Breaking: ಐಎಂಎಫ್ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಡಾ. ಕೆ ಸುಬ್ರಮಣಿಯನ್ ನೇಮಕ
ನವದೆಹಲಿ, ಆಗಸ್ಟ್ 25: ಅಂತಾರಾಷ್ಟ್ರೀಯ ಹಣಕಾಸು ನಿಧಿಯ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಭಾರತದ ಡಾ. ಕೆ ಸುಬ್ರಮಣಿಯನನ್ ಅವರನ್ನು ನೇಮಕಗೊಳಿಸಿ ಆದೇಶ ಹೊರಡಿಸಲಾಗಿದೆ.

ಭಾರತದ ಮಾಜಿ ಮುಖ್ಯ ಆರ್ಥಿಕ ಸಲಹೆಗಾರರಾಗಿ ಕಾರ್ಯ ನಿರ್ವಹಿಸಿದ ಕೆ ಸುಬ್ರಮಣಿಯನ್ ಅವರು ಮೂರು ವರ್ಷಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೂ ಐಎಂಎಪ್ ಕಾರ್ಯನಿರ್ವಾಹಕ ನಿರ್ದೇಶಕರಾಗಿ ನೇಮಕಗೊಂಡಿದ್ದಾರೆ.
ಕೆವಿ ಸುಬ್ರಮಣಿಯನ್ ಅಧಿಕಾರಾವಧಿಯು ನವೆಂಬರ್ನಿಂದ ಪ್ರಾರಂಭವಾಗುತ್ತದೆ. ಮೂರು ವರ್ಷಗಳ ಅವಧಿಗೆ ಅಥವಾ ಮುಂದಿನ ಆದೇಶಗಳವರೆಗೆ ಮುಂದುವರಿಯುತ್ತದೆ. ಇದಕ್ಕೂ ಪೂರ್ವದಲ್ಲಿ ಅಂದರೆ 31 ಅಕ್ಟೋಬರ್, 2022 ರವರೆಗೆ ಪ್ರಖ್ಯಾತ ಅರ್ಥಶಾಸ್ತ್ರಜ್ಞ ಸುರ್ಜಿತ್ ಎಸ್ ಭಲ್ಲಾ ಅವರ ಅಕಾಲಿಕ ಮರಣದಿಂದ ಅಧಿಕಾರಾವಧಿ ಮೊಟಕುಗೊಂಡಿತು.
ಕಳೆದ 2019ರಲ್ಲಿ ಭಲ್ಲಾ ಅವರನ್ನು IMF ಮಂಡಳಿಯಲ್ಲಿ ಭಾರತದ ಕಾರ್ಯನಿರ್ವಾಹಕ ನಿರ್ದೇಶಕರಾಗಿ ನೇಮಿಸಲಾಯಿತು. ಆದರೆ ಅವರು ಅನಾರೋಗ್ಯದಿಂದ ಜುಲೈ 30ರಂದು USನಲ್ಲಿ ನಿಧನರಾದರು. ತದನಂತರದಲ್ಲಿ RBI ಮಾಜಿ ಡೆಪ್ಯೂಟಿ ಗವರ್ನರ್ ಸುಬೀರ್ ಗೋಕರ್ನ್ ಅವರ ಉತ್ತರಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದರು.
ಮೂರು ವರ್ಷಗಳ ಅವಧಿಗೆ ನೇಮಕ:
"ಸಚಿವ ಸಂಪುಟದ ನೇಮಕಾತಿ ಸಮಿತಿಯು ಪ್ರೊಫೆಸರ್ (ಹಣಕಾಸು) ಡಾ ಕೃಷ್ಣಮೂರ್ತಿ ಸುಬ್ರಮಣಿಯನ್ ಅವರ ನೇಮಕಾತಿಯನ್ನು ಅನುಮೋದಿಸಿದೆ. ಇಂಡಿಯನ್ ಸ್ಕೂಲ್ ಆಫ್ ಬ್ಯುಸಿನೆಸ್ ಮತ್ತು ಅಂತಾರಾಷ್ಟ್ರೀಯ ಹಣಕಾಸು ನಿಧಿ (IMF)ನಲ್ಲಿ ಕಾರ್ಯನಿರ್ವಾಹಕ ನಿರ್ದೇಶಕ (ಭಾರತ) ಹುದ್ದೆಗೆ ಮಾಜಿ ಮುಖ್ಯ ಆರ್ಥಿಕ ಸಲಹೆಗಾರರನ್ನು ನೇಮಿಸಲಾಗಿದೆ. 2022ರ ನವೆಂಬರ್ 1 ರಿಂದ ಇವರ ಸೇವಾವಧಿ ಪ್ರಾರಂಭವಾಗಲಿದೆ. ಅಲ್ಲಿಂದ ಮೂರು ವರ್ಷ ಅಥವಾ ಮುಂದಿನ ಆದೇಶದವರೆಗೂ ಇವರು ಅಧಿಕಾರದಲ್ಲಿ ಇರಲಿದ್ದಾರೆ," ಎಂದು ಉಲ್ಲೇಖಿಸಲಾಗಿದೆ.
ಸುಬ್ರಮಣಿಯನ್ 2021ರಲ್ಲಿ 3 ವರ್ಷಗಳ ಅಧಿಕಾರಾವಧಿಯ ನಂತರ ಮುಖ್ಯ ಆರ್ಥಿಕ ಸಲಹೆಗಾರ ಹುದ್ದೆಯಿಂದ ನಿವೃತ್ತಿ ಹೊಂದಿದ್ದರು. ತದನಂತರದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಮರಳಲು ನಿರ್ಧರಿಸಿದ್ದೇನೆ ಎಂದು ಹೇಳಿದರು. ಸರ್ಕಾರವು ಡಿಸೆಂಬರ್ 2018 ರಲ್ಲಿ ISB ಹೈದರಾಬಾದ್ ಪ್ರಾಧ್ಯಾಪಕರಾದ ಸುಬ್ರಮಣಿಯನ್ ಅವರನ್ನು CEA ಆಗಿ ನೇಮಿಸಿತ್ತು. ಅವರು ಅರವಿಂದ್ ಸುಬ್ರಮಣ್ಯನ್ ಉತ್ತರಾಧಿಕಾರಿಯಾಗಿದ್ದರು.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ












Click it and Unblock the Notifications