Iran Conflict: ಹೇಗಿದ್ದರೆ ಹಾಗೆ, ಯಾವ ವಾಹನ ಸಿಕ್ಕರೆ ಅದರಲ್ಲಿ ತಕ್ಷಣ ಇರಾನ್ ಬಿಟ್ಟು ಹೊರಡಿ: ಭಾರತ ಸರ್ಕಾರ ಸೂಚನೆ
ಇರಾನ್: ಇರಾನ್ನಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ಭಾರತೀಯ ರಾಯಭಾರಿ ಕಚೇರಿಯು ಅಲ್ಲಿನ ಭಾರತೀಯ ಪ್ರಜೆಗಳಿಗೆ ತುರ್ತು ಸಂದೇಶವನ್ನು ನೀಡಿದೆ. ಇರಾನ್ನಲ್ಲಿ ಪ್ರತಿಭಟನೆಗಳು ತೀವ್ರ ಹಿಂಸಾಸ್ವರೂಪ ಪಡೆದುಕೊಂಡಿದೆ. ಅಲ್ಲದೇ ಇರಾನ್ನ ಮೇಲೆ ಅಮೆರಿಕ ಮತ್ತು ಇಸ್ರೇಲ್ ದಾಳಿ ಮಾಡುವ ಭೀತಿಯೂ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಟೆಹ್ರಾನ್ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಭಾರತೀಯ ಪ್ರಜೆಗಳಿಗೆ ತುರ್ತು ಸಂದೇಶವನ್ನು ಹಂಚಿಕೊಂಡಿದೆ.
ಪ್ರಸ್ತುತ ಇರಾನ್ನಲ್ಲಿರುವ ಭಾರತೀಯ ಪ್ರಜೆಗಳು - ವಿದ್ಯಾರ್ಥಿಗಳು, ಯಾತ್ರಿಕರು, ವ್ಯಾಪಾರಿಗಳು ಹಾಗೂ ಪ್ರವಾಸಿಗರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವಿಧಾನಗಳ ಮೂಲಕ ಸಾಧ್ಯವಾದಷ್ಟು ಬೇಗ ದೇಶ ಬಿಡುವಂತೆ ಸೂಚನೆ ನೀಡಲಾಗಿದೆ. ಇರಾನ್ನಲ್ಲಿ ಪರಿಸ್ಥಿತಿ ಗಂಭೀರ ಸ್ವರೂಪವನ್ನು ಪಡೆದುಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ರಾಯಭಾರ ಕಚೇರಿಯು ಈ ಮುನ್ಸೂಚನೆಯನ್ನು ನೀಡಿದೆ.

ಇರಾನ್ನಲ್ಲಿರುವ ಭಾರತೀಯ ಪ್ರಜೆಗಳಿಗೆ ಹೇಗಿದ್ದರೆ ಹಾಗೆ, ಯಾವ ವಾಹನ ಸಿಕ್ಕರೆ ಅದರಲ್ಲಿ ತಕ್ಷಣ ಇರಾನ್ ಬಿಟ್ಟು ಹೊರಡಿ ಎಂದು ಭಾರತ ಸರ್ಕಾರವು ಸೂಚನೆ ನೀಡಿದೆ. ಇರಾನ್ನಲ್ಲಿರುವ ಎಲ್ಲಾ ಭಾರತೀಯರು ಎಚ್ಚರಿಕೆ ವಹಿಸಬೇಕೆಂದು ರಾಯಭಾರ ಕಚೇರಿಯು ಪುನರುಚ್ಚರಿಸಿದೆ. ಪ್ರತಿಭಟನೆಗಳು ನಡೆಯುತ್ತಿರುವ ಪ್ರದೇಶಗಳಿಂದ ಎಚ್ಚರಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ಅಲ್ಲದೇ ಇರಾನ್ನಲ್ಲಿರುವ ಭಾರತೀಯರು, ಭಾರತೀಯ ರಾಯಭಾರ ಕಚೇರಿಯೊಂದಿಗೆ ಸಂಪರ್ಕದಲ್ಲಿರಲು ಮತ್ತು ಯಾವುದೇ ಬೆಳವಣಿಗೆಗಳಿಗಾಗಿ ಸ್ಥಳೀಯ ಮಾಧ್ಯಮ ವರದಿಗಳನ್ನು ವೀಕ್ಷಿಸುತ್ತಿರುವಂತೆ ಸೂಚನೆ ನೀಡಲಾಗಿದೆ.
ಭಾರತೀಯ ರಾಯಭಾರ ಕಚೇರಿಯು ನಾಗರಿಕರು ತಮ್ಮ ದಾಖಲೆಗಳನ್ನು ಭದ್ರವಾಗಿ ಇರಿಸಿಕೊಳ್ಳುವಂತೆ ತಿಳಿಸಿದೆ. ಇರಾನ್ನಲ್ಲಿರುವ ಎಲ್ಲಾ ಭಾರತೀಯ ಪ್ರಜೆಗಳು ಪಾಸ್ಪೋರ್ಟ್ಗಳು ಮತ್ತು ಐಡಿಗಳು ಸೇರಿದಂತೆ ತಮ್ಮ ಪ್ರಯಾಣ ಮತ್ತು ವಲಸೆ ದಾಖಲೆಗಳನ್ನು ತಮ್ಮ ಬಳಿ ಹೊಂದಿರಬೇಕು ಎಂದು ವಿನಂತಿಸಲಾಗಿದೆ. ಈ ನಿಟ್ಟಿನಲ್ಲಿ ಯಾವುದೇ ಸಹಾಯಕ್ಕಾಗಿ ಅವರು ಭಾರತೀಯ ರಾಯಭಾರ ಕಚೇರಿಯನ್ನು ಸಂಪರ್ಕಿಸಲು ತಿಳಿಸಲಾಗಿದೆ.
ಮುಂದುವರಿದು ಭಾರತೀಯ ರಾಯಭಾರ ಕಚೇರಿಯ ತುರ್ತು ಸಂಪರ್ಕ ಸಹಾಯವಾಣಿಗಳನ್ನು ಬಿಡುಗಡೆ ಮಾಡಲಾಗಿದೆ. ಮೊಬೈಲ್ ಸಂಖ್ಯೆ +989128109115; +989128109109; +989128109102; +989932179359. ಇಮೇಲ್: [email protected] ಸಂಪರ್ಕಿಸಬಹುದು ಎಂದು ರಾಯಭಾರ ಕಚೇರಿ ತಿಳಿಸಿದೆ. ಭಾರತೀಯ ರಾಯಭಾರ ಕಚೇರಿಯಲ್ಲಿ ಇನ್ನೂ ನೋಂದಾಯಿಸದ ಇರಾನ್ನಲ್ಲಿರುವ ಎಲ್ಲಾ ಭಾರತೀಯ ಪ್ರಜೆಗಳು https://www.meaers.com/request/home ಈ ಲಿಂಕ್ ಅನ್ನು ಬಳಸಲು ರಾಯಭಾರ ಕಚೇರಿ ತಿಳಿಸಿದೆ.
ರಾಯಭಾರ ಕಚೇರಿಯ ವೆಬ್ಸೈಟ್ನಲ್ಲಿಯೂ ಲಿಂಕ್ ಲಭ್ಯವಿದೆ. ಇರಾನ್ನಲ್ಲಿ ಇಂಟರ್ನೆಟ್ ಅಡಚಣೆಗಳಿಂದಾಗಿ ಯಾವುದೇ ಭಾರತೀಯ ಪ್ರಜೆ ನೋಂದಾಯಿಸಲು ಸಾಧ್ಯವಾಗದಿದ್ದರೆ, ಭಾರತದಲ್ಲಿರುವ ಅವರ ಕುಟುಂಬಗಳು ಈ ಲಿಂಕ್ನ ಮೂಲಕ ನೋಂದಾಯಿಸುವುದಕ್ಕೂ ತಿಳಿಸಲಾಗಿದೆ. ಕಳೆದ ಎರಡು ವಾರಗಳಿಂದ ಪ್ರತಿಭಟನೆಗಳಿಂದ ಇರಾನ್ ತತ್ತರಿಸಿದೆ.
ಪ್ರತಿಭಟನಾಕಾರರ ಮೇಲೆ ಇರಾನ್ ಕಠಿಣ ಕ್ರಮ ಕೈಗೊಳ್ಳಲು ಅಂತರರಾಷ್ಟ್ರೀಯ ಒತ್ತಡವನ್ನು ಎದುರಿಸುತ್ತಿದೆ. ಇರಾನ್ನಲ್ಲಿ ನಡೆದ ಪ್ರತಿಭಟನೆಗಳಲ್ಲಿ ಕನಿಷ್ಠ 2,571 ಜನರು ಸಾವನ್ನಪ್ಪಿದ್ದಾರೆ ಎಂದು ಅಮೆರಿಕ ಮೂಲದ ಮಾನವ ಹಕ್ಕುಗಳ ಕಾರ್ಯಕರ್ತರ ಸುದ್ದಿ ಸಂಸ್ಥೆ ವರದಿ ಮಾಡಿದೆ. ಅಲ್ಲಿನ ಸ್ಥಳೀಯ ಆಡಳಿತವನ್ನು ವಿರೋಧಿಸಿ ಜನ ಬೀದಿಗೆ ಇಳಿದಿದ್ದಾರೆ. ಈ ರೀತಿ ಇರುವಾಗ ಇರಾನ್ನ ಮೇಲೆ ಅಮೆರಿಕ ಹಾಗೂ ಇಸ್ರೇಲ್ ಸಹ ದಾಳಿ ಮಾಡುವ ಆತಂಕವೂ ಶುರುವಾಗಿದೆ.
-
19,000 ರೂಪಾಯಿ ತಲುಪುವ ಭೀತಿಯಲ್ಲಿ ಕಚ್ಚಾತೈಲ ಬೆಲೆ, ದಿಢೀರ್ ಪೆಟ್ರೋಲ್ & ಡೀಸೆಲ್ ಸಂಚಲನ... Crude Oil -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ












Click it and Unblock the Notifications