ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬಂಧನಕ್ಕೆ ವಾರೆಂಟ್ ಹೊರಡಿಸಿದ ಇರಾನ್
ತೆಹ್ರಾನ್, ಜೂನ್ 29: ವಿಶ್ವದ ದೊಡ್ಡಣ್ಣ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ರವನ್ನೇ ಬಂಧಿಸಲು ಇರಾನ್ ಹವಣಿಸುತ್ತಿದ್ದು, ಟ್ರಂಪ್ ಬಂಧನಕ್ಕಾಗಿ ಇರಾನ್ ವಾರೆಂಟ್ ಹೊರಡಿಸಿದೆ. ಅಲ್ಲದೆ ಇಂಟರ್ ಪೋಲ್ ಸಹಾಯವನ್ನು ಕೇಳಿದೆ.
ಬಾಗ್ದಾದ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇದೇ ವರ್ಷ ಜನವರಿಯಲ್ಲಿ ಡ್ರೋನ್ ದಾಳಿ ನಡೆಸಿ ಜನರಲ್ ಸೂಲೈಮನ್ ಮತ್ತಿತರ ಸಾವಿಗೆ ಕಾರಣವಾಗಿರುವ ಡೊನಾಲ್ಡ್ ಟ್ರಂಪ್ ಹಾಗೂ ಇತರ ಡಜನ್ ವ್ಯಕ್ತಿಗಳ ವಿರುದ್ಧ ಬಂಧನದ ವಾರೆಂಟ್ ಹೊರಡಿಸಲಾಗಿದೆ ಎಂದು ಸ್ಥಳೀಯ ಪ್ರಾಸಿಕ್ಯೂಟರ್ ಒಬ್ಬರು ಇಂದು ಹೇಳಿದ್ದಾರೆ ಎಂದು ಅಲ್ ಜಜೀರಾ ಸುದ್ದಿ ಮಾಡಿದೆ.
ಜನವರಿಯಲ್ಲಿ ಮೂರು ದಾಳಿ ನಡೆಸಿ ಜನರಲ್ ಆಗಿದ್ದ ಖಾಸಿಂ ಸೂಲೈಮನ್ ಹತ್ಯೆಗೆ ಸಂಬಂಧಿಸಿದಂತೆ ಡೊನಾಲ್ಡ್ ಟ್ರಂಪ್ ಹಾಗೂ ಇತರ 30ಕ್ಕೂ ಹೆಚ್ಚು ಮಂದಿಯನ್ನು ಆರೋಪಿಗಳನ್ನಾಗಿ ಇರಾನ್ ಹತ್ಯೆ ಮಾಡಿದ್ದು, ಭ್ರಷ್ಟಾಚಾರ ಪ್ರಕರಣಗಳನ್ನು ಎದುರಿಸಬೇಕಾಗುತ್ತದೆ ಎಂದು ತೆಹ್ರನ್ ಪ್ರಾಸಿಕ್ಯೂಟರ್ ಅಲಿ ಅಲ್ಕಾಸಿ ಮೆಹ್ರ್ ಹೇಳಿರುವುದಾಗಿ ಐಎಸ್ಎನ್ ಎ ಸುದ್ದಿಸಂಸ್ಥೆ ಸೋಮವಾರ ವರದಿ ಮಾಡಿದೆ.

ಟ್ರಂಪ್ ಹೊರತುಪಡಿಸಿ ಬೇರೆಯವರನ್ನು ಅಲ್ಕಾಸಿಮೆಹರ್ ಗುರುತಿಸಲಿಲ್ಲ, ಆದರೆ, ಟ್ರಂಪ್ ಅಧ್ಯಕ್ಷ ಸ್ಥಾನ ಮುಗಿದ ನಂತರವೂ ಇರಾನ್ ತನ್ನ ಪ್ರಕರಣವನ್ನು ಮುಂದುವರೆಸಲಿದೆ ಎಂದು ಅಲಿ ಹೇಳಿದ್ದಾರೆ. ಟ್ರಂಪ್ ಮತ್ತು ಇತರರಿಗೆ "ರೆಡ್ ನೋಟಿಸ್" ನೀಡಬೇಕೆಂದು ಇರಾನ್ ಕೋರಿದೆ ಎಂದು ಅಲ್ಕಾಸಿಮೆಹ್ರ್ ಹೇಳಿದ್ದಾರೆ.
ಫ್ರಾನ್ಸ್ನ ಲಿಯಾನ್ ಮೂಲದ ಇಂಟರ್ ಪೋಲ್ ತತ್ ಕ್ಷಣಕ್ಕೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಜೊತೆಗೆ ಅಮೆರಿಕದ ಇರಾನ್ ರಾಯಭಾರಿ ಬ್ರಿಯಾನ್ ಹುಕ್ ಈ ಕ್ರಮವನ್ನು "ಪ್ರಚಾರದ ಸಾಹಸ" ಎಂದು ಬಣ್ಣಿಸಿದ್ದಾರೆ.
-
ಉತ್ತರ ಕೊರಿಯಾ ಸರ್ವಾಧಿಕಾರಿ ವರ್ತನೆಗೆ ಬೆಚ್ಚಿಬಿದ್ದ ಜಪಾನ್ ಮತ್ತು ದಕ್ಷಿಣ ಕೊರಿಯಾ | Kim Jong Un -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei -
ಇರಾನ್ ವಿರುದ್ಧ ಮತ್ತಷ್ಟು ದಾಳಿಗೆ ಸಿದ್ಧವಾದ ಇಸ್ರೇಲ್, ಹೊಸ ತಂತ್ರದ ಮೊರೆ | Operation Roaring Lion -
ಭಾರತದಲ್ಲಿ ಬಗೆಹರಿಯಲಿದೆ ಎಲ್ಪಿಜಿ ಸಮಸ್ಯೆ, ನೀವು ನಮ್ಮ ಗೆಳೆಯ ಎಂದು ಕರೆದ ಇರಾನ್... Donald Trump -
ಇರಾನ್ ವಿರುದ್ಧ ಇನ್ನಷ್ಟು ಭೀಕರ ಕಾರ್ಯಾಚರಣೆಗೆ ಅಮೆರಿಕ ಸಿದ್ಧತೆ, ಮತ್ತಷ್ಟು ಅಸ್ತ್ರಗಳು ರವಾನೆ ಸಾಧ್ಯತೆ | Donald Trump -
ಇರಾನ್ ನೂತನ ಸರ್ವಾಧಿಕಾರಿ ಬಗ್ಗೆ ಅಮೆರಿಕ ಅಧ್ಯಕ್ಷ ಟ್ರಂಪ್ ಮಹತ್ವದ ಹೇಳಿಕೆ | Donald Trump -
ತೈವಾನ್ ಕರಾವಳಿಗೆ ನುಗ್ಗಿದ ಚೀನಾ ಹಡಗುಗಳು, ವಿಚಿತ್ರ ವರ್ತನೆ ಕಂಡು ಬೆಚ್ಚಿಬಿದ್ದ ಜಗತ್ತು | China Boats -
ಎಲ್ಪಿಜಿ ನಂತರ ಅಡುಗೆ ಎಣ್ಣೆ ವಿಚಾರದಲ್ಲೂ ಶುರುವಾಯ್ತು ದೊಡ್ಡ ಟೆನ್ಷನ್... Cooking Oil -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು












Click it and Unblock the Notifications