ಇರಾನ್ ಸಂಘರ್ಷ ಪರಿಣಾಮ ತೈಲ ಸಂಸ್ಕರಣಾ ಘಟಕಗಳೇ ಉಡೀಸ್, ಜಗತ್ತಿನಾದ್ಯಂತ ತೈಲ ಬೆಲೆ ಏರಿಕೆಯ ಭೀತಿ... Iran Conflict
ಮಧ್ಯಪ್ರಾಚ್ಯ ಪರಿಸ್ಥಿತಿ ಈಗ ಹೇಗೆ ಆಗಿದೆ ಎಂದರೆ, ಒಂದು ಕಡೆ ಯುದ್ಧ ನಿಲ್ಲದೇ ಇದ್ದರೆ ಸರ್ವನಾಶ ಗ್ಯಾರಂಟಿ. ಇನ್ನೊಂದು ಕಡೆ ಯುದ್ಧ ನಿಲ್ಲಿಸಬೇಕು ಎಂದರೆ ನೂರಾರು ಅಡ್ಡಿ ಆತಂಕದ ಜೊತೆಯಲ್ಲೇ ಅಮೆರಿಕ ಅಧ್ಯಕ್ಷರ ಪ್ರತಿಷ್ಠೆಯ ಪ್ರಶ್ನೆ ಎದುರಾಗಿದೆ. ಹೀಗಾಗಿ ಇರಾನ್ ಮತ್ತು ಅಮೆರಿಕ ನಡುವಿನ ಈ ಯುದ್ಧ ಬಿಸಿ ತುಪ್ಪವಾಗಿ ಪರಿಣಮಿಸಿದೆ ಗಲ್ಫ್ ದೇಶಗಳಿಗೆ. ಹೀಗಿದ್ದಾಗ ಇಸ್ರೇಲ್ ಸೇನೆಯಿಂದ ಇರಾನ್ ದೇಶದ ತೈಲ ನಿಕ್ಷೇಪಗಳು ಹಾಗೂ ತೈಲ ಸಂಸ್ಕರಣಾ ಘಟಕಗಳ ಮೇಲೆ ದಾಳಿ ಆಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿತ್ತು. ಆ ನಂತರ ಮತ್ತೆ ರೊಚ್ಚಿಗೆದ್ದ ಇರಾನ್ ಸೇನೆ ಅಮೆರಿಕ ಹಾಗೂ ಇಸ್ರೇಲ್ ವಿರುದ್ಧ ಸೇಡು ತೀರಿಸಿಕೊಳ್ಳಲು ತನ್ನ ಅಕ್ಕಪಕ್ಕದ ದೇಶಗಳ ತೈಲ ಘಟಕಗಳ ಮೇಲೆ ದಾಳಿ ಮಾಡ್ತಿದೆ.
ಯುದ್ಧದ ಕುಲುಮೆಯಲ್ಲಿ ಬೆಂದು ಹೋಗುತ್ತಿವೆ ತೈಲ ಶ್ರೀಮಂತಿಕೆ ಹೊಂದಿರುವ ಅರಬ್ ದೇಶಗಳು. ಮಧ್ಯಪ್ರಾಚ್ಯ ಭಾಗದಲ್ಲಿ ಅಮೆರಿಕ & ಇಸ್ರೇಲ್ ಪಾಲಿಗೆ ಈಗ ಉಳಿದಿರುವ ಏಕೈಕ ಶತ್ರು ದೇಶ ಇರಾನ್, ಇದೇ ಕಾರಣಕ್ಕೆ ಪದೇ ಪದೇ ಇಸ್ರೇಲ್ ಮತ್ತು ಇರಾನ್ ನಡುವೆ ತಿಕ್ಕಾಟ ನಡೆಯುತ್ತಲೇ ಬಂದಿದೆ. ಈ ತಿಕ್ಕಾಟ 2025 ಜೂನ್ ತಿಂಗಳಲ್ಲಿ ಜೋರಾಗಿ, ದೊಡ್ಡ ಮಟ್ಟಿಗೆ ಯುದ್ಧ ಕೂಡ ನಡೆದಿತ್ತು. ನಂತರ ಯುದ್ಧ ಸೈಲೆಂಟ್ ಆಗಿ, ಶಾಂತಿ ಮಾತುಕತೆ ಮೂಲಕ ಎಲ್ಲಾ ತಣ್ಣಗಾಗಿತ್ತು. ಮತ್ತೊಮ್ಮೆ ಯುದ್ಧವು ನಡೆಯಲ್ಲ ಬಿಡು ಎಂಬ ನಿರೀಕ್ಷೆ ಕೂಡ ಅರಬ್ ದೇಶಗಳಲ್ಲಿ ಮೂಡಿತ್ತು.

ಆದರೆ ಕಳೆದ ತಿಂಗಳು ಎಂದರೆ ಫೆಬ್ರವರಿ 28ಕ್ಕೆ ಮತ್ತೆ ಇರಾನ್ ವಿರುದ್ಧ ಮುಗಿಬಿದ್ದ ಇಸ್ರೇಲ್, ದೊಡ್ಡ ಮಟ್ಟದಲ್ಲಿ ದಾಳಿಯ ನಡೆಸಿತ್ತು. ಆ ನಂತರ ಇಸ್ರೇಲ್ ಮತ್ತು ಅಮೆರಿಕ ಒಟ್ಟಾಗಿ ಇರಾನ್ ಮೇಲೆ ಯುದ್ಧ ಘೋಷಿಸಿ, ಈ ಯುದ್ಧದಲ್ಲಿ ಈಗಾಗಲೇ ಇರಾನ್ ಸುಪ್ರೀಂ ಲೀಡರ್ ಆಗಿದ್ದ ಖಮೇನಿ ಸೇರಿ ಇರಾನ್ ದೇಶದ ದೊಡ್ಡ ದೊಡ್ಡ ನಾಯಕರೇ ಜೀವ ಬಿಟ್ಟಿದ್ದಾರೆ. ಇಷ್ಟಾದರೂ ಈ ಯುದ್ಧ ನಿಲ್ಲದೆ, ತೈಲ ನಿಕ್ಷೇಪಗಳ ಮೇಲೆ ದಾಳಿ ನಡೆಯುವ ಹಂತಕ್ಕೆ ಬಂದು ನಿಂತಿದೆ. ಸೌದಿ ಅರೇಬಿಯಾ ಸೇರಿದಂತೆ ಹಲವು ದೇಶಗಳ ಎಚ್ಚರಿಕೆ ನಡುವೆ ಕೂಡ ಮತ್ತೆ ತೈಲ ನಿಕ್ಷೇಪಗಳ ಮೇಲೆ ದಾಳಿ ಮುಂದುವರಿಸಿದೆ ಇರಾನ್ ಸೇನೆ. ಈ ಬೆಳವಣಿಗೆ ಅಮೆರಿಕ ಮತ್ತು ಇಸ್ರೇಲ್ ನಾಯಕರನ್ನು ಇನ್ನಷ್ಟು ಕೆರಳುವಂತೆ ಮಾಡುತ್ತಿದೆ. ಇಷ್ಟೆಲ್ಲಾ ಬೆಳವಣಿಗೆ ನಡುವೆ ಕಚ್ಚಾತೈಲ ಬೆಲೆ ಬರೋಬ್ಬರಿ 111 ಡಾಲರ್ ಪ್ರತಿ ಬ್ಯಾರಲ್ಗೆ ತಲುಪಿಬಿಟ್ಟಿದೆ.
-
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ












Click it and Unblock the Notifications