಮೆರಿಕದಲ್ಲಿ ಜಾರಿಗೆ ತಂದಿರುವ ಹೊಸ ನಿಯಮ ಭಾರತೀರಿಗೆ ಭರ್ಜರಿ ಲಾಭವನ್ನ ನೀಡಲಿದೆ. ಹಾಗಾದ್ರೆ, ಹೊಸ ವೀಸಾ ನಿಯಮ ಭಾರತೀಯರಿಗೆ ಹೇಗೆ ಸಹಾಯಕ? ಭಾರತ ಮೂಲದವರು ಇದರ ಲಾಭ ಹೇಗೆ ಪಡೆಯಬಹುದು? ಬನ್ನಿ ತಿಳಿಯೋಣ.
ಅಮೆರಿಕದಲ್ಲಿ ಕೆಲಸ ಮಾಡಬೇಕು, ಅಮೆರಿಕಗೆ ಹೋಗಿ ಜೀವನ ಕಟ್ಟಿಕೊಳ್ಳಬೇಕು ಎಂಬುದು ಕೋಟಿ ಕೋಟಿ ಜನರ ಕನಸು. ಆದರೆ ಅಮೆರಿಕಗೆ ಹೋಗಿ ಬದುಕು ಕಟ್ಟಿಕೊಳ್ಳುವ ಕೆಲಸವು ಸುಲಭ ಏನಲ್ಲ. ಯಾಕಂದ್ರೆ ಅಮೆರಿಕದಲ್ಲಿ ಹೋಗಿ ನೆಲೆಸಲು ಸಾಕಷ್ಟು ಸಮಸ್ಯೆ ಎದುರಿಸಿ & ಕಷ್ಟಪಟ್ಟು ಮುಂದೆ ನುಗ್ಗಬೇಕಿದೆ. ಹೀಗಿದ್ದರೂ ಅಮೆರಿಕದ ಕನಸು ಕಾಣುವ ಭಾರತೀಯರ ಸಂಖ್ಯೆ ಕಡಿಮೆ ಆಗಿಲ್ಲ. ಹಾಗೇ ಅಮೆರಿಕದ ಅಭಿವೃದ್ಧಿಯಲ್ಲಿ ಭಾರತೀಯರ ಶ್ರಮವು ಕೂಡ ಹೆಚ್ಚಾಗಿದೆ. ಇಂತಹ ಸಮಯದಲ್ಲೇ ಅಮೆರಿಕದಲ್ಲಿ ಅಧ್ಯಕ್ಷೀಯ ಚುನಾವಣೆ ನಡೆಯುತ್ತಿದ್ದು, ಭಾರತೀಯರಿಗೆ ಭರ್ಜರಿ ಸಿಹಿಸುದ್ದಿ ಸಿಕ್ಕಿದೆ!

2.5 ಲಕ್ಷ ಭಾರತೀಯರಿಗೆ ಹೆಚ್ಚುವರಿ ವೀಸಾ?
ಅಂದಹಾಗೆ ಇದೀಗ ಭಾರತ ಮೂಲದ ಟೂರಿಸ್ಟ್, ಪರಿಣತಿ ಪಡೆದಿರುವ ಕೆಲಸಗಾರರು ಮತ್ತು ವಿದ್ಯಾರ್ಥಿಗಳಿಗೆ ಭರ್ಜರಿ ಸುದ್ದಿ ಸಿಕ್ಕಂತಾಗಿದೆ. ಭಾರತೀಯರಿಗೆ ಅಮೆರಿಕವು ಹೆಚ್ಚುವರಿಯಾಗಿ ವೀಸಾ ನೀಡಲು ಮುಂದೆ ಬಂದಿದ್ದು, 2.5 ಲಕ್ಷ ಭಾರತೀಯರಿಗೆ ಹೆಚ್ಚುವರಿ ವೀಸಾ ವ್ಯವಸ್ಥೆ ಮಾಡಲು ಈಗ ಅಮೆರಿಕದ ಅಧಿಕಾರಿಗಳು ಮುಂದಾಗಿದ್ದಾರೆ. ಹಾಗೇ ಅಮೆರಿಕದಿಂದ ಇತ್ತೀಚೆಗೆ ರಿಲೀಸ್ ಮಾಡಿದ್ದ ವೀಸಾ ವಿತರಣೆಯ ಹೊಸ ಸ್ಲಾಟ್ಗಳು ಭಾರತೀಯರಿಗೆ ಪೂರಕವಾಗಿ ಇದೆ.
ಬೈಡನ್ ಜೊತೆ ಚರ್ಚಿಸಿದ್ದ ಪ್ರಧಾನಿ ಮೋದಿ
ಭಾರತೀಯ ಅರ್ಜಿದಾರರು ಸುಲಭವಾಗಿ ಸಂದರ್ಶನಕ್ಕೆ ಹಾಜರಾಗಲು ಇದೀಗ ಸಾಧ್ಯವಾಗಲಿದೆ. ಈ ಮೂಲಕ ಭಾರತ & ಅಮೆರಿಕ ನಡುವಿನ ಬಾಂಧವ್ಯ ವೃದ್ಧಿಗೆ ಕೂಡ ಈ ಕ್ರಮ ಬೆಂಬಲ ನೀಡಲಿದೆ ಎಂಬ ಅಭಿಪ್ರಾಯವನ್ನ ಅಮೆರಿಕ ರಾಯಭಾರ ಕಚೇರಿ ವ್ಯಕ್ತಪಡಿಸಿದೆ. ಇತ್ತೀಚೆಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷರಾದ ಜೋ ಬೈಡನ್ ಜೊತೆ ಚರ್ಚೆ ನಡೆಸಿದ್ದರು. ಎರಡೂ ದೇಶಗಳ ನಡುವೆ ವೀಸಾ ಪ್ರಕ್ರಿಯೆ ಮತ್ತಷ್ಟು ಸುಲಭವಾಗಲು ಅಗತ್ಯ ಕ್ರಮ ಕೈಗೊಳ್ಳಲು ಚರ್ಚೆ ನಡೆಸಿದ್ದರು. ಇದೀಗ ಚರ್ಚೆಯು ಕೂಡ ಫಲ ನೀಡಿದಂತೆ ಕಾಣುತ್ತಿದ್ದು, ಮತ್ತೊಂದು ಕಡೆ ಅಮೆರಿಕ ಅಧ್ಯಕ್ಷೀಯ ಚುನಾವಣೆ ಸಮಯದಲ್ಲೇ ಹೀಗೆಲ್ಲ ಮಹತ್ವದ ನಿರ್ಧಾರ ಕೈಗೊಂಡಿರುವುದು ಗಮನ ಸೆಳೆದಿದೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications