ಇಂಡೋನೇಷ್ಯಾದಲ್ಲಿ ಮತ್ತೆ ಜ್ವಾಲಾಮುಖಿ ಸ್ಫೋಟ: ದಟ್ಟ ಹೊಗೆ, ಬೂದಿ
ಜಕಾರ್ತ, ಆಗಸ್ಟ್ 10: ದ್ವೀಪಗಳ ನಾಡು ಇಂಡೋನೇಷ್ಯಾದಲ್ಲಿ ಮತ್ತೆ ಜ್ವಾಲಾಮುಖಿ ಸ್ಫೋಟಿಸಿದ್ದು, ಬರೋಬ್ಬರಿ 5000 ಅಡಿ ಎತ್ತರದವರೆಗೂ ಹೊಗೆ ಮತ್ತು ಬೂದಿ ಅವರಿಸಿ ಸ್ಥಳೀಯರಲ್ಲಿ ತೀವ್ರ ಆತಂಕ ಸೃಷ್ಟಿ ಮಾಡಿದೆ.
ಇಂಡೋನೇಷ್ಯಾದ ಸುಮಾತ್ರಾ ದ್ವೀಪದ ಮೌಂಟ್ ಸಿನಾಬಂಗ್ ನಲ್ಲಿ ಇಂದು ಜ್ವಾಲಾಮುಖಿ ಸ್ಫೋಟಿಸಿದ್ದು, ಪರಿಣಾಮ ಸುಮಾರು 5 ಸಾವಿರ ಅಡಿ ಎತ್ತರದಷ್ಟು ದಟ್ಟ ಹೊಗೆ ಮತ್ತು ಬೂದಿ ಆವರಿಸಿದೆ. ಶನಿವಾರದಿಂದ ಸಂಭವಿಸಿದ ಎರಡನೇ ಜ್ವಾಲಾಮುಖಿ ಸ್ಪೋಟ ಇದಾಗಿದೆ
2010ರಿಂದಲೂ ತೀವ್ರ ಚಟುವಟಿಕೆಯಿಂದ ಕೂಡಿದ್ದ ಮೌಂಟ್ ಸಿನಾಬಂಗ್ ಜ್ವಾಲಾಮುಖಿ 2016ರಲ್ಲಿ ಸ್ಫೋಟಿಸಿತ್ತು. ಮೂರು ವರ್ಷಗಳ ಬಳಿಕ ಮತ್ತೆ 2019ರಲ್ಲೂ ಮತ್ತೆ ಜ್ವಾಲಾಮುಖಿ ಸ್ಫೋಟಗೊಂಡಿತ್ತು.

ಸುತ್ತಮುತ್ತಲ ಗ್ರಾಮಗಳಲ್ಲಿ ಜ್ವಾಲಮುಖಿಯ ದೂಳು ಆವರಿಸಿದ್ದು, ಮುಂಜಾಗ್ರತ್ರಾ ಕ್ರಮವಾಗಿ ಸ್ಥಳೀಯ ಆಡಳಿತ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರವಾಗುವಂತೆ ಸೂಚಿಸಿದೆ.
ಸಿಡಿಲಿನ ರೀತಿಯಲ್ಲಿ ಶಬ್ಧ ಕೇಳಿಸಿತ್ತು. ಈವರೆಗೆ ಯಾವುದೇ ಸಾವು ನೋವಿನ ಬಗ್ಗೆ ವರದಿಯಾಗಿಲ್ಲ. ಇಂಡೋನೇಷ್ಯಾದಲ್ಲಿ ಸುಮಾರು 130 ಜ್ವಾಲಾಮುಖಿಗಳು ಕಾರ್ಯ ಪ್ರವೃತ್ತವಾಗಿದ್ದು.
400 ವರ್ಷಗಳಲ್ಲೇ ಮೊದಲ ಬಾರಿಗೆ 2010ರಲ್ಲಿ ಸಿನಾಬಂಗ್ ಪರ್ವತದಿಂದ ಜ್ವಾಲಾಮುಖಿ ಸ್ಫೋಟಿಸಿತ್ತು. ನಂತರ 2013ರಲ್ಲಿಯೂ ಜ್ವಾಲಾಮುಖಿ ಸ್ಫೋಟಿಸಿ, ಅಂದಿನಿಂದ ನಿರಂತರವಾಗಿ ಜ್ವಾಲಾಮುಖಿ ಸಕ್ರಿಯವಾಗಿದೆ.
2014ರಲ್ಲಿ ಉಂಟಾದ ಸ್ಫೋಟದಲ್ಲಿ 16 ಮಂದಿ ಸಾವನ್ನಪ್ಪಿದ್ದರೆ, 2016ರಲ್ಲಿ ಸಂಭವಿಸಿದ್ದ ಜ್ವಾಲಾಮುಖಿ ಸ್ಫೋಟದಲ್ಲಿ 7 ಮಂದಿ ಬಲಿಯಾಗಿದ್ದರು. 2019ರಲ್ಲಿ ಸಂಭವಿಸಿದ ಜ್ವಾಲಾಮುಖಿಯಿಂದ ಯಾವುದೇ ಸಾವು ನೋವು ಉಂಟಾಗಿರಲಿಲ್ಲ.
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications