ಸಿಡ್ನಿ: ಉಗ್ರರ ವಶದಲ್ಲಿ ಇನ್ಫೋಸಿಸ್ ಉದ್ಯೋಗಿ
ಸಿಡ್ನಿ, ಡಿ.15: ಇಲ್ಲಿನ ಒಪೆರಾ ಹೌಸ್ ನ ಮಾರ್ಟಿನ್ ಪ್ಲೇಸಿನ ಕೆಫೆಯಲ್ಲಿ ಉಗ್ರರ ಒತ್ತೆಯಾಳಾಗಿರುವವರ ಪೈಕಿ ಇನ್ಫೋಸಿಸ್ ನ ಉದ್ಯೋಗಿಯೂ ಇರುವುದು ದೃಢಪಟ್ಟಿದೆ.ಹೈದರಾಬಾದ್ ಮೂಲದ ವಿಶ್ವಕಾಂತ್ ರೆಡ್ಡಿ ಅವರು ಉಗ್ರರ ವಶದಲ್ಲಿದ್ದಾರೆ ಎಂದು ಇನ್ಫೋಸಿಸ್ ಕೂಡಾ ಸ್ಪಷ್ಟಪಡಿಸಿದೆ.
ಇರಾಕಿ ಉಗ್ರರ ಕಣ್ತಪ್ಪಿಸಿ Lindt Chocolat Cafeಯಿಂದ ಮೂವರು ಒತ್ತೆಯಾಳುಗಳು ಹೊರ ಬಂದಿರುವ ಸುದ್ದಿ ಬಂದ ಬೆನ್ನಲ್ಲೇ ಇನ್ಫೋಸಿಸ್ ಸಂಸ್ಥೆಯ ಸಾಫ್ಟ್ ವೇರ್ ಇಂಜಿನಿಯರ್ ವಿಶ್ವಕಾಂತ್ ರೆಡ್ಡಿ ಉಗ್ರರ ವಶದಲ್ಲಿರುವ ಬಗ್ಗೆ ಮಾಹಿತಿ ಸಿಕ್ಕಿದೆ.
'ನಮ್ಮ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹೈದರಾಬಾದ್ ಮೂಲದ ವಿಶ್ವಕಾಂತ್ ರೆಡ್ಡಿ ಅವರು ಉಗ್ರರ ವಶದಲ್ಲಿದ್ದಾರೆ. ಸಂಸ್ಥೆಯ ಇತರೆ ಉದ್ಯೋಗಿಗಳ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ. ಭಾರತೀಯ ರಾಯಭಾರ ಕಚೇರಿಗೆ ಮಾಹಿತಿಗಾಗಿ ಕೋರಲಾಗಿದೆ ಎಂದು ಇನ್ಫೋಸಿಸ್ ತನ್ನ ಪ್ರಕಟಣೆಯಲ್ಲಿ ಹೇಳಿದೆ. [ಬೆಂಗಳೂರಿಗೆ ಮುಹೂರ್ತವಿಟ್ಟ ಉಗ್ರರು?]

ಉಗ್ರರು ಸುಮಾರು 9 ಗಂಟೆಗಳ ಕಾಲದಿಂದ ಒಪೆರಾ ಹೌಸ್ ನ ಜನಪ್ರಿಯ ಕೆಫೆಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಸುಮಾರು 50 ಕ್ಕೂ ಅಧಿಕ ನಾಗರಿಕರನ್ನು ಒತ್ತೆಯಾಳು ಮಾಡಿಕೊಂಡಿದ್ದಾರೆ. ಈ ಪೈಕಿ ಐವರು ಉಗ್ರರ ಹಿಡಿತದಿಂದ ತಪ್ಪಿಸಿಕೊಂಡಿದ್ದಾರೆ. ಐಎಸ್ಐಎಸ್ ಬಾವುಟ ಹಾರಾಟ ಹಾಗೂ ಆಸ್ಟ್ರೇಲಿಯಾ ಪ್ರಧಾನಿ ಟೋನಿ ಅಬೋಟ್ ಜೊತೆ ಮಾತುಕತೆ ನಡೆಸಲು ಉಗ್ರರು ಮುಂದಾಗಿದ್ದಾರೆ. [ಸಿಡ್ನಿ: ಉಗ್ರರ ಚಟುವಟಿಕೆ ಕ್ಷಣ ಕ್ಷಣದ ಅಪ್ದೇಡ್ಸ್]
NSW police commissioner Andrew Scipione says the safety of hostages remains the "number one priority". #sydneysiege http://t.co/NNqv8WVWWJ
— Sky News (@SkyNews) December 15, 2014 ಒಪೆರಾ ಹೌಸ್ ನ ಸುತ್ತಾ ಮುತ್ತಾ ನಾಲ್ಕು ಬಾಂಬ್ ಇರಿಸುವುದಾಗಿ ಉಗ್ರರು ಬೆದರಿಕೆ ಒಡ್ಡಿರುವುದರಿಂದ ಪರಿಸ್ಥಿತಿ ಉದ್ವಿಗ್ನವಾಗಿದೆ. ಲಿಂಟ್ ಚಾಕಲೇಟ್ ಕೆಫೆ ಬಳಿ ಎರಡು ಬಾಂಬ್ ಹಾಗೂ ಸೆಂಟ್ರಲ್ ಬಿಸಿನೆಸ್ ಡಿಸ್ಟ್ರೀಕ್ಟ್ ನ ಪ್ರಮುಖ ಸ್ಥಳವೊಂದರಲ್ಲಿ ಮಿಕ್ಕ ಎರಡು ಬಾಂಬ್ ಇಟ್ಟಿರುವುದಾಗಿ ತಿಳಿದು ಬಂದಿದೆ ಎಂದು ನೆಟ್ವರ್ಕ್ ಟೆನ್ ಹಾಗೂ ಸ್ಕೈ ನ್ಯೂಸ್ ವರದಿ ಮಾಡಿದೆ.
-
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications