ಇಂಡೋನೇಷ್ಯಾ ಭೂಕಂಪ: ಸಾವಿನ ಸಂಖ್ಯೆ 310ಕ್ಕೆ ಏರಿಕೆ
ಜಕಾರ್ತ, ನವೆಂಬರ್ 25: ಇಂಡೋನೇಷ್ಯಾದ ಪಶ್ಚಿಮ ಜಾವಾ ಪ್ರಾಂತ್ಯದಲ್ಲಿ ಸಂಭವಿಸಿದ 5.6 ತೀವ್ರತೆಯ ಭೂಕಂಪದಿಂದ ಸತ್ತವರ ಸಂಖ್ಯೆ 310 ಕ್ಕೆ ಏರಿಕೆಯಾಗಿದೆ ಎಂದು ದೇಶದ ರಾಷ್ಟ್ರೀಯ ವಿಪತ್ತು ಸಂಸ್ಥೆ ತಿಳಿಸಿದೆ. 5.6 ತೀವ್ರತೆಯ ಭೂಕಂಪವು ಪಶ್ಚಿಮ ಜಾವಾದ ಸಿಯಾಂಜೂರ್ ಪ್ರದೇಶದಲ್ಲಿ ಸ್ಥಳೀಯ ಸಮಯ ಮಧ್ಯಾಹ್ನ 1:21 ಕ್ಕೆ ಅಪ್ಪಳಿಸಿತು. ಯುನೈಟೆಡ್ ಪ್ರಕಾರ ಇದು ಸೋಮವಾರ ಸಿಯಾಂಜೂರ್ ಪ್ರದೇಶದ 10 ಕಿಲೋಮೀಟರ್ (6.2 ಮೈಲುಗಳು) ಆಳದಲ್ಲಿ ಸಂಭವಿಸಿದೆ.
ಸ್ಟೇಟ್ಸ್ ಜಿಯೋಲಾಜಿಕಲ್ ಸರ್ವೆ (USGS) ಪ್ರಕಾರ, ಭೂಕಂಪದ ತೀವ್ರತೆಯನ್ನು ವಿವರಿಸಲಾಗಿದೆ. ಇದ್ದಕ್ಕಿದ್ದಂತೆ ಶಾಲೆಗಳಲ್ಲಿ ತರಗತಿಗಳು ನಡೆಯುತ್ತಿರುವಾಗ ಕಟ್ಟಡಗಳು ಕುಸಿಯಲು ಆರಂಭಿಸಿದವು. ಏಕಾಏಕಿ ಕಟ್ಟಗಳು ಕುಸಿದು ಬಿದ್ದಿದ್ದರಿಂದ ಸಾವಿನ ಸಂಖ್ಯೆ 310 ಕ್ಕೆ ಏರಿದೆ. ಒಟ್ಟು 24 ಜನರು ನಾಪತ್ತೆಯಾಗಿದ್ದಾರೆ ಎಂದು ಸಿಜಿಟಿಎನ್ ವರದಿ ಮಾಡಿದೆ. ಇದಕ್ಕೂ ಮೊದಲು, BNPB ಮುಖ್ಯಸ್ಥ ಮೇಜರ್ ಜನರಲ್ ಸುಹರ್ಯಾಂತೋ ಅವರು ಪತ್ರಿಕಾಗೋಷ್ಠಿಯಲ್ಲಿ ಸಾವಿನ ಸಂಖ್ಯೆ 271 ಕ್ಕೆ ಏರಿದೆ ಮತ್ತು ಸತ್ತವರಲ್ಲಿ ಮೂರನೇ ಒಂದು ಭಾಗದಷ್ಟು ಮಕ್ಕಳಿದ್ದಾರೆ ಎಂದು ಹೇಳಿದ್ದರು.
ಸುಮಾರು 2,043 ಜನರು ಗಾಯಗೊಂಡಿದ್ದಾರೆ ಮತ್ತು 61,800 ಜನರು ಸ್ಥಳಾಂತರಗೊಂಡಿದ್ದಾರೆ ಎಂದು ಅವರು ಹೇಳಿದರು. ನಲವತ್ತು ಜನರು ನಾಪತ್ತೆಯಾಗಿದ್ದಾರೆ. 56,320 ಮನೆಗಳು ಹಾನಿಗೊಳಗಾಗಿವೆ, ಅವುಗಳಲ್ಲಿ ಮೂರನೇ ಒಂದು ಭಾಗಕ್ಕಿಂತಲೂ ಹೆಚ್ಚು ಮನೆಗಳು ಹಾನಿಯಾಗಿದೆ ಎಂದು ಸುಹರ್ಯಾಂತೋ ಹೇಳಿದರು. ಹಾನಿಗೊಳಗಾದ ಇತರ ಕಟ್ಟಡಗಳಲ್ಲಿ 31 ಶಾಲೆಗಳು, 124 ಪೂಜಾ ಸ್ಥಳಗಳು ಮತ್ತು ಮೂರು ಆರೋಗ್ಯ ಸೌಲಭ್ಯ ಕೇಂದ್ರಗಳು ಸೇರಿವೆ.

ನಿರಾಶ್ರಿತರಿಗಾಗಿ 14 ಶೆಲ್ಟರ್ಗಳನ್ನು ನಿರ್ಮಿಸಲಾಗಿದೆ ಮತ್ತು ಸ್ಥಳಾಂತರಗೊಂಡ ಜನರಿಗೆ ಸೌಲಭ್ಯಗಳನ್ನು ಒದಗಿಸಿದೆ ಎಂದು ಸುಹರ್ಯಾಂತೋ ಹೇಳಿದರು. ಸಂತ್ರಸ್ತರು ತಮ್ಮ ಹಾನಿಗೊಳಗಾದ ಸ್ಥಳವನ್ನು ಬಿಟ್ಟು ಈ ಮುಖ್ಯ ಆಶ್ರಯಗಳಿಗೆ ತೆರಳುವ ನಿರೀಕ್ಷೆಯಿದೆ ಎಂದು ಅವರು ಹೇಳಿದರು.
ಸುಹರ್ಯಾಂತೋ ಪ್ರಕಾರ, BNPB 6,000 ಕ್ಕೂ ಹೆಚ್ಚು ರಕ್ಷಕರನ್ನು ಶೋಧ ಮತ್ತು ಪಾರುಗಾಣಿಕಾ ಕಾರ್ಯಾಚರಣೆಗಳಿಗೆ ನಿಯೋಜಿಸಿದೆ.
ಮಂಗಳವಾರ ಭೂಕಂಪದಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿದ ಇಂಡೋನೇಷ್ಯಾ ಅಧ್ಯಕ್ಷ ಜೋಕೊ ವಿಡೋಡೊ, ಭಾರೀ ಹಾನಿಗೊಳಗಾದ ಮನೆಗಳ ಮಾಲೀಕರಿಗೆ ಸರ್ಕಾರವು ಸುಮಾರು USD 3,200 ವರೆಗೆ ಪರಿಹಾರವನ್ನು ನೀಡುತ್ತದೆ ಎಂದು ಹೇಳಿದ್ದಾರೆಮದು CNN ವರದಿ ಮಾಡಿದೆ.

ಮನೆಗಳನ್ನು ಭೂಕಂಪ-ನಿರೋಧಕ ಕಟ್ಟಡಗಳಾಗಿ ಮರುನಿರ್ಮಾಣ ಮಾಡಬೇಕು ಎಂದು ಅವರು ಹೇಳಿದರು. ಇಂಡೋನೇಷ್ಯಾದ ಹವಾಮಾನ ಬ್ಯೂರೋ, BMKG, ಭೂಕುಸಿತದ ಅಪಾಯದ ಬಗ್ಗೆ ಎಚ್ಚರಿಸಿದೆ.
ಇಂಡೋನೇಷ್ಯಾವನ್ನು ಭೂಕಂಪ ಮತ್ತು ಜ್ವಾಲಾಮುಖಿಗಳ ಸಕ್ರಿಯ ವಲಯ ಎಂದು ಕರೆಯಲಾಗುತ್ತದೆ. ಇದು ಪೆಸಿಫಿಕ್ನ ಒಂದು ಬದಿಯಲ್ಲಿ ಜಪಾನ್ ಮತ್ತೊಂದು ಕ್ಯಾಲಿಫೋರ್ನಿಯಾ ಮತ್ತು ದಕ್ಷಿಣ ಅಮೆರಿಕದವರೆಗೆ ವ್ಯಾಪಿಸಿದೆ. 2004 ರಲ್ಲಿ, ಉತ್ತರ ಇಂಡೋನೇಷ್ಯಾದ ಸುಮಾತ್ರಾ ದ್ವೀಪದಲ್ಲಿ 9.1 ತೀವ್ರತೆಯ ಭೂಕಂಪದಿಂದ 14 ದೇಶಗಳಿಗೆ ಅಪ್ಪಳಿಸಿದ ಸುನಾಮಿಯನ್ನು ಪ್ರಚೋದಿಸಿತು. ಇದು ಹಿಂದೂ ಮಹಾಸಾಗರದ ಕರಾವಳಿಯಲ್ಲಿ 226,000 ಜನರನ್ನು ಕೊಂದಿತು. ಅವರಲ್ಲಿ ಅರ್ಧಕ್ಕಿಂತ ಹೆಚ್ಚು ಜನ ಇಂಡೋನೇಷ್ಯಾದಲ್ಲಿರುವವರು.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications