ಶ್ರೀಲಂಕಾ ಸಮುದ್ರ ಭಾಗದಲ್ಲಿ ಹೊತ್ತಿ ಉರಿದ ತೈಲ ಟ್ಯಾಂಕರ್: ಕೇರಳ ತೀರದಲ್ಲಿ ಕಟ್ಟೆಚ್ಚರ
ಕೊಲಂಬೋ, ಸೆಪ್ಟೆಂಬರ್ 4: ಕುವೈತ್ನಿಂದ ಭಾರತಕ್ಕೆ ತೈಲ ಹೊತ್ತು ತರುತ್ತಿದ್ದ ನೌಕೆಯೊಂದು ಶ್ರೀಲಂಕಾದ ಪೂರ್ವ ಕರಾವಳಿ ಸಮೀಪ ಹೊತ್ತಿ ಉರಿದ ಘಟನೆ ಗುರುವಾರ ನಡೆದಿದೆ. ಘಟನೆಯಲ್ಲಿ ನೌಕೆಯಲ್ಲಿದ್ದ 23 ಸಿಬ್ಬಂದಿ ಪೈಕಿ ಒಬ್ಬರು ಕಣ್ಮರೆಯಾಗಿದ್ದು, ಮತ್ತೊಬ್ಬರು ಗಾಯಗೊಂಡಿದ್ದಾರೆ. ಈ ಸಂಬಂಧ ಕೇರಳ ತನ್ನ ಕರಾವಳಿ ಭಾಗದಲ್ಲಿ ಕಟ್ಟೆಚ್ಚರ ವಹಿಸಿದೆ.
Recommended Video
ಇಂಡಿಯನ್ ಆಯಿಲ್ ಕಾರ್ಪೊರೇಷನ್ನ (ಐಒಸಿ) ಪನಾಮಾ ನೋಂದಣಿಯ ಆಯಿಲ್ ಟ್ಯಾಂಕರ್ 'ನ್ಯೂ ಡೈಮಂಡ್' 2,70,000 ಮೆಟ್ರಿಕ್ ಟನ್ನಷ್ಟು ಕಚ್ಚಾ ತೈಲವನ್ನು ಕುವೈತ್ನಿಂದ ಭಾರತಕ್ಕೆ ಹೊತ್ತು ತರುತ್ತಿತ್ತು. ಪೂರ್ವ ಜಿಲ್ಲೆ ಅಂಪಾರದಲ್ಲಿ ಸಂಘಮಂಕಂದ ಕರಾವಳಿ ಸಮೀಪ ಅದರ ಎಂಜಿನ್ ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅದರ ಸರಕು ಪ್ರದೇಶಕ್ಕೆ ಯಾವುದೇ ಹಾನಿಯಾಗಿಲ್ಲ.
ಸಮುದ್ರದಲ್ಲಿ ತೈಲ ಸೋರಿಕೆಯಾಗಿದ್ದರೆ ತನ್ನ 600 ಕಿ.ಮೀ ಚದರ ಕರಾವಳಿ ಪ್ರದೇಶಕ್ಕೆ ಅಪಾಯ ಸಂಭವಿಸುವ ಸಾಧ್ಯತೆ ಇರುವುದರಿಂದ ಘಟನೆಯ ಬಗ್ಗೆ ವಿವರವಾದ ಮಾಹಿತಿ ನೀಡುವಂತೆ ಭಾರತ ರಾಷ್ಟ್ರೀಯ ಸಾಗರ ಮಾಹಿತಿ ಸೇವೆಗಳ ಕೇಂದ್ರಕ್ಕೆ (ಐಎನ್ಸಿಒಐಎಸ್) ಕೇರಳ ಸರ್ಕಾರ ಕೋರಿದೆ. ಕೇರಳ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ಈ ಸಂಬಂಧ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಪ್ರಾಥಮಿಕ ಅಧ್ಯಯನ ಪ್ರಕಾರ ಸಮುದ್ರಕ್ಕೆ ಸೋರಿಕೆಯಾದ ತೈಲವು ಶೀಘ್ರದಲ್ಲಿಯೇ ಕೇರಳ ತೀರಕ್ಕೆ ತಲುಪಲಿದೆ ಎಂದು ಸರ್ಕಾರ ನಿರೀಕ್ಷಿಸಿದೆ. ಸಮುದ್ರದ ಪ್ರಸ್ತುತ ಚಲನೆಯ ದಿಕ್ಕು ಮತ್ತು ಗಾಳಿಯ ವೇಗವನ್ನು ಇದು ಅವಲಂಬಿಸಿದೆ. ಭಾರಿ ಪ್ರಮಾಣದಲ್ಲಿ ತೈಲ ಸೋರಿಕೆಯಾಗಿದ್ದರೆ ರಾಜ್ಯದ ಮೀನುಗಾರಿಕೆ ವಲಯ ಹಾಗೂ ಪರಿಸರಕ್ಕೆ ಅಪಾರ ಹಾನಿಯಾಗಲಿದೆ. ತೈಲ ಸೋರಿಕೆ ಸಂಕಷ್ಟ ಸಂಭವಿಸಿದರೆ ಅದನ್ನು ಎದುರಿಸುವ ಯಾವುದೇ ವ್ಯವಸ್ಥೆ ಕೇರಳದಲ್ಲಿಲ್ಲ.
ಕೂಡಲೇ ಸಮುದ್ರದ ಭಾಗಕ್ಕೆ ಧಾವಿಸಿದ ಶ್ರೀಲಂಕಾ ನೌಕಾಪಡೆ ಬೆಂಕಿಯನ್ನು ನಂದಿಸಿ ಸಿಬ್ಬಂದಿಯನ್ನು ರಕ್ಷಿಸಿದೆ. ಹೆಚ್ಚಿನ ಅನಾಹುತ ಸಂಭವಿಸದಂತೆ ಅದು ತಡೆದಿದೆ. ಫಿಲಿಪ್ಪೈನ್ ಮೂಲದ ಒಬ್ಬ ಸಿಬ್ಬಂದಿ ಇನ್ನೂ ಪತ್ತೆಯಾಗಿಲ್ಲ. ಗಾಯಗೊಂಡ ಮತ್ತೊಬ್ಬ ಫಿಲಿಪ್ಪೈನ್ ಪ್ರಜೆಯನ್ನು ರಕ್ಷಿಸಲಾಗಿದೆ. ಅವರನ್ನು ಕಲ್ಮುನೈನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಶ್ರೀಲಂಕಾದ ನೌಕಾಪಡೆ ತಿಳಿಸಿದೆ. ನೌಕಾ ಪಡೆಗಳು ಟ್ಯಾಂಕರ್ನ ನಾಯಕ ಮತ್ತು ಇತರೆ ಸಿಬ್ಬಂದಿಯನ್ನು ರಕ್ಷಿಸಿದೆ. ಅವರ ದೇಶದ ವಿವರಗಳನ್ನು ಬಹಿರಂಗಪಡಿಸಿಲ್ಲ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video












Click it and Unblock the Notifications