Iran Earthquake: ವಾಯುವ್ಯ ಇರಾನ್ನಲ್ಲಿ ಭೂಕಂಪನ; 7 ಸಾವು, 400 ಕ್ಕೂ ಹೆಚ್ಚು ಗಾಯಾಳು
ವಾಯುವ್ಯ ಇರಾನ್ನಲ್ಲಿ 5.9 ತೀವ್ರತೆಯ ಪ್ರಬಲ ಭೂಕಂಪನವಾಗಿದ್ದು, ಇದುವರೆಗೆಗೂ 7 ಮಂದಿ ಸಾವನ್ನಪ್ಪಿದ್ದು, 440 ಕ್ಕೂ ಹೆಚ್ಚು ಜನ ಗಾಯಾಗೊಂಡಿದ್ದಾರೆ.
ಟೆಹ್ರಾನ್, ಜನವರಿ, 29: ಇರಾನ್ನಲ್ಲಿ ಪ್ರಬಲ ಭೂಕಂಪನವಾಗಿದ್ದು, ರಿಕ್ಟರ್ ಮಾಪಕದಲ್ಲಿ 5.9 ತೀವ್ರತೆ ದಾಖಲಾಗಿದೆ. ವಾಯುವ್ಯ ಇರಾನ್ನ ಇರಾನ್-ಟರ್ಕಿ ಗಡಿಯ ಸಮೀಪವಿರುವ ಖೋಯ್ ನಗರದಲ್ಲಿ ಶನಿವಾರ ರಾತ್ರಿ 9:44 ಕ್ಕೆ (ಸ್ಥಳೀಯ ಕಾಲಮಾನ) ಭೂಕಂಪ ಸಂಭವಿಸಿದೆ.
ಭೂಕಂಪನದಲ್ಲಿ ಇದುವರೆಗೆ ಕನಿಷ್ಠ ಏಳು ಮಂದಿ ಸಾವನ್ನಪ್ಪಿದ್ದಾರೆ ಮತ್ತು 440 ಜನರು ಗಾಯಗೊಂಡಿದ್ದಾರೆ ಎಂದು ಸುದ್ದಿ ಸಂಸ್ಥೆ ಐಆರ್ಎನ್ಎ ವರದಿ ಮಾಡಿದೆ.
ಭೂಕಂಪನ ಸಾಕಷ್ಟು ಪ್ರಬಲವಾಗಿವೆ ಎಂದು ವರದಿಯಾಗಿದ್ದು, ಇರಾನ್ನ ಪಶ್ಚಿಮ ಅಜೆರ್ಬೈಜಾನ್ ಪ್ರಾಂತ್ಯದ ಹಲವು ಪ್ರದೇಶಗಳಲ್ಲಿ, ನೆರೆಯ ಪೂರ್ವ ಅಜೆರ್ಬೈಜಾನ್ನ ಪ್ರಾಂತೀಯ ರಾಜಧಾನಿಯಾದ ತಬ್ರಿಜ್ ಸೇರಿದಂತೆ ಹಲವಾರು ನಗರಗಳಲ್ಲಿಯೂ ಭೂಕಂಪನದ ಅನುಭವವಾಗಿದೆ.

ಯುನೈಟೆಡ್ ಸ್ಟೇಟ್ಸ್ ಜಿಯೋಲಾಜಿಕಲ್ ಸರ್ವೆ (ಯುಎಸ್ಜಿಎಸ್) ಪ್ರಕಾರ ಭೂಕಂಪವು 10 ಕಿಮೀ ಆಳದಲ್ಲಿ ಖೋಯ್ನಿಂದ 14 ಕಿಮೀ ದಕ್ಷಿಣ-ನೈಋತ್ಯಕ್ಕೆ ಅಪ್ಪಳಿಸಿದೆ.
ಜೊತೆಗೆ ಇರಾನ್ನ ಕೇಂದ್ರ ನಗರವಾದ ಇಸ್ಫಹಾನ್ನಲ್ಲಿರುವ ಮಿಲಿಟರಿ ಸ್ಥಾವರದಲ್ಲೂ ಸಹ ದೊಡ್ಡ ಸ್ಫೋಟ ಸಂಭವಿಸಿದೆ. ದೇಶದ ರಕ್ಷಣಾ ಸಚಿವಾಲಯವನ್ನು ಉಲ್ಲೇಖಿಸಿ, ಇರಾನ್ನ ಮಾಧ್ಯಮವೊಂದು ಇದು ವಿಫಲ ಡ್ರೋನ್ ದಾಳಿ ಎಂದು ಹೇಳಿಕೊಂಡಿದೆ.
ಈ ಮೊದಲು ಜುಲೈ 2022 ರಲ್ಲಿ ದಕ್ಷಿಣ ಇರಾನ್ನಲ್ಲಿ 6.3 ತೀವ್ರತೆಯ ಭೂಕಂಪನ ಉಂಟಾಗಿ ಐದು ಮಂದಿ ಸಾವನ್ನಪ್ಪಿದರು ಮತ್ತು 44 ಜನರು ಗಾಯಗೊಂಡಿದ್ದರು. ಹೊರ್ಮೊಜ್ಗಾನ್ ಪ್ರಾಂತ್ಯದ ಸಯೆಹ್ ಖೋಶ್ ಗ್ರಾಮ ಭೂಕಂಪನದ ಕೇಂದ್ರಬಿಂದುವಾಗಿತ್ತು. ನೆರೆಯ ಹಲವು ದೇಶಗಳಲ್ಲಿ ಭೂಕಂಪದ ಅನುಭವವಾಗಿದೆ ಎಂದು ವರದಿ ತಿಳಿಸಿದೆ.

ಇಲ್ಲಿ ಗಮನಿಸಬೇಕಾದ ಸಂಗತಿಯೆಂದರೆ, ಇರಾನ್ನಲ್ಲಿ ಸರಾಸರಿ ದಿನಕ್ಕೆ ಒಂದು ಭೂಕಂಪನ ಉಂಟಾಗುತ್ತದೆ. 2003 ರಲ್ಲಿ, 6.6 ತೀವ್ರತೆಯ ಭೂಕಂಪವು ಐತಿಹಾಸಿಕ ನಗರವಾದ ಬಾಮ್ ಅನ್ನು ನೆಲಸಮಗೊಳಿಸಿತು. ಇದರಲ್ಲಿ 26,000 ಜನರು ಸಾವನ್ನಪ್ಪಿದರು. 2017 ರಲ್ಲಿ ಪಶ್ಚಿಮ ಇರಾನ್ನಲ್ಲಿ ಸಂಭವಿಸಿದ 7 ತೀವ್ರತೆಯ ಭೂಕಂಪದಲ್ಲಿ 600 ಕ್ಕೂ ಹೆಚ್ಚು ಜನರು ಸಾವನ್ನಪ್ಪಿ, 9,000 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications