Axiom-4 Mission: ಬಾಹ್ಯಾಕಾಶಕ್ಕೆ ಹಾರಿದ ಭಾರತೀಯ ವಿಜ್ಞಾನಿ, ಹೊಸ ಇತಿಹಾಸ ಸೃಷ್ಟಿ!
ಶತಕೋಟಿ ಭಾರತೀಯರ ಕನಸು ಇಂದು ನನಸಾಗಿದೆ, ಬಾಹ್ಯಾಕಾಶ ಕ್ಷೇತ್ರದಲ್ಲಿ ನಮ್ಮ ಹೆಮ್ಮೆಯ ಇಸ್ರೋ ಸಂಸ್ಥೆ ಸಾಲು ಸಾಲು ದಾಖಲೆ ಬರೆಯುತ್ತಾ ಇತಿಹಾಸ ನಿರ್ಮಿಸಿದೆ. ಇಂತಹ ಸಮಯದಲ್ಲೇ, ಭಾರತೀಯ ವಿಜ್ಞಾನಿಗಳು ಕೂಡ ದೊಡ್ಡ ದೊಡ್ಡ ಸಾಧನೆ ಮಾಡುತ್ತಿದ್ದಾರೆ. ಹೀಗಿದ್ದಾಗಲೇ, ಇಂದು ಕೂಡ ಮಹತ್ವದ ಘಟನೆ ನಡೆದಿದೆ. ಭಾರತ ಮೂಲದ ವಿಜ್ಞಾನಿಯ ನೇತೃತ್ವದಲ್ಲಿ, ಇಂದು ಯಶಸ್ವಿಯಾಗಿ ಬಾಹ್ಯಾಕಾಶಕ್ಕೆ ಹಾರಿದೆ ನಾಸಾ ರಾಕೆಟ್.
ಮನುಷ್ಯರ ಭವಿಷ್ಯಕ್ಕಾಗಿ ಬಾಹ್ಯಾಕಾಶ ವಿಜ್ಞಾನಿಗಳು ಸಾಲು ಸಾಲು ಸಂಶೋಧನೆ ನಡೆಸುತ್ತಲೇ ಇದ್ದಾರೆ. ಅದೇ ರೀತಿಯಾಗಿ ಇಂದು ಆಕ್ಸಿಯಮ್-4 ಮಿಷನ್ ಉಡಾವಣೆಯನ್ನು ಮಾಡಲು ಅಮೆರಿಕದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ನಾಸಾ ಸಂಸ್ಥೆ ಸಿದ್ಧತೆ ನಡೆಸಿತ್ತು. ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅವರ ನೇತೃತ್ವದಲ್ಲಿ ಈ ಯೋಜನೆ ಕೈಗೊಳ್ಳಲಾಗಿತ್ತು.

ಜಗತ್ತಿನಾದ್ಯಂತ ಜನರಿಂದ ಪ್ರಾರ್ಥನೆ
ಆಕ್ಸಿಯಮ್-4 ಮಿಷನ್ ಫ್ಲೊರಿಡಾದಲ್ಲಿ ಇರುವ ನಾಸಾ ಸಂಸ್ಥೆ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆ ಮಾಡಿದೆ. ಆಕ್ಸಿಯಮ್-4 ಮಿಷನ್ ಮಹತ್ವದ ಸಂಶೋಧನೆ & ಮನುಷ್ಯರು ಭವಿಷ್ಯದಲ್ಲಿ ಬಾಹ್ಯಾಶದಲ್ಲಿ ಬದುಕುವಂತೆ ಮಾಡಲು ವೈಜ್ಞಾನಿಕ ತನಿಖೆಗಳನ್ನ ನಡೆಸಲಿದೆ. ಹೀಗಿದ್ದಾಗ ಜಗತ್ತಿನಾದ್ಯಂತ ಈ ಉಡಾವಣೆ ಯಶಸ್ವಿಯಾಗಲಿ ಅಂತಾ ಜನರು ಪ್ರಾರ್ಥಿಸಿದ್ದರು. ಅದು ಈಗ ಯಶಸ್ವಿಯಾಗಿದ್ದು, ಕೋಟಿ ಕೋಟಿ ಪ್ರಾರ್ಥನೆ ಫಲಿಸಿದೆ.
ಬಾಹ್ಯಾಕಾಶಕ್ಕೆ ಹಾರಿದ ಭಾರತೀಯ ವಿಜ್ಞಾನಿ
ಭಾರತೀಯರ ಹೆಮ್ಮೆಯ ಇಸ್ರೋ ಸಂಸ್ಥೆಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿದಂತೆ, ಕಮಾಂಡರ್ ಪೆಗ್ಗಿ ವಿಟ್ಸನ್, ಹಂಗರಿ ಮೂಲದ ವಿಜ್ಞಾನಿ ಟಿಬೊರ್ ಕಾಪು, ಪೋಲೆಂಡ್ನ ಸ್ಲಾವೋಜ್ ವಿಸ್ನೀವ್ವಿಸ್ಕಿ ಸೇರಿ, ಒಟ್ಟಾರೆ 4 ಜನರಿದ್ದ ತಂಡ ಇಂದು ಬಾಹ್ಯಾಕಾಶಕ್ಕೆ ಹಾರಿದೆ. ಸ್ಪೆಸ್ ಎಕ್ಸ್ ಸಂಸ್ಥೆಯ ಸಹಯೋಗದಲ್ಲಿಯೇ ಯೋಜನೆ ಕೈಗೊಳ್ಳಲಾಗಿತ್ತು. ಈ ವಿಜ್ಞಾನಿಗಳು ಇನ್ನೇನು ಬಾಹ್ಯಾಕಾಶ ನಿಲ್ದಾಣ ತಲುಪಲಿದ್ದು, ಹಲವು ಸಂಶೋಧನೆ ನಡೆಸಿ ಮರಳಿ ಭೂಮಿಗೆ ಬರಲಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications