ಜಾಧವ್ ಗಲ್ಲುಶಿಕ್ಷೆ: ಐಸಿಜೆಯಲ್ಲಿ ಪಾಕ್ ವಿರುದ್ಧ ಭಾರತದ ತೀಕ್ಷ್ಣ ವಾದ
ಹೇಗ್, ಫೆಬ್ರವರಿ 18: ಭಾರತದ ಪ್ರಜೆ ಕುಲಭೂಷಣ್ ಜಾಧವ್ ಅವರಿಗೆ ಪಾಕಿಸ್ತಾನ ಗಲ್ಲುಶಿಕ್ಷೆ ವಿಧಿಸಿದ ತೀರ್ಪನ್ನು ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದ ಭಾರತ, ಸೋಮವಾರ ಪಾಕಿಸ್ತಾನದ ಕ್ರಮವನ್ನು ಖಂಡಿಸಿ ವಾದ ಮಂಡಿಸಿತು.
ನೆದರ್ಲ್ಯಾಂಡ್ನ ಹೇಗ್ನಲ್ಲಿರುವ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಕುಲಭೂಷಣ್ ಯಾದವ್ ಪರ ಹರೀಶ್ ಸಾಳ್ವೆ ನೇತೃತ್ವದ ತಂಡ ತನ್ನ ವಾದ ಮತ್ತು ಸಾಕ್ಷ್ಯಗಳನ್ನು ದಾಖಲಿಸಿತು.
ಪಾಕಿಸ್ತಾನವು ತನ್ನ ನ್ಯಾಯಾಲಯದ ತೀರ್ಪನ್ನು ಸಮರ್ಥಿಸಿಕೊಳ್ಳಲು ಮಂಗಳವಾರ ವಾದ ಮಂಡಿಸಲಿದೆ. ಹರೀಶ್ ಸಾಳ್ವೆ ಅವರು ಐಸಿಜೆ ಮುಂದಿಟ್ಟ ಸುದೀರ್ಘ ವಾದದ ಕೆಲವು ಪ್ರಮುಖ ಅಂಶಗಳು ಇಲ್ಲಿವೆ.
* ಭಾರತೀಯನ ಜೀವ ಅಪಾಯದಲ್ಲಿರುವುದು ದುರದರಷ್ಟಕರ.
* ವಿಯೆನ್ನಾ ಒಪ್ಪಂದವನ್ನು ಪಾಕಿಸ್ತಾನ ಉಲ್ಲಂಘಿಸಿದೆ. ಕುಲಭೂಷಣ್ ಭೇಟಿಗೆ ರಾಜತಾಂತ್ರಿಕರಿಗೆ ಪಾಕಿಸ್ತಾನ ಅವಕಾಶ ನೀಡಿಲ್ಲ. ಹದಿಮೂರು ಬಾರಿ ಮನವಿ ಸಲ್ಲಿಸಿದರೂ ಅದನ್ನು ತಿರಸ್ಕರಿಸಲಾಗಿದೆ. ರಾಜತಾಂತ್ರಿಕ ಅನುಮತಿಗೆ ಸಂಬಂಧಿಸಿದಂತೆ ಮಾಡಿಕೊಳ್ಳಲಾಗಿದ್ದ ಒಪ್ಪಂದವನ್ನು ಪಾಕಿಸ್ತಾನ ಉಲ್ಲಂಘಿಸಿದೆ.
*ಸೇನಾ ನ್ಯಾಯಾಲಯದ ವಿಚಾರಣೆ ಕ್ರಮ ತೃಪ್ತಿಕರವಾಗಿಲ್ಲ. ತನ್ನ ಕಾರ್ಯಸಾಧನೆಗಾಗಿ ಜಾಗತಿಕ ವೇದಿಕೆಯನ್ನು ಪಾಕಿಸ್ತಾನ ದುರ್ಬಳಕೆ ಮಾಡಿಕೊಳ್ಳುತ್ತಿದೆ.

* ಪಾಕಿಸ್ತಾನ ಸೇನೆ ಅಪಹರಣ ಮಾಡಿರುವುದಕ್ಕೆ ಭಾರತದ ಬಳಿ ಸಾಕ್ಷ್ಯ ಇದೆ. ಪಾಕಿಸ್ತಾನ ಜಾಧವ್ ಅವರನ್ನು ವಶಕ್ಕೆ ಪಡೆದುಕೊಂಡ ದಿನಾಂಕವನ್ನು ತಿಳಿಸಿಲ್ಲ.
* ಜಾಧವ್ ವಿರುದ್ಧ ತಡವಾಗಿ ಎಫ್ಐಆರ್ ದಾಖಲಿಸಲಾಗಿದೆ. ನಕಲಿ ದಾಖಲೆಗಳ ಮೂಲಕ ಪಾಕಿಸ್ತಾನ ಸುಳ್ಳು ಪ್ರಚಾರ ಮಾಡಿದೆ. ಪಾಕಿಸ್ತಾನವು ಜಾಧವ್ ಅವರ ಪತ್ನಿಯ ಕುರಿತಾದ ವಿವರಗಳನ್ನು ಪಡೆದುಕೊಳ್ಳಲು ಪ್ರಯತ್ನಿಸಿತ್ತು. ಜಾಧವ್ ಅವರ ಗುರುತಿಗಾಗಿ ಭಾರತ ದಾಖಲೆಗಳನ್ನು ಒದಗಿಸಿತ್ತು.
* ಜಾಧವ್ ಬಂಧನ ಕಾನೂನು ವಿರೋಧಿ. ಪಾಕಿಸ್ತಾನದ ಆರೋಪದಲ್ಲಿ ಹುರುಳಿಲ್ಲ ಎನ್ನುವುದನ್ನು ಭಾರತ ಸಾಬೀತುಪಡಿಸಿದೆ. ಭಾರತ ಆರೋಪಪಟ್ಟಿಯ ಪ್ರತಿಗಳನ್ನು ಕೇಳಿತ್ತು. ಆದರೆ ಇದುವರೆಗೂ ಜಾಧವ್ ವಿಚಾರಣೆಯ ಯಾವ ದಾಖಲೆಗಳನ್ನೂ ಪಾಕಿಸ್ತಾನ ಒದಗಿಸಿಲ್ಲ. ಸಾಕ್ಷಿಗಳ ವಿಚಾರಣೆಗೆ ಸಹ ಅವಕಾಶ ನೀಡಿಲ್ಲ.
* ಕುಲಭೂಷಣ್ ಜಾಧವ್ಗೆ ತನ್ನ ಹಕ್ಕುಗಳನ್ನು ನೀಡಿಲ್ಲ. ತಪ್ಪೊಪ್ಪಿಗೆ ಹೇಳಿಕೆ ನೀಡುವಂತೆ ಒತ್ತಡ ಹೇರಲಾಗಿದೆ.
* ಬೇಹುಗಾರಿಕೆ ಆರೋಪದಡಿ ಗಲ್ಲುಶಿಕ್ಷೆ ನೀಡಲಾಗಿದೆ. ಆದರೆ, ಪ್ರಕರಣದ ವಿಚಾರಣೆಯನ್ನು ಸೂಕ್ತವಾಗಿ ನಡೆಸಿಲ್ಲ.
* ಗೂಢಚಾರಿಗಳಿಗೂ ವಿಯೆನ್ನಾ ಒಪ್ಪಂದದಲ್ಲಿ ಎಲ್ಲ ಹಕ್ಕುಗಳನ್ನು ನೀಡಲಾಗಿದೆ. ಪಾಕಿಸ್ತಾನ ಮಾನವ ಹಕ್ಕುಗಳಿಗಿಂತ ದೇಶದ ಸಾರ್ವಭೌಮತೆಗೆ ಆದ್ಯತೆ ನೀಡಿದೆ.
-
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ












Click it and Unblock the Notifications