Iran President Death: ಹೆಲಿಕಾಪ್ಟರ್ ಅಪಘಾತದಲ್ಲಿ ಇರಾನ್ ಅಧ್ಯಕ್ಷರ ಸಾವು!
ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಭೀಕರ ಸಾವು ಕಂಡಿದ್ದು, ಹೆಲಿಕಾಪ್ಟರ್ ದುರಂತದಲ್ಲಿ ಇಬ್ರಾಹಿಂ ರೈಸಿ ಅವರು ಮೃತಪಟ್ಟಿದ್ದಾರೆ ಎಂದು ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. ಈ ಮೂಲಕ ಮಧ್ಯಪ್ರಾಚ್ಯ ಮತ್ತೊಮ್ಮೆ ಬೆಂಕಿಯ ಕೆಂಡವಾಗಿದ್ದು, ನಿನ್ನೆಯಷ್ಟೇ ಇಬ್ರಾಹಿಂ ರೈಸಿ ಅವರು ತೆರಳುತ್ತಿದ್ದ ಹೆಲಿಕಾಪ್ಟರ್ ದಟ್ಟವಾದ ಅರಣ್ಯ ಪ್ರದೇಶದಲ್ಲಿ ನಾಪತ್ತೆಯಾಗಿತ್ತು.
ಇಸ್ರೇಲ್ & ಇರಾನ್ ನಡುವೆ ಯುದ್ಧದ ವಾತಾವರಣ ನಿರ್ಮಾಣ ಆಗಿರುವ ಸಮಯದಲ್ಲೇ, ಈ ರೀತಿಯ ಘಟನೆ ನಡೆದಿದೆ. ಇರಾನ್ನ ಅಧ್ಯಕ್ಷ ಇಬ್ರಾಹಿಂ ರೈಸಿ ಜೊತೆಗೆ ಈ ಹೆಲಿಕಾಪ್ಟರ್ ದುರಂತದಲ್ಲಿ ಇರಾನ್ ವಿದೇಶಾಂಗ ವ್ಯವಹಾರಗಳ ಸಚಿವ ಅಮೀರ್ ಅಬ್ದೊಲ್ಲಾಹಿಯಾನ್ & ಇರಾನ್ನ ಅಧಿಕಾರಿಗಳು ಮೃತಪಟ್ಟಿದ್ದಾರೆ ಎಂದು ಘೋಷಣೆ ಮಾಡಲಾಗಿದೆ. ನಿನ್ನೆ ಘಟನೆ ನಡೆದಿತ್ತು, ಮೊದಲಿಗೆ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಇರುವ ಹೆಲಿಕಾಪ್ಟರ್ ಅಪಘಾತಕ್ಕೆ ತುತ್ತಾಗಿದೆ ಎನ್ನಲಾಗಿತ್ತು. ಅಜೆರ್ಬೈಜಾನ್ ಗಡಿಯ, ಗುಡ್ಡಗಾಡು ಪ್ರದೇಶದಲ್ಲಿ ಘಟನೆಯು ಸಂಭವಿಸಿತ್ತು ಎನ್ನಲಾಗಿತ್ತು.

ಅಪಘಾತಕ್ಕೆ ಕಾರಣ ಏನು?
ಹೆಲಿಕಾಪ್ಟರ್ ದುರತಂದ ಸುದ್ದಿ ಕಾಡ್ಗಿಚ್ಚಿನ ರೀತಿ ಹಬ್ಬಿದ್ದು, ಇಡೀ ಜಗತ್ತಿನಾದ್ಯಂತ ಇದೀಗ ಈ ಬಗ್ಗೆ ದೊಡ್ಡ ಮಟ್ಟದ ಚರ್ಚೆ ನಡೆಯುತ್ತಿದೆ. ಯಾಕಂದ್ರೆ ಈ ದುರಂತ ಮಧ್ಯಪ್ರಾಚ್ಯದ ಪರಿಸ್ಥಿತಿ ಮತ್ತಷ್ಟು ಸೂಕ್ಷ್ಮವಾಗುವಂತೆ ಮಾಡಿದೆ. ಇಲ್ಲಿ ಅಪಘಾತಕ್ಕೂ ಮುನ್ನ ಹೆಲಿಕಾಪ್ಟರ್ ನಿಯಂತ್ರಣ ಘಟಕದ ಸಂಪರ್ಕ ಕಡಿದುಕೊಂಡಿದ್ದು, ವೇಗವಾಗಿ ಭೂಮಿಗೆ ಅಪ್ಪಳಿಸಿದೆ ಎಂದು ಹೇಳಲಾಗಿದೆ. ಹಾಗೇ ಈ ದುರಂತಕ್ಕೆ ಹೆಲಿಕಾಪ್ಟರ್ನ ತಾಂತ್ರಿಕ ದೋಷ ಕಾರಣ ಎನ್ನಲಾಗಿದೆ. ಮತ್ತೊಂದು ಕಡೆ ಇರಾನ್ ದೇಶದಲ್ಲಿ ಈಗ ಹೈಅಲರ್ಟ್ ಘೋಷಣೆ ಮಾಡಲಾಗಿದೆ.
ಮಂಜು ಮುಸುಕಿದ ವಾತಾವರಣ
ಇನ್ನು ಹೆಲಿಕಾಪ್ಟರ್ ನಾಪತ್ತೆ ಆಗಿರುವ ಗುಡ್ಡ ಗಾಡಿನಲ್ಲಿ ದಟ್ಟ ಮಂಜು ಮಸುಕಿದ್ದು, ಶೋಧ & ರಕ್ಷಣಾ ತಂಡಗಳ ಕಾರ್ಯಾಚರಣೆ ಕಷ್ಟವಾಗುತ್ತಿದೆ ಎನ್ನಲಾಗಿದೆ. ಹೀಗಿದ್ದರೂ ಕಾರ್ಯಾಚರಣೆ ವೇಗ ಪಡೆದುಕೊಂಡಿದೆ. ಇನ್ನು ಹೆಲಿಕಾಪ್ಟರ್ ಜೋಲ್ಫಾ ವಲಯದಲ್ಲಿ ಅಪಘಾತಕ್ಕೀಡಾಗಿದೆ, ಈ ಬಗ್ಗೆ ತನಿಖೆ ಆರಂಭವಾಗಿದೆ ಎಂದು ವರದಿಯಾಗಿದೆ. ಅಜೆರ್ಬೈಜಾನ್ನ ಅರಾಸ್ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಡ್ಯಾಂ ಉದ್ಘಾಟನೆಗೆ ರೈಸಿ ಅವರು ಅತಿಥಿಯಾಗಿ ಹೋಗಿದ್ದರು. ಆದ್ರೆ ಇದೇ ಸಮಯದಲ್ಲಿ ಭೀಕರ ದುರಂತ ನಡೆದಿರುವುದು ಪರಿಸ್ಥಿತಿಯನ್ನ ಮತ್ತಷ್ಟು ಆತಂಕಕ್ಕೆ ದೂಡಿದೆ.
ಇಸ್ರೇಲ್ ವಿರುದ್ಧ ಇರಾನ್ ಯುದ್ಧ?
ಒಟ್ನಲ್ಲಿ ಮಧ್ಯಪ್ರಾಚ್ಯದ ಪರಿಸ್ಥಿತಿ ಈಗ ಮತ್ತಷ್ಟು ಸೂಕ್ಷ್ಮವಾಗಿದ್ದು, ಈ ಘಟನೆ ಇಸ್ರೇಲ್ & ಇರಾನ್ ನಡುವೆ ಮತ್ತೊಮ್ಮೆ ಕಿಚ್ಚು ಹೊತ್ತಿಸುವ ಆತಂಕ ಮೂಡಿಸಿದೆ. ಯಾಕಂದ್ರೆ ಇತ್ತೀಚೆಗೆ ಇಸ್ರೇಲ್ ವಿರುದ್ಧ ಇರಾನ್ ಕ್ಷಿಪಣಿ ದಾಳಿ ನಡೆಸಿತ್ತು. ಇದೀಗ ಸ್ವತಃ ಇರಾನ್ ಅಧ್ಯಕ್ಷರೇ ಈ ರೀತಿ ಹೆಲಿಕಾಪ್ಟರ್ನಲ್ಲಿ ಪ್ರಯಾಣ ಮಾಡುವಾಗ ಮೃತಪಟ್ಟಿದ್ದು ಸಂಚಲನ ಸೃಷ್ಟಿಸಿದೆ. ಈ ನಡುವೆ ಇಸ್ರೇಲ್ ವಿರುದ್ಧ ಇರಾನ್ ಮತ್ತೊಮ್ಮೆ ಸೇನಾ ಕಾರ್ಯಾಚರಣೆಗೆ ಮುಂದಾಗುವ ಭಯ ಕೂಡ ಆವರಿಸಿದೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications