Iran President Death: ಹೆಲಿಕಾಪ್ಟರ್ ಅಪಘಾತದಲ್ಲಿ ಇರಾನ್ ಅಧ್ಯಕ್ಷರ ಸಾವು!
ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಭೀಕರ ಸಾವು ಕಂಡಿದ್ದು, ಹೆಲಿಕಾಪ್ಟರ್ ದುರಂತದಲ್ಲಿ ಇಬ್ರಾಹಿಂ ರೈಸಿ ಅವರು ಮೃತಪಟ್ಟಿದ್ದಾರೆ ಎಂದು ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. ಈ ಮೂಲಕ ಮಧ್ಯಪ್ರಾಚ್ಯ ಮತ್ತೊಮ್ಮೆ ಬೆಂಕಿಯ ಕೆಂಡವಾಗಿದ್ದು, ನಿನ್ನೆಯಷ್ಟೇ ಇಬ್ರಾಹಿಂ ರೈಸಿ ಅವರು ತೆರಳುತ್ತಿದ್ದ ಹೆಲಿಕಾಪ್ಟರ್ ದಟ್ಟವಾದ ಅರಣ್ಯ ಪ್ರದೇಶದಲ್ಲಿ ನಾಪತ್ತೆಯಾಗಿತ್ತು.
ಇಸ್ರೇಲ್ & ಇರಾನ್ ನಡುವೆ ಯುದ್ಧದ ವಾತಾವರಣ ನಿರ್ಮಾಣ ಆಗಿರುವ ಸಮಯದಲ್ಲೇ, ಈ ರೀತಿಯ ಘಟನೆ ನಡೆದಿದೆ. ಇರಾನ್ನ ಅಧ್ಯಕ್ಷ ಇಬ್ರಾಹಿಂ ರೈಸಿ ಜೊತೆಗೆ ಈ ಹೆಲಿಕಾಪ್ಟರ್ ದುರಂತದಲ್ಲಿ ಇರಾನ್ ವಿದೇಶಾಂಗ ವ್ಯವಹಾರಗಳ ಸಚಿವ ಅಮೀರ್ ಅಬ್ದೊಲ್ಲಾಹಿಯಾನ್ & ಇರಾನ್ನ ಅಧಿಕಾರಿಗಳು ಮೃತಪಟ್ಟಿದ್ದಾರೆ ಎಂದು ಘೋಷಣೆ ಮಾಡಲಾಗಿದೆ. ನಿನ್ನೆ ಘಟನೆ ನಡೆದಿತ್ತು, ಮೊದಲಿಗೆ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಇರುವ ಹೆಲಿಕಾಪ್ಟರ್ ಅಪಘಾತಕ್ಕೆ ತುತ್ತಾಗಿದೆ ಎನ್ನಲಾಗಿತ್ತು. ಅಜೆರ್ಬೈಜಾನ್ ಗಡಿಯ, ಗುಡ್ಡಗಾಡು ಪ್ರದೇಶದಲ್ಲಿ ಘಟನೆಯು ಸಂಭವಿಸಿತ್ತು ಎನ್ನಲಾಗಿತ್ತು.

ಅಪಘಾತಕ್ಕೆ ಕಾರಣ ಏನು?
ಹೆಲಿಕಾಪ್ಟರ್ ದುರತಂದ ಸುದ್ದಿ ಕಾಡ್ಗಿಚ್ಚಿನ ರೀತಿ ಹಬ್ಬಿದ್ದು, ಇಡೀ ಜಗತ್ತಿನಾದ್ಯಂತ ಇದೀಗ ಈ ಬಗ್ಗೆ ದೊಡ್ಡ ಮಟ್ಟದ ಚರ್ಚೆ ನಡೆಯುತ್ತಿದೆ. ಯಾಕಂದ್ರೆ ಈ ದುರಂತ ಮಧ್ಯಪ್ರಾಚ್ಯದ ಪರಿಸ್ಥಿತಿ ಮತ್ತಷ್ಟು ಸೂಕ್ಷ್ಮವಾಗುವಂತೆ ಮಾಡಿದೆ. ಇಲ್ಲಿ ಅಪಘಾತಕ್ಕೂ ಮುನ್ನ ಹೆಲಿಕಾಪ್ಟರ್ ನಿಯಂತ್ರಣ ಘಟಕದ ಸಂಪರ್ಕ ಕಡಿದುಕೊಂಡಿದ್ದು, ವೇಗವಾಗಿ ಭೂಮಿಗೆ ಅಪ್ಪಳಿಸಿದೆ ಎಂದು ಹೇಳಲಾಗಿದೆ. ಹಾಗೇ ಈ ದುರಂತಕ್ಕೆ ಹೆಲಿಕಾಪ್ಟರ್ನ ತಾಂತ್ರಿಕ ದೋಷ ಕಾರಣ ಎನ್ನಲಾಗಿದೆ. ಮತ್ತೊಂದು ಕಡೆ ಇರಾನ್ ದೇಶದಲ್ಲಿ ಈಗ ಹೈಅಲರ್ಟ್ ಘೋಷಣೆ ಮಾಡಲಾಗಿದೆ.
ಮಂಜು ಮುಸುಕಿದ ವಾತಾವರಣ
ಇನ್ನು ಹೆಲಿಕಾಪ್ಟರ್ ನಾಪತ್ತೆ ಆಗಿರುವ ಗುಡ್ಡ ಗಾಡಿನಲ್ಲಿ ದಟ್ಟ ಮಂಜು ಮಸುಕಿದ್ದು, ಶೋಧ & ರಕ್ಷಣಾ ತಂಡಗಳ ಕಾರ್ಯಾಚರಣೆ ಕಷ್ಟವಾಗುತ್ತಿದೆ ಎನ್ನಲಾಗಿದೆ. ಹೀಗಿದ್ದರೂ ಕಾರ್ಯಾಚರಣೆ ವೇಗ ಪಡೆದುಕೊಂಡಿದೆ. ಇನ್ನು ಹೆಲಿಕಾಪ್ಟರ್ ಜೋಲ್ಫಾ ವಲಯದಲ್ಲಿ ಅಪಘಾತಕ್ಕೀಡಾಗಿದೆ, ಈ ಬಗ್ಗೆ ತನಿಖೆ ಆರಂಭವಾಗಿದೆ ಎಂದು ವರದಿಯಾಗಿದೆ. ಅಜೆರ್ಬೈಜಾನ್ನ ಅರಾಸ್ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಡ್ಯಾಂ ಉದ್ಘಾಟನೆಗೆ ರೈಸಿ ಅವರು ಅತಿಥಿಯಾಗಿ ಹೋಗಿದ್ದರು. ಆದ್ರೆ ಇದೇ ಸಮಯದಲ್ಲಿ ಭೀಕರ ದುರಂತ ನಡೆದಿರುವುದು ಪರಿಸ್ಥಿತಿಯನ್ನ ಮತ್ತಷ್ಟು ಆತಂಕಕ್ಕೆ ದೂಡಿದೆ.
ಇಸ್ರೇಲ್ ವಿರುದ್ಧ ಇರಾನ್ ಯುದ್ಧ?
ಒಟ್ನಲ್ಲಿ ಮಧ್ಯಪ್ರಾಚ್ಯದ ಪರಿಸ್ಥಿತಿ ಈಗ ಮತ್ತಷ್ಟು ಸೂಕ್ಷ್ಮವಾಗಿದ್ದು, ಈ ಘಟನೆ ಇಸ್ರೇಲ್ & ಇರಾನ್ ನಡುವೆ ಮತ್ತೊಮ್ಮೆ ಕಿಚ್ಚು ಹೊತ್ತಿಸುವ ಆತಂಕ ಮೂಡಿಸಿದೆ. ಯಾಕಂದ್ರೆ ಇತ್ತೀಚೆಗೆ ಇಸ್ರೇಲ್ ವಿರುದ್ಧ ಇರಾನ್ ಕ್ಷಿಪಣಿ ದಾಳಿ ನಡೆಸಿತ್ತು. ಇದೀಗ ಸ್ವತಃ ಇರಾನ್ ಅಧ್ಯಕ್ಷರೇ ಈ ರೀತಿ ಹೆಲಿಕಾಪ್ಟರ್ನಲ್ಲಿ ಪ್ರಯಾಣ ಮಾಡುವಾಗ ಮೃತಪಟ್ಟಿದ್ದು ಸಂಚಲನ ಸೃಷ್ಟಿಸಿದೆ. ಈ ನಡುವೆ ಇಸ್ರೇಲ್ ವಿರುದ್ಧ ಇರಾನ್ ಮತ್ತೊಮ್ಮೆ ಸೇನಾ ಕಾರ್ಯಾಚರಣೆಗೆ ಮುಂದಾಗುವ ಭಯ ಕೂಡ ಆವರಿಸಿದೆ.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ












Click it and Unblock the Notifications