ಟ್ರಂಪ್ ಎಚ್ಚರಿಕೆಗೆ ಕ್ಯಾರೇ ಅನ್ನದೆ ಇರಾನ್ ನಿಂದ ಕ್ಷಿಪಣಿ ಪರೀಕ್ಷೆ
ಟೆಹರಾನ್, ಫೆಬ್ರವರಿ 1: ಇರಾನ್ ಹೊಸ ಕ್ಷಿಪಣಿ ಪರೀಕ್ಷೆ ನಡೆಸಿದೆ ಎಂದು ರಕ್ಷಣಾ ಸಚಿವ ಹೊಸೈನ್ ದೆಹಘಾನ್ ಬುಧವಾರ ಹೇಳಿದ್ದಾರೆ. ಈ ಪರೀಕ್ಷೆಯು ಟೆಹರಾನ್ ಅಣು ಒಪ್ಪಂದ ಅಥವಾ ವಿಶ್ವ ಸಂಸ್ಥೆ ಭದ್ರತಾ ಕೌನ್ಸಿಲ್ ನ ನಿರ್ಣಯವನ್ನು ಉಲ್ಲಂಘಿಸಿಲ್ಲ ಎಂದು ಸಹ ಅವರು ಹೇಳಿದ್ದಾರೆ.
2015ರ ಅಣು ಒಪ್ಪಂದದ ನಂತರ ಇರಾನ್ ಹಲವು ಕ್ಷಿಪಣಿ ಪ್ರಯೋಗಗಳನ್ನು ನಡೆಸಿದೆ. ಆದರೆ ಅಮೆರಿಕದಲ್ಲಿ ಡೊನಾಲ್ಡ್ ಟ್ರಂಪ್ ಅಧಿಕಾರಕ್ಕೆ ಬಂದ ನಂತರ ಇದೇ ಮೊದಲ ಬಾರಿಗೆ ಕ್ಷಿಪಣಿ ನಡೆಸಿದೆ. ಅಧ್ಯಕ್ಷೀಯ ಚುನಾವಣೆ ಪ್ರಚಾರದ ವೇಳೆ, ಇರಾನ್ ನ ಕ್ಷಿಪಣಿ ಪರೀಕ್ಷೆಗಳನ್ನು ನಿಲ್ಲಿಸುತ್ತೇನೆ ಎಂದು ಟ್ರಂಪ್ ಹೇಳಿದ್ದರು.[ಇರಾನ್ ಜನನಾಯಕನ ಅಂತ್ಯಕ್ರಿಯೆಗೆ ಜನಸಾಗರ ನಿರೀಕ್ಷೆ]

"ಈ ಕ್ಷಿಪಣಿ ಪರೀಕ್ಷೆ ಬಹಳ ಹಿಂದೆಯೇ ನಿಗದಿಯಾಗಿತ್ತು. ಮತ್ತು ವಿದೇಶೀಯರು ನಮ್ಮ ರಕ್ಷಣಾ ವಿಚಾರದಲ್ಲಿ ತಲೆಹಾಕಲು ಬಿಡುವುದಿಲ್ಲ" ಎಂದು ಹೊಸೈನ್ ದೆಹಘಾನ್ ಹೇಳಿದ್ದಾರೆ. ಈ ಪರೀಕ್ಷೆಯು ಅಣು ಒಪ್ಪಂದವನ್ನಾಗಲೀ, ವಿಶ್ವಸಂಸ್ಥೆಯ ನಿರ್ಣಯವನ್ನಾಗಲೀ ಉಲ್ಲಂಘಿಸಿಲ್ಲ" ಎಂದಿದ್ದಾರೆ.
ಯುಎಸ್ ಅಧಿಕಾರಿಯೊಬ್ಬರು ಈ ಬಗ್ಗೆ ಸೋಮವಾರ ಮಾತನಾಡಿ, ಇರಾನ್ ಭಾನುವಾರ ಮಧ್ಯಮ ದೂರದ ಕ್ಷಿಪಣಿ ಪರೀಕ್ಷೆ ನಡೆಸಿದೆ. 630 ಮೈಲಿ ಕ್ರಮಿಸಿದ ನಂತರ ಅದು ಸ್ಫೋಟಗೊಂಡಿದೆ ಎಂದು ತಿಳಿಸಿದ್ದಾರೆ. ಆದರೆ ಇರಾನ್ ವಿದೇಶಾಂಗ ಸಚಿವ ಮೊಹಮ್ಮದ್ ಜಾವೇದ್ ಝರೀಫ್ ಯುಎಸ್ ಅಧಿಕಾರಿಯ ವರದಿಯನ್ನು ಖಾತ್ರಿಯೂ ಪಡಿಸಿಲ್ಲ, ನಿರಾಕರಿಸಿಯೂ ಇಲ್ಲ. ಆದರೆ, ಟೆಹರಾನ್ ಕ್ಷಿಪಣಿಯನ್ನು ಯಾವುದೇ ದೇಶದ ವಿರುದ್ಧ ದಾಳಿ ನಡೆಸಲು ಬಳಸುವುದಿಲ್ಲ ಎಂದು ಹೇಳಿದ್ದಾರೆ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications