2,000 ಜನರ ದಿಢೀರ್ ಸಾವು, ಭಾರತಕ್ಕೆ ತೈಲ ಸರಬರಾಜು ಮಾಡುವ ದೇಶದಲ್ಲಿ ಇದೇನಿದು ರಕ್ತಪಾತ? Iran Protests
ಮಧ್ಯಪ್ರಾಚ್ಯ ಭಾಗದಲ್ಲಿ ಒಂದಲ್ಲ ಒಂದು ವಿಚಾರಕ್ಕೆ ಗಲಾಟೆ ಆಗುತ್ತಲೇ ಇದೆ, ಒಂದು ಕಡೆ ಗಾಜಾ ಪಟ್ಟಿ ಹಾಗೂ ಇಸ್ರೇಲ್ ನಡುವೆ ಯುದ್ಧ ನಡೆಯುತ್ತಿದೆ. ಇನ್ನೊಂದು ಕಡೆ ಸಿರಿಯಾ ಆಂತರಿಕ ಕಲಹ ನಿಂತಿಲ್ಲ, ಯೆಮೆನ್ ಕೂಡ ಧಗಧಗ ಅಂತಿದೆ. ಇಂತಹ ಸಮಯದಲ್ಲಿ ಇವರೆಲ್ಲರನ್ನೂ ಮೀರಿಸಿರುವ ಇರಾನ್ ಹಿಂಸೆಯ ಸುಳಿಯಲ್ಲಿ ಸಿಲುಕಿದೆ. ಇರಾನ್ ಸರ್ವಾಧಿಕಾರಿಗಳ ವಿರುದ್ಧ ಅಲ್ಲಿನ ಜನರು ಈಗ ರೊಚ್ಚಿಗೆದ್ದು ಹೋರಾಟ ಆರಂಭಿಸಿ ಹಲವು ದಿನಗಳೇ ಕಳೆದಿದೆ. ಹೀಗಿದ್ದಾಗ ಹಿಂಸಾಚಾರ ಭುಗಿಲೆದ್ದು 2,000 ಜನರ ದಿಢೀರ್ ಸಾವು ಸಂಭವಿಸಿದೆ.
ಜಗತ್ತಿನ ಪ್ರಮುಖ ತೈಲ ಸರಬರಾಜು ದೇಶಗಳ ಪೈಕಿ ಒಂದಾಗಿರುವ ಇರಾನ್ ದೇಶದಲ್ಲಿ, ಹಣದುಬ್ಬರ ಸೇರಿದಂತೆ ಹಲವು ಆಂತರಿಕ ಸಮಸ್ಯೆಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿ ಹೋರಾಟವನ್ನು ಶುರು ಮಾಡಿದ್ದರು. ಹೀಗೆ ಶುರುವಾಗಿದ್ದ ಪ್ರತಿಭಟನೆ ಸಾವಿರಾರು ಜನರ ಜೀವ ಬಲಿ ಪಡೆಯುತ್ತಿದೆ. ಇರಾನ್ನಲ್ಲಿ ನಡೆಯುತ್ತಿರುವ ಪ್ರತಿಭಟನೆ ವೇಳೆ ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 2,000 ಜನರು ಜೀವ ಬಿಟ್ಟಿದ್ದಾರೆ ಎಂದು ಇರಾನ್ ಅಧಿಕಾರಿ ಮಾಹಿತಿ ನೀಡಿದ್ದಾರೆ. ಸುಮಾರು 15 ದಿನ ಅಂದರೆ 2 ವಾರಗಳಿಂದ ಈ ರೀತಿ ಪ್ರತಿಭಟನೆಗಳು ನಡೆಯುತ್ತಿವೆ. ಇಡೀ ಇರಾನ್ ದೇಶದಲ್ಲಿ ಅಶಾಂತಿ ಮೂಡಿದ್ದು, ಭಾರಿ ಘೋರ ಅನಾಹುತಗಳು ಸಂಭವಿಸುತ್ತಿವೆ.

ಭಯೋತ್ಪಾದಕರ ದಾಳಿ ಅಂತಿದೆ ಇರಾನ್
ಹಿಂಸಾಚಾರ ಹಾಗೂ ಸಾವಿನ ಸಂಖ್ಯೆ ಕುರಿತು ರಾಯಿಟರ್ಸ್ ಜೊತೆ ಮಾತನಾಡಿರುವ ಇರಾನ್ ಅಧಿಕಾರಿ ಒಬ್ಬರು, ಪ್ರತಿಭಟನಾಕಾರರು ಮತ್ತು ಭದ್ರತಾ ಸಿಬ್ಬಂದಿ ಸಾವಿನ ಹಿಂದೆ ಭಯೋತ್ಪಾದಕರು ಇದ್ದಾರೆಂಬ ಆರೋಪ ಮಾಡಿರುವುದು ಮತ್ತಷ್ಟು ತಲ್ಲಣ ಸೃಷ್ಟಿಸಿದೆ. ಆದರೆ ಯಾರೆಲ್ಲಾ ಸತ್ತಿದ್ದಾರೆ? ಹೇಗೆಲ್ಲಾ ಈ ಹಿಂಸಾಚಾರ ಸಂಭವಿಸಿದೆ ಎಂಬ ಬಗ್ಗೆ ಇನ್ನೂ ಸಂಪೂರ್ಣ ಮಾಹಿತಿ ಹೊರಹಾಕಿಲ್ಲ ಇರಾನ್ ದೇಶದ ಅಧಿಕಾರಿಗಳು. ಕಳೆದ ವರ್ಷ ಇಸ್ರೇಲ್ ಮತ್ತು ಅಮೆರಿಕ ಸೇನೆಗಳ ದಾಳಿ ಎದುರಿಸಿದ್ದ ಇರಾನ್ ಇದೀಗ ಆಂತರಿಕ ಕಲಹ ನಿಭಾಯಿಸಲು ಒದ್ದಾಡುವ ವಾತಾವರಣ ನಿರ್ಮಾಣ ಆಗಿದೆ. ಆದರೆ ಖುದ್ದು ಇರಾನ್ ಸರ್ಕಾರವೇ ಈ ಹತ್ಯೆಗಳನ್ನ ಮಾಡಿದೆ ಎಂಬುದು ಇರಾನ್ ಶತ್ರು ದೇಶಗಳ ಆರೋಪ.
ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
ಮತ್ತೊಂದು ಕಡೆ ಭೀಕರ ಆರ್ಥಿಕ ಪರಿಸ್ಥಿತಿ ಪರಿಣಾಮ ಉಂಟಾದ ಅಶಾಂತಿ 1979ರ ಕ್ರಾಂತಿಯ ನಂತರ ಅಧಿಕಾರಕ್ಕೆ ಬಂದಿರುವ ನಾಯಕರ ವಿರುದ್ಧ ಇರಾನ್ ಜನರು ಆಕ್ರೋಶಗೊಳ್ಳುವಂತೆ ಮಾಡಿದೆ. ಆದರೆ ಈ ತಿಕ್ಕಾಟದ ಹಿಂದೆ ನಮ್ಮ ಶತ್ರು ದೇಶಗಳು ಇವೆ ಎಂಬ ಆರೋಪ ಇರಾನ್ ಮಾಡುತ್ತಿದೆ. ಇದೆಲ್ಲಾ ಮೀರಿ ಈಗ ಪ್ರತಿಭಟನೆಗಳು ನಡೆಯುವ ಸಮಯದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆಗುತ್ತಿದ್ದು, ಅದರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹ ಮಾಡಲಾಗುತ್ತಿದೆ. ಇಂಟರ್ನೆಟ್ ಕಟ್ ಆಗಿದ್ದು, ಜನರ ನಡುವೆ ಮಾಹಿತಿ ಹಂಚಿಕೆ ಕ್ಷೀಣಿಸಿದೆ. ಇಷ್ಟಾದರೂ ಹೋರಾಟ ಮಾತ್ರ ಮತ್ತಷ್ಟು ತೀವ್ರವಾಗಿ ಹಿಂಸೆ ಭುಗಿಲೇಳುತ್ತಿದೆ. ಹಿಂಸಾಚಾರದ ವಿಡಿಯೋಗಳು ಸೋಷಿಯಲ್ ಮೀಡಿಯಾಗಳಲ್ಲಿ ಈಗ ವೈರಲ್ ಆಗುತ್ತಿವೆ.
-
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ












Click it and Unblock the Notifications