ಕೋವಿಡ್ ರೋಗಿ ಜತೆ ಟಾಯ್ಲೆಟ್ನಲ್ಲಿ ಸೆಕ್ಸ್ ಮಾಡಿದ ನರ್ಸ್ ಅಮಾನತು
ಜಕಾರ್ತಾ, ಡಿಸೆಂಬರ್ 30: ಆಸ್ಪತ್ರೆಯ ಐಸೋಲೇಷನ್ ವಾರ್ಡ್ನಲ್ಲಿ ಇರಿಸಲಾಗಿದ್ದ ಕೋವಿಡ್ ಸೋಂಕಿತ ವ್ಯಕ್ತಿಯೊಬ್ಬನೊಂದಿಗೆ ನರ್ಸ್ ಒಬ್ಬರು ಲೈಂಗಿಕ ಕ್ರಿಯೆ ನಡೆಸಿದ ಘಟನೆ ಇಂಡೋನೇಷ್ಯಾದಲ್ಲಿ ವರದಿಯಾಗಿದೆ. ಪಿಪಿಇ ಸೂಟ್ ಧರಿಸದ ಕೊರೊನಾ ವೈರಸ್ ರೋಗಿ ಜತೆಗೆ ಕಾಮ ಚಟುವಟಿಕೆಗೆ ಆಕೆ ಪ್ರಯತ್ನಿಸಿದ್ದಾರೆ.
ರಾಜಧಾನಿ ಜಕಾರ್ತಾದಲ್ಲಿನ ವಿಸ್ಮಾ ಅಟ್ಲೆಟ್ ಕ್ವಾರೆಂಟೈನ್ ಸೌಲಭ್ಯದಲ್ಲಿನ ಟಾಯ್ಲೆಟ್ ಒಳಗೆ ಈ ಘಟನೆ ನಡೆದಿದ್ದು, ತಡವಾಗಿ ವರದಿಯಾಗಿದೆ. ಘಟನೆ ನಡೆದ ಸಮಯದಲ್ಲಿ ಕೋವಿಡ್ ಪಾಸಿಟಿವ್ ರೋಗಿಯಾಗಿದ್ದ ವ್ಯಕ್ತಿ ಈ ವಿಚಾರದ ವಿವರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಬಳಿಕ ಬೆಳಕಿಗೆ ಬಂದಿದೆ.
ರೋಗಿಯು ವಾಟ್ಸಾಪ್ ಸ್ಕ್ರೀನ್ ಶಾಟ್ಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ನರ್ಸ್ಳ ಪಿಪಿಇ ಕಿಟ್ ನೆಲದ ಮೇಲೆ ಬಿದ್ದಿದ್ದು ಮತ್ತು ಅವರಿಬ್ಬರೂ ಕಾಮದಾಟದಲ್ಲಿ ತೊಡಗಿರುವ ಅಂಶಗಳನ್ನು ಒಳಗೊಂಡಿದೆ. ಇಬ್ಬರ ಲೈಂಗಿಕ ಚಟುವಟಿಕೆಯ ವಿಡಿಯೋ ಕೂಡ ಅಪ್ಲೋಡ್ ಮಾಡಲಾಗಿದೆ.
ಇಂಡೋನೇಷ್ಯಾದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ 7 ಲಕ್ಷದಷ್ಟಿದೆ. ಇದುವರೆಗೂ 21,000 ಮಂದಿ ವೈರಸ್ನಿಂದ ಮೃತಪಟ್ಟಿದ್ದಾರೆ. ಮುಂದೆ ಓದಿ.

ನರ್ಸ್ ಅಮಾನತು
ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬಳಿಕ ಆಸ್ಪತ್ರೆ ಅಧಿಕಾರಿಗಳು ರೋಗಿ ಮತ್ತು ನರ್ಸ್ ಇಬ್ಬರನ್ನೂ ವಿಚಾರಣೆಗೆ ಒಳಪಡಿಸಿದ್ದಾರೆ. ಕೊರೊನಾ ವೈರಸ್ ರೋಗಿಯ ಪಿಪಿಇ ಕಿಟ್ ಕಳಚಿದ್ದನ್ನು ಒಪ್ಪಿಕೊಂಡ ನರ್ಸ್ಅನ್ನು ಅಮಾನತು ಮಾಡಲಾಗಿದೆ. ಪ್ರಕರಣವನ್ನು ಸೆಂಟ್ರಲ್ ಜಕಾರ್ತಾ ಪೊಲೀಸ್ ತನಿಖೆಗೆ ಒಪ್ಪಿಸಲಾಗಿದೆ.

ರೋಗಿಯಲ್ಲಿ ಪಾಸಿಟಿವ್, ನರ್ಸ್ಗೆ ನೆಗೆಟಿವ್
ರೋಗಿಯೊಬ್ಬರ ಜತೆಗೆ ಲೈಂಗಿಕ ಸಂಪರ್ಕಕ್ಕೆ ಬಂದಿದ್ದ ಕಾರಣ ದಾದಿಯನ್ನು ಕೂಡ ಐಸೋಲೇಷನ್ನಲ್ಲಿ ಇರಿಸಲಾಗಿದೆ. ಘಟನೆ ಬಳಿಕ ಇಬ್ಬರನ್ನೂ ಕೊರೊನಾ ವೈರಸ್ ಪರೀಕ್ಷೆಗೆ ಒಳಪಡಿಸಲಾಗಿದ್ದು, ರೋಗಿಯಲ್ಲಿ ಕೋವಿಡ್ ಪಾಸಿಟಿವ್ ಬಂದಿದ್ದರೆ, ನರ್ಸ್ ವರದಿ ನೆಗೆಟಿವ್ ಬಂದಿದೆ.

ಇಬ್ಬರೂ ವ್ಯಕ್ತಿಗಳ ಬಂಧನ
ಘಟನೆಯು ಸಾಮಾಜಿಕ ಜಾಲತಾಣದಲ್ಲಿ ಬಹಿರಂಗವಾದ ಬಳಿಕ ತೀವ್ರ ವೈರಲ್ ಆಗಿದ್ದು, ಇಂಡೋನೇಷ್ಯಾದ ಕಠಿಣ ಲೈಂಗಿಕ ಚಟುವಟಿಕೆಗಳ ಚಿತ್ರೀಕರಣ ನಿಷೇಧ ಕಾಯ್ದೆಗಳಡಿ ಸೆಂಟ್ರಲ್ ಜಕಾರ್ತಾ ಪೊಲೀಸರು ಇಬ್ಬರನ್ನೂ ಬಂಧಿಸಿದ್ದಾರೆ.

ಲೈಂಗಿಕ ಕ್ರಿಯೆ ನಡೆಸುವಂತಿಲ್ಲ
ಕೊರೊನಾ ವೈರಸ್ ತಡೆಗೆ ತೆಗೆದುಕೊಂಡಿರುವ ಕಠಿಣ ನಿಯಮಗಳ ಪ್ರಕಾರ ಒಣ ಕೆಮ್ಮು, ಜ್ವರ, ಉಸಿರಾಟದ ಸಮಸ್ಯೆಯಂತಹ ಕೋವಿಡ್ ಸಂಬಂಧಿ ಲಕ್ಷಣಗಳನ್ನು ಹೊಂದಿರುವ ವ್ಯಕ್ತಿಗಳ ಜತೆಗೆ ಲೈಂಗಿಕ ಕ್ರಿಯೆ, ಚುಂಬನದಂತಹ ಇತರೆ ಚಟುವಟಿಕೆಗಳನ್ನು ನಡೆಸುವಂತಿಲ್ಲ.
-
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ












Click it and Unblock the Notifications