ಭಾರತೀಯ ವಿದ್ಯಾರ್ಥಿಗಳಿಗಾಗಿ ಆನಂದ್ ಮಹೀಂದ್ರಾ ವೈದ್ಯಕೀಯ ಅಧ್ಯಯನ ಸಂಸ್ಥೆ ಪ್ರಾರಂಭ
ನವದೆಹಲಿ, ಮಾರ್ಚ್ 3: ಭಾರತದಲ್ಲಿ ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಮತ್ತೊಮ್ಮೆ ಸುದ್ದಿ ಆಗಿದ್ದಾರೆ. ಈ ಬಾರಿ ಮಹೀಂದ್ರಾ ಕ್ಯಾಂಪಸ್ ಅಡಿಯಲ್ಲಿ ವೈದ್ಯಕೀಯ ಶಿಕ್ಷಣಕ್ಕೆ ಅನುಕೂಲ ಆಗುವಂತೆ ವಿದ್ಯಾಸಂಸ್ಥೆಗಳನ್ನು ಪ್ರಾರಂಭಿಸುವುದಾಗಿ ಟ್ವೀಟ್ ಮಾಡಿದ್ದಾರೆ.
ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧವು ಹಲವು ಪಾಠಗಳನ್ನು ಕಲಿಸುತ್ತಿದೆ. ಉಕ್ರೇನ್ ನೆಲದಲ್ಲಿ ಭಾರತೀಯ ವಿದ್ಯಾರ್ಥಿಗಳು ಏಕೆ ಅಷ್ಟೊಂದು ಸಂಖ್ಯೆಯಲ್ಲಿ ವೈದ್ಯಕೀಯ ಶಿಕ್ಷಣ ಪಡೆಯುತ್ತಿದ್ದಾರೆ ಎಂಬ ಪ್ರಶ್ನೆ ಎಲ್ಲರನ್ನೂ ಕಾಡುತ್ತಿದೆ.
ಭಾರತದಲ್ಲಿ ಕಡಿಮೆ ಖರ್ಚಿನಲ್ಲಿ ಉತ್ತಮ ವೈದ್ಯಕೀಯ ಶಿಕ್ಷಣ ಪಡೆಯುವುದು ಕಷ್ಟಸಾಧ್ಯವಾದ ಹಿನ್ನೆಲೆ ವಿದೇಶಗಳಲ್ಲಿ ಶಿಕ್ಷಣಕ್ಕಾಗಿ ಭಾರತೀಯರು ತೆರಳುತ್ತಿದ್ದಾರೆ. ಈ ಕುರಿತು ಖಾಸಗಿ ಸಂಸ್ಥೆಯೊಂದು ಪ್ರಕಟಿಸಿದ ವರದಿಯನ್ನು ಟ್ವೀಟ್ ಮಾಡಿರುವ ಆನಂದ್ ಮಹೀಂದ್ರಾ ತಾವು ವೈದ್ಯಕೀಯ ಶಿಕ್ಷಣ ಸಂಸ್ಥೆಗಳನ್ನು ಪ್ರಾರಂಭಿಸುವುದಾಗಿ ಬರೆದುಕೊಂಡಿದ್ದಾರೆ.

ವೈದ್ಯಕೀಯ ಕಾಲೇಜುಗಳಿಗೆ ಭಾರತದಲ್ಲಿ ಇಷ್ಟು ಕೊರತೆಯೇ?
"ಭಾರತದಲ್ಲಿ ವೈದ್ಯಕೀಯ ಕಾಲೇಜುಗಳ ಕೊರತೆ ಇದೆ ಎಂದು ನನಗೆ ತಿಳಿದಿರಲಿಲ್ಲ. @C_P_Gurnani ಯವರೇ ನಾವು ಮಹೀಂದ್ರಾ ವಿಶ್ವವಿದ್ಯಾಲಯದ(@MahindraUni) ಕ್ಯಾಂಪಸ್ನಲ್ಲಿ ವೈದ್ಯಕೀಯ ಅಧ್ಯಯನ ಸಂಸ್ಥೆಯನ್ನು ಸ್ಥಾಪಿಸುವ ಆಲೋಚನೆಯನ್ನು ಅನ್ವೇಷಿಸಬಹುದೇ?," ಎಂದು ಆನಂದ್ ಮಹೀಂದ್ರಾ ಟ್ವೀಟ್ ಮಾಡಿದ್ದಾರೆ.

ಚೀನಾದಲ್ಲಿ ಹೆಚ್ಚು ಭಾರತೀಯ ವಿದ್ಯಾರ್ಥಿಗಳ ವ್ಯಾಸಂಗ
ಭಾರತೀಯ ವಿದ್ಯಾರ್ಥಿಗಳು ವಿದೇಶಗಳಲ್ಲಿ ವೈದ್ಯಕೀಯ ಶಿಕ್ಷಣ ಪಡೆದುಕೊಳ್ಳುವುದಕ್ಕಾಗಿ ಹೋಗುತ್ತಿರುವುದರ ಬಗ್ಗೆ ಇತ್ತೀಚಿಗೆ ಹೆಚ್ಚು ಚರ್ಚೆ ಆಗುತ್ತಿದೆ. ಇದರ ಮಧ್ಯೆ ವೈದ್ಯಕೀಯ ಶಿಕ್ಷಣಕ್ಕಾಗಿ ಅತಿಹೆಚ್ಚು ಭಾರತೀಯ ವಿದ್ಯಾರ್ಥಿಗಳು ಚೀನಾಗೆ ಹೋಗಿದ್ದಾರೆ. ಚೀನಾಗೆ 23,000 ವಿದ್ಯಾರ್ಥಿಗಳು ಹೋಗಿದ್ದರೆ, ಈಗ ಯುದ್ಧದಿಂದ ಸಾಕಷ್ಟು ಸುದ್ದಿ ಆಗಿರುವ ಉಕ್ರೇನ್ ರಾಷ್ಟ್ರಕ್ಕೆ 18,000 ಭಾರತೀಯ ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣ ಪಡೆದುಕೊಳ್ಳುವುದಕ್ಕಾಗಿ ಹೋಗಿದ್ದಾರೆ. ಅದೇ ರೀತಿ ರಷ್ಯಾಗೆ 16,500, ಫಿಲಿಫೈನ್ಸ್ 15,000, ಕಿರ್ಗಿಸ್ತಾನ್ 10,000, ಜಾರ್ಜಿಯಾ 7500, ಬಾಂಗ್ಲಾದೇಶ 5200, ಕಜಕಿಸ್ತಾನ್ 5200, ಪೊಲೆಂಡ್ 4000 ಮತ್ತು ಅರ್ಮೆನಿಯಾದಲ್ಲಿ 3000 ಬಾರತೀಯ ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣ ಪಡೆದುಕೊಳ್ಳುವುದಕ್ಕಾಗಿ ಹೋಗಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ದೇಶದಲ್ಲಿ ಕೈಗೆಟುಕದ ಶುಲ್ಕ
ಭಾರತದ ಮೆಡಿಕಲ್ ಕಾಲೇಜುಗಳು ರಾಜಕಾರಣಿಗಳು ಮತ್ತು ಉಳ್ಳವರ ಅಧೀನವೆ. ಇಲ್ಲಿ ವೈದ್ಯಕೀಯ ಪದವಿ ಮಾಡಬೇಕಾದರೆ ಕನಿಷ್ಠ ಒಂದೂವರೆ ಕೋಟಿ ರೂ.ನಿಂದ ಎರಡು ಕೋಟಿ ರೂ. ಪಾವತಿಸಬೇಕು. ಅದೇ ಉಕ್ರೇನ್, ಫಿಲಿಫೈನ್ಸ್ನಂತಹ ದೇಶಗಳಲ್ಲಿ ಕೇವಲ 15 ರಿಂದ 20 ಲಕ್ಷ ರೂ. ನಲ್ಲಿ ಆರು ವರ್ಷದ ವೈದ್ಯಕೀಯ ಪದವಿ ಮುಗಿಸಬಹುದು. ಭಾರತದಲ್ಲಿ ನೀಟ್ ಪರೀಕ್ಷೆ ಪಾಸಾಗಿ ಸರ್ಕಾರಿ ಸೀಟು ಗಿಟ್ಟಿಸಿಕೊಂಡರು ತಗಲುವ ವೆಚ್ಚದಲ್ಲಿ ವಿದೇಶದಲ್ಲಿ ಮೆಡಿಕಲ್ ಪದವಿ ಪಡೆಯಬಹುದು. ಅಂತಹ ದುಃಸ್ಥಿತಿ ಭಾರತದಲ್ಲಿದೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications